Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 7 ಲಕ್ಷ ರೂ. ವರೆಗೆ ತೆರಿಗೆ ಕಟ್ಟುವಂತಿಲ್ಲ – 10 ವರ್ಷಗಳ ಸಾಧನೆ ಬಣ್ಣಿಸಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 7 ಲಕ್ಷ ರೂ. ವರೆಗೆ ತೆರಿಗೆ ಕಟ್ಟುವಂತಿಲ್ಲ – 10 ವರ್ಷಗಳ ಸಾಧನೆ ಬಣ್ಣಿಸಿದ ಮೋದಿ

Bengaluru City

7 ಲಕ್ಷ ರೂ. ವರೆಗೆ ತೆರಿಗೆ ಕಟ್ಟುವಂತಿಲ್ಲ – 10 ವರ್ಷಗಳ ಸಾಧನೆ ಬಣ್ಣಿಸಿದ ಮೋದಿ

Public TV
Last updated: April 20, 2024 8:47 pm
Public TV
Share
3 Min Read
PM Modi 5
SHARE

– ಮಧ್ಯಮ ವರ್ಗದ ಜನರ ಕನಸು ಮೋದಿ ಸರ್ಕಾರದಿಂದ ನನಸಾಗಿದೆ
– ಪ್ರತಿ ವರ್ಷ 20 ಸಾವಿರ ಕೋಟಿ ಉಳಿತಾಯ ಆಗ್ತಿದೆ
– ನಾನೂ ಬಡಕುಟುಂಬದಿಂದ ಬಂದವನು

ಬೆಂಗಳೂರು: 2014ಕ್ಕೂ ಮುನ್ನ ವಾರ್ಷಿಕ ಆದಾಯ 2 ಲಕ್ಷ ಮೀರಿದವರಿಗೆ ಆದಾಯ ತೆರಿಗೆ ಬೀಳುತ್ತಿತ್ತು. ಆದ್ರೆ ಈಗ 7 ಲಕ್ಷ ರೂ. ವೆರೆಗೆ ತೆರಿಗೆ ಕಟ್ಟುವಂತಿಲ್ಲ. ಅಲ್ಲದೇ ಈ ಹಿಂದೆ ಬಟ್ಟೆ ಬಿಲ್, ಹೋಟೆಲ್ ಊಟದ ಬಿಲ್‌ಗೂ ತೆರಿಗೆ ಪಡೆಯುತ್ತಿದ್ದರು. ಜಿಎಸ್‌ಟಿ ಅನುಷ್ಠಾನಗೊಂಡ ಬಳಿಕ ಪರೋಕ್ಷ ತೆರಿಗೆಗಳಿಗೆ ತೆರೆ ಬಿದ್ದಿದೆ. ಇದರಿಂದ ಸಾವಿರಾರು ಕೋಟಿ ರೂಪಾಯಿ ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 10 ವರ್ಷದಲ್ಲಿ ತಮ್ಮ ಸರ್ಕಾರದಲ್ಲಿ ಆದ ಸಾಧನೆಗಳನ್ನು ಬಣ್ಣಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 28 ಸ್ಥಾನ ಗೆಲ್ಲಿಸೋಣ, ಆಮೇಲೆ ಕಾವೇರಿ, ಕೃಷ್ಣ ನೀರು ಕೊಡಿ ಅಂತ ಮೋದಿಯನ್ನ ಕೇಳೋಣ: ದೇವೇಗೌಡ

