Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ

Latest

ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ

Public TV
Last updated: April 12, 2025 3:18 pm
Public TV
Share
2 Min Read
Stalin
SHARE

ಚೆನ್ನೈ: ತಮಿಳುನಾಡು (Tamil Nadu) ಸರ್ಕಾರವು ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನು ಅಧಿಕೃತವಾಗಿ ಜಾರಿಗೊಳಿಸಿದೆ. ಸುಪ್ರೀಂ ಕೋರ್ಟ್‌ನ (Supreme Court) ಐತಿಹಾಸಿಕ ತೀರ್ಪಿನ ಆಧಾರದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ತಮಿಳುನಾಡು ರಾಜ್ಯ ವಿಧಾನಸಭೆಯು 2020ರ ಜನವರಿಯಿಂದ 2023ರ ಏಪ್ರಿಲ್‌ವರೆಗೆ 12 ಮಸೂದೆಗಳನ್ನು ಅಂಗೀಕರಿಸಿತ್ತು. ಈ ಮಸೂದೆಗಳು ರಾಜ್ಯದ ವಿಶ್ವವಿದ್ಯಾಲಯಗಳ ಆಡಳಿತವನ್ನು ಗವರ್ನರ್‌ರಿಂದ ರಾಜ್ಯ ಸರ್ಕಾರಕ್ಕೆ ವರ್ಗಾಯಿಸುವ ಗುರಿಯನ್ನು ಹೊಂದಿದ್ದವು. ಆದರೆ, ಗವರ್ನರ್ ಆರ್.ಎನ್.ರವಿ ಈ ಮಸೂದೆಗಳಿಗೆ ಸಮ್ಮತಿ ನೀಡದೆ ಮೂರು ವರ್ಷಗಳಿಗೂ ಹೆಚ್ಚು ಕಾಲ ವಿಳಂಬ ಮಾಡಿದರು.

Droupadi Murmu

2023ರ ನವೆಂಬರ್‌ನಲ್ಲಿ ಗವರ್ನರ್ 10 ಮಸೂದೆಗಳಿಗೆ ಸಮ್ಮತಿಯನ್ನು ನಿರಾಕರಿಸಿದರು. ಎರಡನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದರು. ರಾಜ್ಯ ವಿಧಾನಸಭೆಯು ಈ 10 ಮಸೂದೆಗಳನ್ನು ವಿಶೇಷ ಅಧಿವೇಶನದಲ್ಲಿ ಮತ್ತೆ ಅಂಗೀಕರಿಸಿ ಗವರ್ನರ್‌ಗೆ ಕಳುಹಿಸಿತಾದರೂ, ಅವರು ಇವುಗಳನ್ನು ರಾಷ್ಟ್ರಪತಿಗಳಿಗೆ ರವಾನಿಸಿದರು. ರಾಷ್ಟ್ರಪತಿಗಳು ಒಂದು ಮಸೂದೆಗೆ ಸಮ್ಮತಿ ನೀಡಿದರು, ಏಳನ್ನು ತಿರಸ್ಕರಿಸಿದರು ಮತ್ತು ಎರಡನ್ನು ಪರಿಗಣನೆಗೆ ತೆಗೆದುಕೊಳ್ಳಲಿಲ್ಲ.

ಈ ವಿಳಂಬ ಮತ್ತು ಕ್ರಮಗಳನ್ನು ಪ್ರಶ್ನಿಸಿ, ತಮಿಳುನಾಡು ಸರ್ಕಾರವು 2023ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಗವರ್ನರ್‌ರ ಕ್ರಮಗಳು ಸಂವಿಧಾನದ 200ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಸರ್ಕಾರ ವಾದಿಸಿತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಜೆ.ಬಿ. ಪಾರ್ಡಿವಾಲಾ ಮತ್ತು ಆರ್. ಮಹದೇವನ್ ಅವರ ದ್ವಿಸದಸ್ಯ ಪೀಠವು, ಗವರ್ನರ್ ಆರ್.ಎನ್. ರವಿ ಅವರ ಕ್ರಮವನ್ನು ಕಾನೂನುಬಾಹಿರ ಮತ್ತು ತಪ್ಪು ಎಂದು ಘೋಷಿಸಿತು.

Tamil Nadu Governor R. N Ravi

ರಾಜ್ಯಪಾಲರಿಗೆ ಮಸೂದೆಗಳನ್ನು ಅನಿರ್ದಿಷ್ಟವಾಗಿ ತಡೆಹಿಡಿಯುವ ‘ಪಾಕೆಟ್ ವೀಟೋ’ ಅಧಿಕಾರವಿಲ್ಲ. ಸಂವಿಧಾನದಲ್ಲಿ ಇಂತಹ ಆಯ್ಕೆಯನ್ನು ಒದಗಿಸಲಾಗಿಲ್ಲ ಎನ್ನುವ ಮೂಲಕ ರಾಜ್ಯಪಾಲರ ಕಾರ್ಯವಿಧಾನಕ್ಕೆ ಸ್ಪಷ್ಟ ಸಮಯ ಮಿತಿಗಳನ್ನು ವಿಧಿಸಿತು. ಸಮ್ಮತಿಯನ್ನು ನಿರಾಕರಿಸಲು ಅಥವಾ ರಾಷ್ಟ್ರಪತಿಗಳಿಗೆ ಕಳುಹಿಸಲು ಒಂದು ತಿಂಗಳು, ಸಮ್ಮತಿಯನ್ನು ನಿರಾಕರಿಸಲು ಮತ್ತು ವಿಧಾನಸಭೆಗೆ ಮರಳಿಸಲು ಮೂರು ತಿಂಗಳು ಹಾಗೂ ಮರು-ಅಂಗೀಕೃತ ಮಸೂದೆಗೆ ಸಮ್ಮತಿ ನೀಡಲು ಒಂದು ತಿಂಗಳು ಸಮಯ ನಿಗದಿ ಮಾಡಿತು.

ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವಾದ ಆರ್ಟಿಕಲ್ 142ನ್ನು ಬಳಸಿಕೊಂಡು, ಈ 10 ಮಸೂದೆಗಳು ರಾಜ್ಯ ವಿಧಾನಸಭೆಯಿಂದ ಮರು-ಅಂಗೀಕರಿಸಿದ ದಿನಾಂಕದಿಂದಲೇ ಗವರ್ನರ್‌ರ ಸಮ್ಮತಿಯನ್ನು ಪಡೆದಿರುವಂತೆ ಘೋಷಿಸಿತು. ರಾಷ್ಟ್ರಪತಿಗಳಿಂದ ತೆಗೆದುಕೊಂಡ ಯಾವುದೇ ಕ್ರಮಗಳನ್ನು ಅಸಿಂಧು ಎಂದು ಘೋಷಿಸಲಾಯಿತು.

ಸುಪ್ರೀಂ ಕೋರ್ಟ್ ಆದೇಶದ ಅನ್ವಯ ತಮಿಳುನಾಡು ಸರ್ಕಾರವು ಈ 10 ಕಾಯ್ದೆಗಳನ್ನು ಸರ್ಕಾರಿ ಗೆಜೆಟ್‌ನಲ್ಲಿ ಅಧಿಸೂಚಿಸಿತು. ಇದರಿಂದಾಗಿ ಅವು ಕಾನೂನು ರೂಪವನ್ನು ಪಡೆದವು. ತಮಿಳುನಾಡು ವೆಟರಿನರಿ ಮತ್ತು ಪಶು ವಿಜ್ಞಾನ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ, ತಮಿಳುನಾಡು ಮೀನುಗಾರಿಕೆ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ, ಅಣ್ಣಾ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ ಸೇರಿ ಹತ್ತು ಕಾಯ್ದೆಗಳು ಕಾನೂನಾಗಿ ಜಾರಿಯಾದವು. ಇದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಬೆಳವಣಿಗೆಯಾಗಿದೆ.

TAGGED:governorpresident of IndiaSupreme Courttamil naduತಮಿಳುನಾಡುರಾಜ್ಯಪಾಲರುರಾಷ್ಟ್ರಪತಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
24 minutes ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
27 minutes ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
27 minutes ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
1 hour ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
1 hour ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?