Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ

Latest

ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ

Public TV
Last updated: April 12, 2025 3:18 pm
Public TV
Share
2 Min Read
Stalin
SHARE

ಚೆನ್ನೈ: ತಮಿಳುನಾಡು (Tamil Nadu) ಸರ್ಕಾರವು ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನು ಅಧಿಕೃತವಾಗಿ ಜಾರಿಗೊಳಿಸಿದೆ. ಸುಪ್ರೀಂ ಕೋರ್ಟ್‌ನ (Supreme Court) ಐತಿಹಾಸಿಕ ತೀರ್ಪಿನ ಆಧಾರದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ತಮಿಳುನಾಡು ರಾಜ್ಯ ವಿಧಾನಸಭೆಯು 2020ರ ಜನವರಿಯಿಂದ 2023ರ ಏಪ್ರಿಲ್‌ವರೆಗೆ 12 ಮಸೂದೆಗಳನ್ನು ಅಂಗೀಕರಿಸಿತ್ತು. ಈ ಮಸೂದೆಗಳು ರಾಜ್ಯದ ವಿಶ್ವವಿದ್ಯಾಲಯಗಳ ಆಡಳಿತವನ್ನು ಗವರ್ನರ್‌ರಿಂದ ರಾಜ್ಯ ಸರ್ಕಾರಕ್ಕೆ ವರ್ಗಾಯಿಸುವ ಗುರಿಯನ್ನು ಹೊಂದಿದ್ದವು. ಆದರೆ, ಗವರ್ನರ್ ಆರ್.ಎನ್.ರವಿ ಈ ಮಸೂದೆಗಳಿಗೆ ಸಮ್ಮತಿ ನೀಡದೆ ಮೂರು ವರ್ಷಗಳಿಗೂ ಹೆಚ್ಚು ಕಾಲ ವಿಳಂಬ ಮಾಡಿದರು.

Droupadi Murmu

2023ರ ನವೆಂಬರ್‌ನಲ್ಲಿ ಗವರ್ನರ್ 10 ಮಸೂದೆಗಳಿಗೆ ಸಮ್ಮತಿಯನ್ನು ನಿರಾಕರಿಸಿದರು. ಎರಡನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದರು. ರಾಜ್ಯ ವಿಧಾನಸಭೆಯು ಈ 10 ಮಸೂದೆಗಳನ್ನು ವಿಶೇಷ ಅಧಿವೇಶನದಲ್ಲಿ ಮತ್ತೆ ಅಂಗೀಕರಿಸಿ ಗವರ್ನರ್‌ಗೆ ಕಳುಹಿಸಿತಾದರೂ, ಅವರು ಇವುಗಳನ್ನು ರಾಷ್ಟ್ರಪತಿಗಳಿಗೆ ರವಾನಿಸಿದರು. ರಾಷ್ಟ್ರಪತಿಗಳು ಒಂದು ಮಸೂದೆಗೆ ಸಮ್ಮತಿ ನೀಡಿದರು, ಏಳನ್ನು ತಿರಸ್ಕರಿಸಿದರು ಮತ್ತು ಎರಡನ್ನು ಪರಿಗಣನೆಗೆ ತೆಗೆದುಕೊಳ್ಳಲಿಲ್ಲ.

ಈ ವಿಳಂಬ ಮತ್ತು ಕ್ರಮಗಳನ್ನು ಪ್ರಶ್ನಿಸಿ, ತಮಿಳುನಾಡು ಸರ್ಕಾರವು 2023ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಗವರ್ನರ್‌ರ ಕ್ರಮಗಳು ಸಂವಿಧಾನದ 200ನೇ ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಸರ್ಕಾರ ವಾದಿಸಿತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಜೆ.ಬಿ. ಪಾರ್ಡಿವಾಲಾ ಮತ್ತು ಆರ್. ಮಹದೇವನ್ ಅವರ ದ್ವಿಸದಸ್ಯ ಪೀಠವು, ಗವರ್ನರ್ ಆರ್.ಎನ್. ರವಿ ಅವರ ಕ್ರಮವನ್ನು ಕಾನೂನುಬಾಹಿರ ಮತ್ತು ತಪ್ಪು ಎಂದು ಘೋಷಿಸಿತು.

Tamil Nadu Governor R. N Ravi

ರಾಜ್ಯಪಾಲರಿಗೆ ಮಸೂದೆಗಳನ್ನು ಅನಿರ್ದಿಷ್ಟವಾಗಿ ತಡೆಹಿಡಿಯುವ ‘ಪಾಕೆಟ್ ವೀಟೋ’ ಅಧಿಕಾರವಿಲ್ಲ. ಸಂವಿಧಾನದಲ್ಲಿ ಇಂತಹ ಆಯ್ಕೆಯನ್ನು ಒದಗಿಸಲಾಗಿಲ್ಲ ಎನ್ನುವ ಮೂಲಕ ರಾಜ್ಯಪಾಲರ ಕಾರ್ಯವಿಧಾನಕ್ಕೆ ಸ್ಪಷ್ಟ ಸಮಯ ಮಿತಿಗಳನ್ನು ವಿಧಿಸಿತು. ಸಮ್ಮತಿಯನ್ನು ನಿರಾಕರಿಸಲು ಅಥವಾ ರಾಷ್ಟ್ರಪತಿಗಳಿಗೆ ಕಳುಹಿಸಲು ಒಂದು ತಿಂಗಳು, ಸಮ್ಮತಿಯನ್ನು ನಿರಾಕರಿಸಲು ಮತ್ತು ವಿಧಾನಸಭೆಗೆ ಮರಳಿಸಲು ಮೂರು ತಿಂಗಳು ಹಾಗೂ ಮರು-ಅಂಗೀಕೃತ ಮಸೂದೆಗೆ ಸಮ್ಮತಿ ನೀಡಲು ಒಂದು ತಿಂಗಳು ಸಮಯ ನಿಗದಿ ಮಾಡಿತು.

ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವಾದ ಆರ್ಟಿಕಲ್ 142ನ್ನು ಬಳಸಿಕೊಂಡು, ಈ 10 ಮಸೂದೆಗಳು ರಾಜ್ಯ ವಿಧಾನಸಭೆಯಿಂದ ಮರು-ಅಂಗೀಕರಿಸಿದ ದಿನಾಂಕದಿಂದಲೇ ಗವರ್ನರ್‌ರ ಸಮ್ಮತಿಯನ್ನು ಪಡೆದಿರುವಂತೆ ಘೋಷಿಸಿತು. ರಾಷ್ಟ್ರಪತಿಗಳಿಂದ ತೆಗೆದುಕೊಂಡ ಯಾವುದೇ ಕ್ರಮಗಳನ್ನು ಅಸಿಂಧು ಎಂದು ಘೋಷಿಸಲಾಯಿತು.

ಸುಪ್ರೀಂ ಕೋರ್ಟ್ ಆದೇಶದ ಅನ್ವಯ ತಮಿಳುನಾಡು ಸರ್ಕಾರವು ಈ 10 ಕಾಯ್ದೆಗಳನ್ನು ಸರ್ಕಾರಿ ಗೆಜೆಟ್‌ನಲ್ಲಿ ಅಧಿಸೂಚಿಸಿತು. ಇದರಿಂದಾಗಿ ಅವು ಕಾನೂನು ರೂಪವನ್ನು ಪಡೆದವು. ತಮಿಳುನಾಡು ವೆಟರಿನರಿ ಮತ್ತು ಪಶು ವಿಜ್ಞಾನ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ, ತಮಿಳುನಾಡು ಮೀನುಗಾರಿಕೆ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ, ಅಣ್ಣಾ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ ಸೇರಿ ಹತ್ತು ಕಾಯ್ದೆಗಳು ಕಾನೂನಾಗಿ ಜಾರಿಯಾದವು. ಇದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಬೆಳವಣಿಗೆಯಾಗಿದೆ.

TAGGED:governorpresident of IndiaSupreme Courttamil naduತಮಿಳುನಾಡುರಾಜ್ಯಪಾಲರುರಾಷ್ಟ್ರಪತಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

Hailstones thunder and lightning heavy rain in Shivamogga 1
Districts

ಆಲಿಕಲ್ಲಿನ ರಾಶಿ, ಗುಡುಗು, ಸಿಡಿಲಿನ ನರ್ತನ – ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ

Public TV
By Public TV
26 minutes ago
PRAJWAL REVANNA
Bengaluru City

70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ

Public TV
By Public TV
41 minutes ago
Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
57 minutes ago
UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
59 minutes ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
1 hour ago
hailstorm in bengaluru weekend holiday traffic jams many roads in bengaluru ugadi ramzan
Bengaluru City

ಸಾಲು ಸಾಲು ರಜೆ ಊರಿಗೆ ಹೊರಡುವಾಗಲೇ ಆಲಿಕಲ್ಲು ಮಳೆ – ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?