ಪ್ರತಿವರ್ಷ 20 ಸಾವಿರ ಕೋಟಿ ರೂ. ಉಳಿತಾಯ:
ಈ ಹಿಂದೆ ಎಲ್‌ಇಡಿ ಬಲ್ಬ್ 400 ರೂ. ಇತ್ತು. ಈಗ 40 ರೂ.ಗೆ ಇಳಿಕೆಯಾಗಿದೆ. ಬಡ, ಮಧ್ಯಮ ವರ್ಗದ ಜನರೂ ಮನೆ-ಮನೆಗಳಲ್ಲೂ ಎಲ್‌ಇಡಿ ಬಲ್ಬ್ ಉಪಯೋಗಿಸುತ್ತಿದ್ದಾರೆ. ಇದರಿಂದ ವಿದ್ಯುತ್ ಸಹ ಉಳಿತಾಯವಾಗುತ್ತಿದೆ. ಪ್ರತಿ ವರ್ಷ ಸರಿಸುಮಾರು 20,000 ಕೋಟಿ ರೂ. ಉಳಿತಾಯವಾಗುತ್ತಿದೆ. ಈಗ ಉಚಿತ ವಿದ್ಯುತ್‌ ಕಲ್ಪಿಸಲು ಹಾಗೂ ವಿದ್ಯುತ್‌ ನಿಂದ ಗಳಿಕೆ ಮಾಡಲು ಸೂರ್ಯ‌ ಘರ್‌ ಯೋಜನೆಯನ್ನು ಅನುಷ್ಠಾನಗೊಳಿಸಲು ಮುಂದಾಗಿದೆ ಎಂದು ವಿವರಿಸಿದ್ದಾರೆ.

ಇಷ್ಟು ದೊಡ್ಡ ಬದಲಾವಣೆ ಕಂಡಿದ್ದು ನಿಮ್ಮ ಮತದಿಂದ:
ವಿಶ್ವದ ಅನೇಕ ರಾಷ್ಟ್ರಗಳು ಭಾರತದ ಗೆಳೆತನ ಬಯಸುತ್ತಿವೆ. ಹೂಡಿಕೆದಾರರು ದಾಖಲೆ ಪ್ರಮಾಣದಲ್ಲಿ ಹೂಡಿಕೆ ಮಾಡ್ತಿದ್ದಾರೆ. ರಫ್ತು, ಉತ್ಪಾದನೆಯಲ್ಲೂ ಭಾರತ ದಾಖಲೆ ಮಾಡುತ್ತಿದೆ. ಅಲ್ಲದೇ ಆರ್ಥಿಕತೆಯಲ್ಲಿ 11ನೇ ಸ್ಥಾನದಲ್ಲಿದ್ದ ಭಾರತ, ಅಗ್ರ 5 ರಾಷ್ಟ್ರಗಳಲ್ಲಿ ಒಂದಾಗಿದೆ. ಈಗ ಭಾರತ ಅನುಸರಿಸುವ ದೇಶವಲ್ಲ, ಮುನ್ನುಗ್ಗುವ ದೇಶವಾಗಿದೆ. ಕಳೆದ 10 ವರ್ಷಗಳಲ್ಲಿ ಈ ಬದಲಾವಣೆ ಆಗಿದೆ ಎಂದು ತಮ್ಮ ಸರ್ಕಾರದ ಪ್ರಮುಖ ಸಾಧನೆಗಳನ್ನು ಬಣ್ಣಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಮೋದಿ

ಕಳೆದ 10 ವರ್ಷಗಳಲ್ಲಿ ಈ ಬದಲಾವಣೆ ತರಲು ಕಾರಣ ಏನು? ಈ ಬದಲಾವಣೆ ತಂದಿದ್ದು ಯಾರು? ಇಷ್ಟು ದೊಡ್ಡ ಬದಲಾವಣೆ ಬಂದಿದ್ದು ಹೇಗೆ? ಮೋದಿ ನೇರೆದಿದ್ದ ಜನರನ್ನ ಪ್ರಶ್ನಿಸಿದರು. ಅದಕ್ಕೆ ಜನ `ಮೋದಿ ಮೋದಿ’ ಎಂದು ಕೂಗುತ್ತಿದ್ದಂತೆ ನೀವು ತಪ್ಪು ಉತ್ತರ ಹೇಳಿದ್ದೀರಿ? ಈ ಬದಲಾಬಣೆ ಬಂದಿದ್ದು ನಿಮ್ಮ ಒಂದು ಮತದಿಂದ ಎಂದು ಮೋದಿ ಹೇಳುತ್ತಿದ್ದಂತೆ ಜನ ಶಿಳ್ಳೆ ಚಪ್ಪಾಳೆಯ ಮಳೆಗರೆದರು.

ಮೋದಿ ಫೋಕಸ್ ವಿಕಸಿತ ಭಾರತ ಮಾತ್ರ:
ಮೋದಿ ಟ್ರ್ಯಾಕ್‌ ರೆಕಾರ್ಡ್‌ನೊಂದಿಗೆ ಜನರ ಆಶೀರ್ವಾದ ಪಡೆಯೋದಕ್ಕೆ ಬಂದಿದ್ದಾನೆ. ಈಗ ಎನ್‌ಡಿಎ, ಇಂಡಿಯಾ ಒಕ್ಕೂಟ ಎರಡೂ ಪಕ್ಷಗಳ ಪ್ರಚಾರವನ್ನೂ ನೀವು ಗಮನಿಸುತ್ತಿದ್ದೀರಿ, ಇಂಡಿಯಾ ಒಕ್ಕೂಟ ಕೇವಲ ಮೋದಿಯ ವಿರುದ್ಧ ದೂಷಿಸುವುದನ್ನೇ ಮುಂದಿಟ್ಟುಕೊಂಡು ಪ್ರಚಾರ ನಡೆಸುತ್ತಿದೆ. ಆದ್ರೆ ಮೋದಿ ಫೋಕಸ್ ಭಾರತವನ್ನು ವಿಕಸನಗೊಳಿಸುದಾಗಿದೆ. ಭಾರತೀಯ ನಾಗರಿಕರ ಸಮೃದ್ಧಿ, ಭಾರತಕ್ಕೆ ಜಾಗತೀಕ ಹೆಗ್ಗಳಿಕೆ ತರುವುದಾಗಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆಗಳಾಗ್ತಿವೆ: ಮೋದಿ ಗುಡುಗು

ನಾನೂ ಬಡಕುಟುಂಬದಿಂದ ಬಂದವನು:
ನಾನೂ ಸಹ ಸಾಧಾರಣ ಬಡಕುಟುಂಬದಿಂದ ಬಂದವನು. ಆದ್ದರಿಂದ ಬಡವರ ಕಷ್ಟ ನನಗೆ ಗೊತ್ತಿದೆ. ಬಡವರು ಜೀವನ ಮಟ್ಟದಲ್ಲಿ ಸುಧಾರಣೆ ತರಬೇಕಿದೆ. ಅದಕ್ಕೆ ಮತ್ತೊಮ್ಮೆ ಎನ್‌ಡಿಎ ಸರ್ಕಾರ ಬರಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಮೋದಿ ಸರ್ಕಾರ ಮಧ್ಯಮ ವರ್ಗದ ಮನೆಗಳ ಕನಸು ನನಸು ಮಾಡಿದೆ. ರೇರಾ ಕಾಯ್ದೆ ತಂದು ಜನರಿಗೆ ಮೋಸಗೊಳಿಸುವುದನ್ನು ತಡೆಗಟ್ಟಿದೆ. ಕಳೆದ 10 ವರ್ಷಗಳಲ್ಲಿ 1 ಕೋಟಿ ಪಕ್ಕಾ ಮನೆಗಳನ್ನು ಬಡವರಿಗೆ ನೀಡಿದೆ. ಈ ಮನೆಗಳಿಗೆ ಸರ್ಕಾರದಿಂದಲೇ ಸಹಾಯಧನ ಒದಗಿಸುವ ಮೂಲಕ 60 ಸಾವಿರ ಕೋಟಿ ರೂ.ಗಿಂತಲೂ ಅಧಿಕ ಹಣ ಉಳಿತಾಯ ಮಾಡಿದೆ ಎಂದು ಸರ್ಕಾರದ ಸಾಧನೆಗಳನ್ನು ಬಣ್ಣಿಸಿದ್ದಾರೆ.

TAGGED:bengalurucongressLokSabha Elections 2024narendra modipalace groundಅರಮನೆ ಮೈದಾನಕಾಂಗ್ರೆಸ್ನರೇಂದ್ರ ಮೋದಿಬೆಂಗಳೂರುಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Gujarat Girls Suicide
Crime

ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರ ಮೃತದೇಹ ಪತ್ತೆ

Public TV
By Public TV
21 minutes ago
Train
Latest

ಟಿ20 ವಿಶ್ವಕಪ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

Public TV
By Public TV
46 minutes ago
Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
1 hour ago
DK Shivakumar 11
Bengaluru City

ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

Public TV
By Public TV
1 hour ago
UP DCM Keshav Prasad Maurya
Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
1 hour ago
UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?