ಆಗ್ರಾ: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಕಾಲುಜಾರಿ ಚಕ್ರಕ್ಕೆ ಸಿಲುಕುತ್ತಿದ್ದ ಪ್ರಯಾಣಿಕನನ್ನು ಟ್ಯಾಕ್ಸಿ ಚಾಲಕರೊಬ್ಬರು ಕಾಪಾಡಿ ಜೀವ ಉಳಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆ ಹೊತ್ತಿಗೆ ಈ ಘಟನೆ ನಡೆದಿದೆ. ಸುರೇಶ್(34) ಎಂಬ ಪ್ರಯಾಣಿಕರನ್ನು ರಾಜೇಶ್ ಶರ್ಮಾ ಎಂಬ ಟ್ಯಾಕ್ಸಿ ಚಾಲಕ ಬಚಾವ್ ಮಾಡಿದ್ದಾರೆ.
- Advertisement 2
- Advertisement 3
ಮಂಗಳ ಲಕ್ಷದ್ವೀಪ ಎಕ್ಸ್ ಪ್ರೆಸ್ ರೈಲು ಆಗ್ರಾ ನಿಲ್ದಾಣದಿಂದ ಹೊರಟ ಸಮಯಕ್ಕೆ ಸುರೇಶ್ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿದ್ದಾರೆ. ಈ ವೇಳೆ ಹತ್ತುವ ಗಡಿಬಿಡಿಯಲ್ಲಿ ಅವರ ಕಾಲು ಜಾರಿ ಇನ್ನೇನು ರೈಲಿನ ಚಕ್ರಕ್ಕೆ ಸಿಲುಕುತ್ತಿದ್ದರು. ಆದ್ರೆ ಸರಿಯಾದ ಸಮಯಕ್ಕೆ ರೈಲಿನೊಳಗಿದ್ದ ಟ್ಯಾಕ್ಸಿ ಚಾಲಕ ಸುರೇಶ್ ಅವರ ಕೈ ಹಿಡಿದು ಪ್ರಾಣ ಕಾಪಾಡಿದ್ದಾರೆ.
- Advertisement 4
ಬಳಿಕ ನಿಲ್ದಾಣದಲ್ಲಿದ್ದ ಇತರ ಪ್ರಯಾಣಿಕರು ಸಹಾಯ ಮಾಡಿ ತಕ್ಷಣ ಸುರೇಶ್ ಅವರನ್ನು ಎಳೆದುಕೊಂಡಿದ್ದಾರೆ. ಈ ದೃಶ್ಯವನ್ನು ಕೆಲವರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಟ್ಯಾಕ್ಸಿ ಚಾಲಕನ ಕೆಲಸಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
https://www.youtube.com/watch?v=qloTC2fA-bw
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv