Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗ | ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಶಿಕ್ಷಕಿಗೆ ಮರಣದಂಡನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಶಿವಮೊಗ್ಗ | ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಶಿಕ್ಷಕಿಗೆ ಮರಣದಂಡನೆ

Court

ಶಿವಮೊಗ್ಗ | ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಶಿಕ್ಷಕಿಗೆ ಮರಣದಂಡನೆ

Public TV
Last updated: August 23, 2025 9:08 pm
Public TV
Share
3 Min Read
Teacher and her lover sentenced to death for killing husband in Bhadravathi
SHARE

ಶಿವಮೊಗ್ಗ: ಪತಿಯನ್ನು (Husband) ಕೊಲೆಮಾಡಿದ ಪತ್ನಿ (Wife) ಸೇರಿದಂತೆ ಇಬ್ಬರಿಗೆ ಮರಣದಂಡನೆ ಹಾಗೂ ಮತ್ತೋರ್ವನಿಗೆ ಏಳುವರ್ಷ ಕಾರಾಗೃಹವಾಸ ಶಿಕ್ಷೆಯನ್ನು ವಿಧಿಸಿ ಭದ್ರಾವತಿಯ (Bhadravathi) 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ (Court) ತೀರ್ಪು ನೀಡಿದೆ. ನ್ಯಾಯಮೂರ್ತಿ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರಿದ್ದ ಪೀಠ ಈ ತೀರ್ಪು ನೀಡಿದೆ,

ಅಂತರಗಂಗೆಯಲ್ಲಿ ಶಾಲಾ ಶಿಕ್ಷಕಿಯಾಗಿದ್ದ ಲಕ್ಷ್ಮೀ ಹಾಗೂ ಆಕೆಯ ಪ್ರಿಯಕರ ಕೃಷ್ಣಮೂರ್ತಿ ಮತ್ತು ಶಿವರಾಜ್ ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ.

ಸೊರಬದ ಇಮ್ತಿಯಾಜ್ ಎಂಬ ಶಿಕ್ಷಕ ಗುಲ್ಬರ್ಗದಲ್ಲಿ ಕೆಲಸ ಮಾಡುವಾಗ ಪ್ರೀತಿಸಿ, ಲಕ್ಷ್ಮೀಯನ್ನು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಇವರಿಗೆ ಒಂದು ಗಂಡು ಮಗು ಸಹ ಇತ್ತು. ನಂತರ ಇಮ್ತಿಯಾಜ್ ಸೊರಬದ ತೆಲಗುಂದ ಗ್ರಾಮಕ್ಕೆ ವರ್ಗಾವಣೆಯಾಗಿದ್ದರು. ಭದ್ರಾವತಿಯ ಅಂತರಗಂಗೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರಣ ಲಕ್ಷ್ಮೀ ಭದ್ರಾವತಿಯ ಜನ್ನಾಪುರದ ಎನ್‌ಟಿಬಿ ಕಚೇರಿ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿದ್ದಳು. ಆಕೆಯ ಪತಿ ಇಮ್ತಿಯಾಜ್ ಆಗಾಗ ಸೊರಬದಿಂದ ಇಲ್ಲಿಗೆ ಬಂದುಹೋಗುತ್ತಿದ್ದರು. ಇದನ್ನೂ ಓದಿ: ಮಂಗಳೂರು | ಕುಡುಪುವಿನಲ್ಲಿ ಅಶ್ರಫ್ ಕೊಲೆ ಪ್ರಕರಣ – 10 ಆರೋಪಿಗಳ ಜಾಮೀನು ಅರ್ಜಿ ವಜಾ

COURT

ಲಕ್ಷ್ಮೀ ಮನೆಯ ಪಕ್ಕದಲ್ಲಿಯೆ ಲಕ್ಷ್ಮೀಯ ಬಾಲ್ಯದ ಗೆಳೆಯ ಕೃಷ್ಣಮೂರ್ತಿ ಎಂಬಾತನು ಮನೆಮಾಡಿಕೊಂಡಿದ್ದನು. ಲಕ್ಷ್ಮೀ ಹಾಗೂ ಕೃಷ್ಣಮೂರ್ತಿ ನಡುವೆ ಹೆಚ್ಚಿನ ಒಡನಾಟ ಕಂಡುಬಂದ ಕಾರಣ ಇಮ್ತಿಯಾಜ್ ತನ್ನ ಪತ್ನಿಗೆ ಇದು ಸರಿಯಲ್ಲ ಎಂದು ಬುದ್ಧಿಹೇಳುತ್ತಿದ್ದರು. ಈ ವಿಷಯ ಇಮ್ತಿಯಾಜ್ ಮನೆಯವರಿಗೂ ಸಹ ತಿಳಿದು ಆವರೂ ಸಹ ಲಕ್ಷ್ಮೀಗೆ ಬುದ್ದಿವಾದ ಹೇಳಿದ್ದರು.

2016ರಲ್ಲಿ ಇಮ್ತಿಯಾಜ್ ಪತ್ನಿ ಲಕ್ಷ್ಮೀಯನ್ನು ರಂಜಾನ್ ಹಬ್ಬಕ್ಕೆ ಕರೆತರುವುದಾಗಿ ಜನ್ನಾಪುರಕ್ಕೆ ಬಂದಿದ್ದರು. ಆಗ ಆಕೆ ಕೃಷ್ಣಮೂರ್ತಿಯೊಂದಿಗೆ ಸಲುಗೆಯಿಂದಿರುವುದು ನೋಡಿ ಆಕೆಯೊಂದಿಗೆ ಜಗಳವಾಡಿದ್ದರು.

2016 ಜುಲೈ 7 ರಂದು ರಾತ್ರಿ 7:30 ರ ಸಮಯದಲ್ಲಿ ಈ ಕುರಿತಂತೆ ಲಕ್ಷ್ಮೀಗೂ ಇಮ್ತಿಯಾಜ್‌ಗೂ ಜಗಳವಾಗಿದೆ. ಆಗ ಲಕ್ಷ್ಮೀ ತನ್ನ ಸ್ನೇಹಿತ ಕೃಷ್ಣಮೂರ್ತಿ ಜೊತೆ ಸೇರಿ ಇಮ್ತಿಯಾಜ್‌ರನ್ನು ರಾಡಿನಿಂದ ಹೊಡೆದು ಕೊಲೆ ಮಾಡಿದ್ದಳು. ನಂತರ ಮತ್ತೋರ್ವ ಶಿವರಾಜ್ ಎಂಬಾತನ ನೆರವನ್ನು ಪಡೆದುಕೊಂಡು ಮೂವರೂ ಸೇರಿ ಇಮ್ತಿಯಾಜ್ ಮೃತದೇಹವನ್ನು ಭದ್ರಾ ನದಿಗೆ ಎಸೆದಿದ್ದರು.

ಕೊಲೆಯಾದ ಮಾರನೆ ದಿನ ಲಕ್ಷ್ಮೀ, ಇಮ್ತಿಯಾಜ್ ಸಹೋದರನಿಗೆ ಫೋನ್ ಮಾಡಿ ಕೂಡಲೆ ಬರುವಂತೆ ಹೇಳಿದ್ದಳು. ಇಮ್ತಿಯಾಜ್ ಸಹೋದರ ಭದ್ರಾವತಿಯ ಲಕ್ಷ್ಮೀ ಮನೆಗೆ ಬಂದಾಗ ಆಕೆ ಅಳುತ್ತಾ ರಾತ್ರಿ ನನಗೂ ನಿಮ್ಮಣ್ಣ ಇಮ್ತಿಯಾಜ್‌ಗೂ ಜಗಳವಾಯಿತು. ಆ ಸಿಟ್ಟಿನ ಬರದಲ್ಲಿ ನಾನು ಕಬ್ಬಿಣದ ರಾಡಿನಿಂದ ಅವನ ತಲೆಗೆ ಹೊಡೆದೆ. ಅದರಿಂದ ಅವನು ಸತ್ತುಹೋದ. ಆಗ ನಾನು ಪಕ್ಕದ ಮನೆಯ ಕೃಷ್ಣಮೂರ್ತಿ ಹಾಗೂ ಶಿವರಾಜ್ ಅವರ ಬಳಿ ಸಹಾಯ ಕೇಳಿ, ಅವರ ಸಹಾಯದಿಂದ ಇಮ್ತಿಯಾಜ್ ದೇಹವನ್ನು ಭದ್ರಾ ನಾಲೆಗೆ ಹಾಕಿಬಂದೆ. ಈಗ ನೀವೇ ನಮ್ಮನ್ನು ಕಾಪಾಡಬೇಕು ಎಂದು ಕೇಳಿಕೊಂಡಿದ್ದಳು.

ಇಮ್ತಿಯಾಜ್ ಸಹೋದರ ನ್ಯೂಟೌನ್ ಪೋಲಿಸ್ ಠಾಣೆಯಲ್ಲಿ ಲಕ್ಷ್ಮೀ, ಕೃಷ್ಣಮೂರ್ತಿ, ಶಿವರಾಜ್ ವಿರುದ್ಧ ದೂರು ಸಲ್ಲಿಸಿದ್ದರು. ಪೋಲಿಸರು ಪ್ರಕರಣ ದಾಖಲಿಸಿಕೊಂಡು ಲಕ್ಷ್ಮೀ, ಕೃಷ್ಣಮೂರ್ತಿ ಮತ್ತು ಶಿವರಾಜ್ ಈ ಮೂವರು ಆರೋಪಿಗಳನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಮುಖ ಅಪರಾಧಿ ಲಕ್ಷ್ಮೀ ಹಾಗೂ ಕೃಷ್ಣಮೂರ್ತಿಗೆ ಕೊಲೆಗಾಗಿ ಮರಣದಂಡನೆ ಹಾಗೂ ಶಿವರಾಜ್‌ಗೆ ಸಾಕ್ಷಿ ನಾಶಪಡಿಸಲು ಯತ್ನಿಸಿದ ಆರೋಪಕ್ಕೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮರಣ ದಂಡನೆ ಶಿಕ್ಷೆ ಜೊತೆಗೆ ಮತ್ತು 13 ಲಕ್ಷ ದಂಡವನ್ನು ವಿಧಿಸಿದ್ದು ಇದರಲ್ಲಿ 10 ಲಕ್ಷ ಹಣವನ್ನು ಮೃತನ ತಾಯಿಗೆ ಪರಿಹಾರವಾಗಿ ನೀಡಬೇಕು. ಉಳಿದ 3 ಲಕ್ಷ ಹಣವನ್ನ ದಂಡವಾಗಿ ಪಾವತಿಸಬೇಕು ಎಂದು ಆದೇಶಿಸಲಾಗಿದೆ. ಇದನ್ನೂ ಓದಿ: ಬೀದಿ ನಾಯಿಗಳನ್ನ ಹಿಡಿಯಿರಿ, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಟ್ಟುಬಿಡಿ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

TAGGED:BhadravathicourthusbandshivamoggaWife
Share This Article
Facebook Whatsapp Whatsapp Telegram

Cinema news

Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows
AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories

You Might Also Like

Namma Metro Greenline
Bengaluru City

ಮತ್ತೆ ದರ ಏರಿಕೆಗೆ ರೆಡಿಯಾದ BMRCL – ಸಿಎಂ, ಕೇಂದ್ರಕ್ಕೆ ತೇಜಸ್ವಿ ಸೂರ್ಯ ಪತ್ರ

Public TV
By Public TV
3 minutes ago
Anekal 3
Districts

ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಗೋಮಾಳ ಒತ್ತುವರಿ ತೆರವು

Public TV
By Public TV
19 minutes ago
pm modi 1
Latest

ಭಾರತದ Gen Z ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ: ಪ್ರಧಾನಿ ಮೋದಿ

Public TV
By Public TV
50 minutes ago
Phool Singh Baraiya
Crime

ಸುಂದರ ಹುಡುಗಿಯನ್ನ ನೋಡಿ ಸೆಳೆತಕ್ಕೊಳಗಾಗಿ ರೇಪ್ ಮಾಡ್ತಾರೆ – ಕಾಂಗ್ರೆಸ್ ಶಾಸಕ ವಿವಾದ

Public TV
By Public TV
53 minutes ago
HC Balakrishna
Districts

ಸಿಎಂ ಬದಲಾವಣೆ ವಿಚಾರದಲ್ಲಿ ಮೂಗು ತೂರಿಸಲ್ಲ: ಹೆಚ್‌ಸಿ ಬಾಲಕೃಷ್ಣ

Public TV
By Public TV
1 hour ago
shidlaghatta City Municipal Council Commissioner Amrutha Gowda receives death threat from Congress Leader Rajeev Gowda 1
Chikkaballapur

ಪೌರಾಯುಕ್ತೆಗೆ ಧಮ್ಕಿ ಕೇಸ್; ನಿರೀಕ್ಷಣಾ ಜಾಮೀನಿಗೆ ರಾಜೀವ್ ಗೌಡ ಅರ್ಜಿ ಸಲ್ಲಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?