ಚೆನ್ನೈ: 13 ವರ್ಷದ ಬಾಲಕಿಯ ತಲೆಯನ್ನು ಕತ್ತರಿಸಿ ಬೀದಿಯಲ್ಲಿ ಎಸೆದ 27 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಸೋಮವಾರ ಈ ಘಟನೆ ನಡೆದಿದ್ದು, ರಾಜಲಕ್ಷ್ಮೀ(13) ಕಾಮುಕನಿಗೆ ಬಲಿಯಾದ ಬಾಲಕಿ. ದಿನೇಶ್ ಕುಮಾರ್ ಬಾಲಕಿಗೆ ಕಿರುಕುಳವನ್ನು ನೀಡಿದ ಆರೋಪಿ. ತಲವಾಯಪಟ್ಟಿ ನಿವಾಸಿಯಾದ ರಾಜಲಕ್ಷ್ಮೀ 8 ನೇ ತರಗತಿ ಓದುತ್ತಿದ್ದಳು. ಪ್ರತಿನಿತ್ಯ ಬಾಲಕಿ ರಾಜಲಕ್ಷ್ಮೀಗೆ ದಿನೇಶ್ ಚುಡಾಯಿಸುತ್ತಿದ್ದ. ಇದೇ ವೇಳೆ ಸೋಮವಾರ ರಾಜಲಕ್ಷ್ಮೀ ಮನೆಯಲ್ಲಿ ಯಾರೂ ಇಲ್ಲದ್ದನ್ನು ಕಂಡು ಮನೆಯೊಳಗೆ ನುಗ್ಗಿ ಅವಳನ್ನು ಮತ್ತಷ್ಟು ಚುಡಾಯಿಸಿದ್ದಾನೆ ಎಂದು ಅತ್ತೆರ್ ಪೊಲೀಸರು ಹೇಳಿದ್ದಾರೆ.
ಇದೇ ವೇಳೆ ದಿನೇಶ್ ಮನೆಯೊಳಗೆ ನುಗ್ಗಿದಾಗ ರಾಜಲಕ್ಷ್ಮೀ ಕಿರುಚಿಕೊಂಡಿದ್ದಾಳೆ. ರಾಜಲಕ್ಷ್ಮೀಯ ಕಿರುಚಾಟವನ್ನು ಕೇಳಿಸಿಕೊಂಡು ತಾಯಿ ಸ್ಥಳಕ್ಕೆ ಆಗಮಿಸುತ್ತಿದ್ದರು. ಇದನ್ನು ಕಂಡ ಕಾಮುಕ ಬಾಲಕಿ ಮೇಲೆ ಹಲ್ಲೆ ಮಾಡಿ ಆಕೆಯ ತಲೆಯನ್ನು ಕತ್ತರಿಸಿ ಬೀದಿಯಲ್ಲಿ ಎಸೆದು ಹೋಗಿದ್ದಾರೆ.
ಈ ಘಟನೆಯ ವೇಳೆ ಆರೋಪಿ ದಿನೇಶ್ ಮದ್ಯಪಾನ ಸೇವನೆ ಮಾಡಿದ್ದು, ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿಯಂತೆ ವರ್ತಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv