ಕೈ ಸಮಾವೇಶದಲ್ಲಿ ಖಾಲಿ ಕುರ್ಚಿ ಫೋಟೋ ಚಿತ್ರೀಕರಿಸಿದಕ್ಕೆ ಹಲ್ಲೆ

Public TV
1 Min Read
CONGRESS

ಚೆನ್ನೈ: ತಮಿಳುನಾಡಿನ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಖಾಲಿ ಕುರ್ಚಿಗಳ ಫೋಟೋ ತೆಗೆದಿದಕ್ಕೆ ಪತ್ರಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ.

ತಮಿಳುನಾಡಿನ ವಾರಪತ್ರಿಕೆಯೊಂದರ ಫೋಟೋ ಜರ್ನಲಿಸ್ಟ್ ಕಾಂಗ್ರೆಸ್ ಸಮಾವೇಶದಲ್ಲಿ ಜನರು ಭಾಗವಹಿಸದೆ ಖಾಲಿ ಉಳಿದಿದ್ದ ಕುರ್ಚಿಗಳ ಫೋಟೋ ತೆಗೆಯುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

ತಮಿಳುನಾಡಿನ ವಿರುಧುನಗರ್ ಜಿಲ್ಲೆಯಲ್ಲಿ ಶನಿವಾರ ಸಂಜೆ ಸಮಾವೇಶ ಏರ್ಪಡಿಸಲಾಗಿತ್ತು. ಆದರೆ ಕಾರ್ಯಾಕ್ರಮ ಆರಂಭ ಮುನ್ನ ಸ್ಥಳದಲ್ಲಿ ಕೆಲ ಮಂದಿಯಷ್ಟೇ ಹಾಜರಿದ್ದರು. ಇದನ್ನು ಪತ್ರಕರ್ತ ವರದಿ ಮಾಡಲು ಮುಂದಾಗಿದ್ದರು. ಆದರೆ ಇದಕ್ಕೆ ಆಪ್ಷೇಕ ವ್ಯಕ್ತಪಡಿಸಿದ ಕಾರ್ಯಕರ್ತರು ಏಕಾಏಕಿ ಹಲ್ಲೆ ನಡೆಸಿ ಕ್ಯಾಮೆರಾ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನ ಆರ್.ಎಂ. ಮುತ್ತುರಾಜ್ ಎಂದು ಗುರುತಿಸಲಾಗಿದೆ.

ಘಟನೆ ಕುರಿತು ಪತ್ರಕರ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಭಾರತೀಯ ಜನತಾ ಪಾರ್ಟಿ ಘಟನೆಯನ್ನು ಖಂಡಿಸಿದೆ. ಅಲ್ಲದೇ ಕೈ ಕಾರ್ಯಕರ್ತರನ್ನು ಗೂಂಡಾಗಳು ಎಂದು ಆರೋಪಿಸಿದೆ. ಸಮಾವೇಶದಲ್ಲಿ ತಮಿಳುನಾಡು ಕಾಂಗ್ರೆಸ್‍ನ ಅಧ್ಯಕ್ಷ ಕೆಸ್ ಅಳಗಿರಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *