Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗೃಹಮಂತ್ರಿಗಳ ಉತ್ತರಕ್ಕಾಗಿ ಕಾದಿವೆ ಕನ್ನಡಿಗರ ಅಮಿತ ಪ್ರಶ್ನೆಗಳು: ಸಿಎಂ ಟ್ವೀಟ್‌

Public TV
Last updated: February 10, 2024 11:17 pm
Public TV
Share
3 Min Read
siddaramaiah amit shah
SHARE

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಮೈಸೂರಿಗೆ ಆಗಮಿಸುತ್ತಿದ್ದಾರೆ. ಅನುದಾನ ವಿಚಾರವಾಗಿ ಕೇಂದ್ರದ ವಿರುದ್ಧ ಆರೋಪಗಳನ್ನು ಮಾಡಿರುವ ಕಾಂಗ್ರೆಸ್‌ ಈಗ ಮತ್ತೆ ಕೇಂದ್ರ ಸಚಿವರಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹಲವಾರು ಪ್ರಶ್ನೆಗಳನ್ನು ಅಮಿತ್‌ ಶಾ ಮುಂದಿಟ್ಟಿದ್ದಾರೆ.

ಸಿಎಂ ಎಕ್ಸ್‌ ಪೋಸ್ಟ್‌ನಲ್ಲೇನಿದೆ?
ಬರ ಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹ ಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಇದನ್ನೂ ಓದಿ: 17ನೇ ಲೋಕಸಭೆಯಲ್ಲಿ 221 ಮಸೂದೆ ಅಂಗೀಕಾರ: ಪ್ರಹ್ಲಾದ್ ಜೋಶಿ

ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್… pic.twitter.com/5wSev0xjef

— Siddaramaiah (@siddaramaiah) February 10, 2024

ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಾ ಅವರೇ?

ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು ಒಂದು ಕಿಲೋಗೆ 33 ರೂ. ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘ಭಾರತ್ ಬ್ರಾಂಡ್’ ಎಂಬ ಹೆಸರಿನಲ್ಲಿ ಒಂದು ಕಿಲೋಗೆ 29 ರೂ. ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಾ ಅವರೇ? ಇದನ್ನೂ ಓದಿ: ಕಾಂಗ್ರೆಸ್ ಹುಳುಕುಗಳು ಶ್ವೇತಪತ್ರದಲ್ಲಿ ಬಯಲು; ಯುಪಿಎ ಅವಧಿ ಕಿಕ್‌ಬ್ಯಾಕ್, ಹಗರಣಗಳ ಕಾಲ: ಅಶ್ವಥ್ ನಾರಾಯಣ್

ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈ ವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ. ಕೃಷ್ಣಾ ,ಕಾವೇರಿ, ಮಹದಾಯಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ… pic.twitter.com/ZsssXw2NL0

— Siddaramaiah (@siddaramaiah) February 10, 2024

ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ. ಕೃಷ್ಣಾ, ಕಾವೇರಿ, ಮಹದಾಯಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ?

ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ ಹದಿನೈದನೇ ಹಣಕಾಸು ಆಯೋಗ ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇ. 4.7ರಿಂದ ಶೇ. 3.74ಕ್ಕೆ ಇಳಿಸಿದೆ. ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರ್ಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಾ ಅವರೇ? ಎಂದು ಸರಣಿ ಪ್ರಶ್ನೆಗಳನ್ನು ಸಿಎಂ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಧರ್ಮದ ಕವಚದ ಒಳಗೆ ಪಾಪ, ಅನ್ಯಾಯದ ಕೆಲಸ ಬಿಜೆಪಿ ಮಾಡುತ್ತಿದೆ: ದಿನೇಶ್ ಗುಂಡೂರಾವ್

TAGGED:Amit Shahsiddaramaiahಅಮಿತ್ ಶಾಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
4 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
17 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
20 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
23 hours ago

You Might Also Like

Janardhana Reddy 2
Bellary

ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು

Public TV
By Public TV
7 minutes ago
Bellary Election Valmiki Scam Money ED Raid
Bellary

ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ಹಣ ಬಳಕೆ; ಮತದಾರರಿಗೆ ತಲಾ 200 ರೂ. ಹಂಚಿಕೆ – ಯಾವ ಕ್ಷೇತ್ರಕ್ಕೆ ಎಷ್ಟು?

Public TV
By Public TV
14 minutes ago
Kerala Cargo Ship Fire
Crime

ಕೇರಳ ಕರಾವಳಿಯಲ್ಲಿ ಹಡಗು ಅಗ್ನಿ ದುರಂತ – ಬೆಂಕಿ ತಗುಲಿ 48 ಗಂಟೆ ಕಳೆದ್ರೂ ಆರದ ಬೆಂಕಿಯ ಜ್ವಾಲೆ

Public TV
By Public TV
52 minutes ago
Ballari Tukaram
Bellary

ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ ಆರೋಪ – ಸಂಸದ ತುಕಾರಾಂ ಇಡಿ ವಶಕ್ಕೆ

Public TV
By Public TV
2 hours ago
rain weather
Bengaluru City

ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೆ ಭಾರೀ ಮಳೆ – 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
2 hours ago
tukaram 1 2
Bellary

ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?