Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ

Latest

ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ

Public TV
Last updated: April 12, 2025 3:18 pm
Public TV
Share
2 Min Read
Stalin
SHARE

ಚೆನ್ನೈ: ತಮಿಳುನಾಡು (Tamil Nadu) ಸರ್ಕಾರವು ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನು ಅಧಿಕೃತವಾಗಿ ಜಾರಿಗೊಳಿಸಿದೆ. ಸುಪ್ರೀಂ ಕೋರ್ಟ್‌ನ (Supreme Court) ಐತಿಹಾಸಿಕ ತೀರ್ಪಿನ ಆಧಾರದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ತಮಿಳುನಾಡು ರಾಜ್ಯ ವಿಧಾನಸಭೆಯು 2020ರ ಜನವರಿಯಿಂದ 2023ರ ಏಪ್ರಿಲ್‌ವರೆಗೆ 12 ಮಸೂದೆಗಳನ್ನು ಅಂಗೀಕರಿಸಿತ್ತು. ಈ ಮಸೂದೆಗಳು ರಾಜ್ಯದ ವಿಶ್ವವಿದ್ಯಾಲಯಗಳ ಆಡಳಿತವನ್ನು ಗವರ್ನರ್‌ರಿಂದ ರಾಜ್ಯ ಸರ್ಕಾರಕ್ಕೆ ವರ್ಗಾಯಿಸುವ ಗುರಿಯನ್ನು ಹೊಂದಿದ್ದವು. ಆದರೆ, ಗವರ್ನರ್ ಆರ್.ಎನ್.ರವಿ ಈ ಮಸೂದೆಗಳಿಗೆ ಸಮ್ಮತಿ ನೀಡದೆ ಮೂರು ವರ್ಷಗಳಿಗೂ ಹೆಚ್ಚು ಕಾಲ ವಿಳಂಬ ಮಾಡಿದರು.

Droupadi Murmu

2023ರ ನವೆಂಬರ್‌ನಲ್ಲಿ ಗವರ್ನರ್ 10 ಮಸೂದೆಗಳಿಗೆ ಸಮ್ಮತಿಯನ್ನು ನಿರಾಕರಿಸಿದರು. ಎರಡನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದರು. ರಾಜ್ಯ ವಿಧಾನಸಭೆಯು ಈ 10 ಮಸೂದೆಗಳನ್ನು ವಿಶೇಷ ಅಧಿವೇಶನದಲ್ಲಿ ಮತ್ತೆ ಅಂಗೀಕರಿಸಿ ಗವರ್ನರ್‌ಗೆ ಕಳುಹಿಸಿತಾದರೂ, ಅವರು ಇವುಗಳನ್ನು ರಾಷ್ಟ್ರಪತಿಗಳಿಗೆ ರವಾನಿಸಿದರು. ರಾಷ್ಟ್ರಪತಿಗಳು ಒಂದು ಮಸೂದೆಗೆ ಸಮ್ಮತಿ ನೀಡಿದರು, ಏಳನ್ನು ತಿರಸ್ಕರಿಸಿದರು ಮತ್ತು ಎರಡನ್ನು ಪರಿಗಣನೆಗೆ ತೆಗೆದುಕೊಳ್ಳಲಿಲ್ಲ.

ಈ ವಿಳಂಬ ಮತ್ತು ಕ್ರಮಗಳನ್ನು ಪ್ರಶ್ನಿಸಿ, ತಮಿಳುನಾಡು ಸರ್ಕಾರವು 2023ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಗವರ್ನರ್‌ರ ಕ್ರಮಗಳು ಸಂವಿಧಾನದ 200ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಸರ್ಕಾರ ವಾದಿಸಿತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಜೆ.ಬಿ. ಪಾರ್ಡಿವಾಲಾ ಮತ್ತು ಆರ್. ಮಹದೇವನ್ ಅವರ ದ್ವಿಸದಸ್ಯ ಪೀಠವು, ಗವರ್ನರ್ ಆರ್.ಎನ್. ರವಿ ಅವರ ಕ್ರಮವನ್ನು ಕಾನೂನುಬಾಹಿರ ಮತ್ತು ತಪ್ಪು ಎಂದು ಘೋಷಿಸಿತು.

Tamil Nadu Governor R. N Ravi

ರಾಜ್ಯಪಾಲರಿಗೆ ಮಸೂದೆಗಳನ್ನು ಅನಿರ್ದಿಷ್ಟವಾಗಿ ತಡೆಹಿಡಿಯುವ ‘ಪಾಕೆಟ್ ವೀಟೋ’ ಅಧಿಕಾರವಿಲ್ಲ. ಸಂವಿಧಾನದಲ್ಲಿ ಇಂತಹ ಆಯ್ಕೆಯನ್ನು ಒದಗಿಸಲಾಗಿಲ್ಲ ಎನ್ನುವ ಮೂಲಕ ರಾಜ್ಯಪಾಲರ ಕಾರ್ಯವಿಧಾನಕ್ಕೆ ಸ್ಪಷ್ಟ ಸಮಯ ಮಿತಿಗಳನ್ನು ವಿಧಿಸಿತು. ಸಮ್ಮತಿಯನ್ನು ನಿರಾಕರಿಸಲು ಅಥವಾ ರಾಷ್ಟ್ರಪತಿಗಳಿಗೆ ಕಳುಹಿಸಲು ಒಂದು ತಿಂಗಳು, ಸಮ್ಮತಿಯನ್ನು ನಿರಾಕರಿಸಲು ಮತ್ತು ವಿಧಾನಸಭೆಗೆ ಮರಳಿಸಲು ಮೂರು ತಿಂಗಳು ಹಾಗೂ ಮರು-ಅಂಗೀಕೃತ ಮಸೂದೆಗೆ ಸಮ್ಮತಿ ನೀಡಲು ಒಂದು ತಿಂಗಳು ಸಮಯ ನಿಗದಿ ಮಾಡಿತು.

ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವಾದ ಆರ್ಟಿಕಲ್ 142ನ್ನು ಬಳಸಿಕೊಂಡು, ಈ 10 ಮಸೂದೆಗಳು ರಾಜ್ಯ ವಿಧಾನಸಭೆಯಿಂದ ಮರು-ಅಂಗೀಕರಿಸಿದ ದಿನಾಂಕದಿಂದಲೇ ಗವರ್ನರ್‌ರ ಸಮ್ಮತಿಯನ್ನು ಪಡೆದಿರುವಂತೆ ಘೋಷಿಸಿತು. ರಾಷ್ಟ್ರಪತಿಗಳಿಂದ ತೆಗೆದುಕೊಂಡ ಯಾವುದೇ ಕ್ರಮಗಳನ್ನು ಅಸಿಂಧು ಎಂದು ಘೋಷಿಸಲಾಯಿತು.

ಸುಪ್ರೀಂ ಕೋರ್ಟ್ ಆದೇಶದ ಅನ್ವಯ ತಮಿಳುನಾಡು ಸರ್ಕಾರವು ಈ 10 ಕಾಯ್ದೆಗಳನ್ನು ಸರ್ಕಾರಿ ಗೆಜೆಟ್‌ನಲ್ಲಿ ಅಧಿಸೂಚಿಸಿತು. ಇದರಿಂದಾಗಿ ಅವು ಕಾನೂನು ರೂಪವನ್ನು ಪಡೆದವು. ತಮಿಳುನಾಡು ವೆಟರಿನರಿ ಮತ್ತು ಪಶು ವಿಜ್ಞಾನ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ, ತಮಿಳುನಾಡು ಮೀನುಗಾರಿಕೆ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ, ಅಣ್ಣಾ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ ಸೇರಿ ಹತ್ತು ಕಾಯ್ದೆಗಳು ಕಾನೂನಾಗಿ ಜಾರಿಯಾದವು. ಇದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಬೆಳವಣಿಗೆಯಾಗಿದೆ.

TAGGED:governorpresident of IndiaSupreme Courttamil naduತಮಿಳುನಾಡುರಾಜ್ಯಪಾಲರುರಾಷ್ಟ್ರಪತಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
26 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
29 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
53 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
1 hour ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
1 hour ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?