ಸಲೂನ್‌ನಲ್ಲಿ ಜನರಿಗೆ ಕ್ಷೌರ ಮಾಡಿ ಮತಯಾಚನೆ- ಗಮನ ಸೆಳೆದ ಅಭ್ಯರ್ಥಿಯ ಚುನಾವಣಾ ಪ್ರಚಾರ

Public TV
1 Min Read
PARIRAJAN

ಚೆನ್ನೈ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅಂತೆಯೇ ತಮಿಳುನಾಡಿನ (Tamilnadu) ಪರಮೇಶ್ವರಂನ ರಾಮನಾಥಪುರಂ ಲೋಕಸಭಾ ಕ್ಷೇತ್ರದ (Rameswaram Ramanathapuram Loksabha Constituency) ಅಭ್ಯರ್ಥಿಯೊಬ್ಬರು ವಿಭಿನ್ನವಾಗಿ ಮತಯಾಚನೆ ಮಾಡುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಪಾರಿರಾಜನ್ (Independent Candidate Parirajan) ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ವಿಶಿಷ್ಠ ಮಾರ್ಗವನ್ನು ಕಂಡುಕೊಂಡಿದ್ದಾರೆ. ಮತದಾರರ ಗಮನ ಸೆಳೆಯಲು ಸ್ವತಂತ್ರ ಅಭ್ಯರ್ಥಿ ಕೆಲವು ಸಮಯ ಕ್ಷೌರಿಕರಾದರು.

ಸ್ವತಂತ್ರ ಅಭ್ಯರ್ಥಿಯು ಮತದಾರರನ್ನು ಓಲೈಸಲು ಕೈಯಲ್ಲಿ ರೇಜರ್ ಹಿಡಿದು ಜನರಿಗೆ ಕ್ಷೌರ ಮಾಡಿಸಲು ಮುಂದಾದರು. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಅಭ್ಯರ್ಥಿ ಪರ- ವಿರೋಧ ಕಾಮೆಂಟ್‌ ಗಳು ಬರುತ್ತಿವೆ. ಇದನ್ನೂ ಓದಿ: ಬಿಎಸ್‌ವೈ ಸಮ್ಮುಖದಲ್ಲಿ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ

2024ರ 18ನೇ ಲೋಕಸಭಾ ಚುನಾವಣೆಗೆ ದೇಶಾದ್ಯಂತ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. 2024 ರ ಮಾರ್ಚ್‌ 16ರಂದು ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಘೋಷಿಸಿತು. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಹೊಸದಾಗಿ ನೇಮಕಗೊಂಡ ಚುನಾವಣಾ ಆಯೋಗ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಿಂಗ್ ಸಿಂಧು ಚುನಾವಣಾ ದಿನಾಂಕಗಳನ್ನು ಘೋಷಿಸಿದರು.

ಈ ಬಾರಿ ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 44 ದಿನಗಳ ಕಾಲ ನಡೆಯಲಿರುವ ಭಾರತದಲ್ಲಿ ಇದು ಸುದೀರ್ಘ ಅವಧಿಯ ಸಾರ್ವತ್ರಿಕ ಚುನಾವಣೆಯಾಗಿದೆ. ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡನೇ ಅವಧಿಯನ್ನು ಪೂರ್ಣಗೊಳಿಸಲಿದ್ದು, ಸತತ ಮೂರನೇ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

Share This Article