– 4 ದಿನದ ಗಡುವು, ಸಮಸ್ಯೆ ಬಗೆಹರಿಯದಿದ್ರೆ ಮತ್ತೆ ಮುತ್ತಿಗೆ ಎಚ್ಚರಿಕೆ
ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda Airport) ಟ್ಯಾಕ್ಸಿಗಳ ಪಾರ್ಕಿಂಗ್ ಮತ್ತು ಪಿಕಪ್ಗೆ ತಂದಿರುವ ಹೊಸ ರೂಲ್ಸ್ ವಿರೋಧಿಸಿ ಸಾವಿರಾರು ಚಾಲಕರು (Taxi Drivers) ರಸ್ತೆಗಿಳಿದು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚಿಗೆ ಸೈಡ್ ಪಿಕಪ್ ವಾಹನ ಚಾಲಕರಿಗೆ ಟರ್ಮಿನಲ್ 2ರಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸಲಾಗಿದೆ. ಜೊತೆಗೆ 8 ನಿಮಿಷದ ನಂತರ, ವಾಹನ ನಿಲ್ಲಿಸಿದ್ರೆ 150 ರೂ. ದಂಡ ವಿಧಿಸುವುದು, ಪ್ರೈವೆಟ್ ವೆಹಿಕಲ್ಗಳಿಗೆ ಏರ್ಪೋರ್ಟ್ ಹೊರಗೆ ಪಾರ್ಕಿಂಗ್ ಸ್ಥಳ ನಿಯೋಜನೆ ಮಾಡಿರುವ ಸಂಬಂಧ ಟ್ಯಾಕ್ಸಿ ಚಾಲಕರನ್ನ ಕೆರಳಿಸಿದೆ. ಈ ಎಲ್ಲಾ ಹೊಸ ನಿಯಮಗಳನ್ನ ವಿರೋಧಿಸಿ ರಸ್ತೆಗಿಳಿದ ನೂರಾರು ಚಾಲಕರು ಏರ್ಪೋರ್ಟ್ ಬಳಿಯ ಸಾದಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸಿ ವಿಮಾನ ನಿಲ್ದಾಣ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವೀಡಿಯೋ ಕಾಲ್ನಲ್ಲಿ ಕೆನಡಾದಿಂದ ಉಡುಪಿ ಮೂಲದ ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಯುವಕ
ಪ್ರತಿಭಟನೆ ವೇಳೆ ಚಾಲಕರು ರಸ್ತೆ ತಡೆದು ವಾಹನಗಳ ಮೇಲೆ ವಾಟರ್ ಬಾಟಲ್ ಎಸೆಯೋ ಮೂಲಕ ಕಿಡಿ ಕಾರಿದರು. ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು, ಲಘು ಲಾಠಿ ಪ್ರಹಾರ ಮಾಡಿ ಪರಿಸ್ಥಿತಿ ಹತೋಟಿಗೆ ತಂದರು. ಬಳಿಕ ಡಿಸಿಪಿ ಸಜಿತ್ ನೇತೃತ್ವದಲ್ಲಿ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ 2 ದಿನ ಟೈಮ್ ಕೊಡಿ. ನಾವು ಏರ್ಪೋರ್ಟ್ ಆಡಳಿತ ಮಂಡಳಿ ಜೊತೆ ಚರ್ಚಿಸಿ ಪಾಸಿಟಿವ್ ನಿರ್ಧಾರಕ್ಕೆ ಬರುತ್ತೇವೆ ಎಂದು ಭರವಸೆ ನೀಡಿದರು. ಬಳಿಕ ಪೊಲೀಸರ ಮಾತಿಗೆ ಒಪ್ಪಿದ ಪ್ರತಿಭಟನಾಕಾರರು, ಪ್ರತಿಭಟನೆ ಕೈ ಬಿಟ್ಟು, ಶೀಘ್ರ ಸಮಸ್ಯೆ ಪರಿಹರಿಸಿ, ಇಲ್ಲದಿದ್ದರೆ ಮತ್ತೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ: ಸದನದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ
ಇನ್ನೂ ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತರಾದ ರಮೇಶ ಬಾನೋತ್ ಮಾತನಾಡಿ ಶೀಘ್ರ ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರುತ್ತೇವೆ ಎಂದು ತಿಳಿಸಿದರು. ಒಟ್ಟಾರೆ ಪರಿಸ್ಥಿತಿ ತಿಳಿಯಾದಮೇಲೆ ಚಾಲಕರು ಮರಳಿ ಕರ್ತವ್ಯಕ್ಕೆ ಮರಳಿದ್ದಾರೆ. ಎರಡಲ್ಲ ನಾಲ್ಕು ದಿನ ತಾಳ್ಮೆಯಿಂದ ಇರುತ್ತೇವೆ ಎಂದಿರುವ ಚಾಲಕರ ಸಂಘ, ಮನವಿಗೆ ಸ್ಪಂದಿಸಿಲ್ಲ ಅಂದರೆ ಮುಂದಿನ ದಾರಿ ಉಪವಾಸ ಸತ್ಯಾಗ್ರಹ ಎನ್ನುತ್ತಿದೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್ – ಸೋನಿಯಾ, ರಾಹುಲ್ ಗಾಂಧಿಗೆ ರಿಲೀಫ್

