ಗಾಂಧಿನಗರ: ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ ತರಗತಿಯ ವೇಳೆ ತನ್ನೊಟ್ಟಿಗೆ ವೋಡ್ಕಾ ಕುಡಿಯುವಂತೆ ಒತ್ತಾಯಿಸಿದ ಘಟನೆ ಗುಜರಾತ್ನ ವಡೋದರಾದಲ್ಲಿ ನಡೆದಿದೆ.
ಪ್ರಶಾಂತ್ ಖೋಸ್ಲಾ ಬಂಧಿತ ಶಿಕ್ಷಕ. ಈತ ನಿಜಾಂಪುರ ಪ್ರದೇಶದಲ್ಲಿ ಟ್ಯೂಷನ್ ತರಗತಿಗಳನ್ನು ನಡೆಸುತ್ತಿದ್ದ. ಹೀಗೆ ಟ್ಯೂಷನ್ ನಡೆಸುತ್ತಿದ್ದ ಸಂದರ್ಭದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯ ಬಳಿ ತನ್ನೊಂದಿಗೆ ಕುಳಿತು ಮದ್ಯವನ್ನು ಕುಡಿಯುವಂತೆ ಒತ್ತಾಯಿಸಿದ್ದಾನೆ.
ಅದಕ್ಕೆ ವಿದ್ಯಾರ್ಥಿನಿ ಒಪ್ಪದಕ್ಕೆ ಆಕೆಯ ಮೇಲೆ ದೈಹಿಕ ಹಲ್ಲೆ ನಡೆಸಿ ಮದ್ಯವನ್ನು ಕುಡಿಸಿದ್ದಾನೆ. ಇದಾದ ಬಳಿಕ ಬಾಲಕಿಯು ಪ್ರಜ್ಞಾಹೀನಳಾಗುತ್ತಿದ್ದಂತೆ ಮನೆಗೆ ಡ್ರಾಪ್ ಮಾಡಿದ್ದಾನೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗಳನ್ನು ನೋಡಿದ ಪೋಷಕರು ಆಕೆಯನ್ನು ನೋಡಿ ಆತಂಕಕ್ಕೆ ಒಳಗಾಗಿದ್ದಾರೆ. ತಕ್ಷಣ ಅವಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆಕೆಗೆ ಚಿಕಿತ್ಸೆ ನೀಡಿದ್ದಾರೆ. ಇದನ್ನೂ ಓದಿ: Paytm ನಲ್ಲಿ ಸಮಸ್ಯೆ – ಪಾವತಿ ಕಷ್ಟವಾಗುತ್ತಿದೆ ಎನ್ನುತ್ತಿದ್ದಾರೆ ಬಳಕೆದಾರರು
ವಿದ್ಯಾರ್ಥಿನಿಗೆ ಪ್ರಜ್ಞೆ ಬಂದ ನಂತರ ಮಹಿಳಾ ಪೊಲೀಸ್ ಅಧಿಕಾರಿ ಬಳಿ ಘಟನೆಯನ್ನು ವಿವರಿಸಿದ್ದಾಳೆ. ಘಟನೆ ಸಂಬಂಧಿಸಿ ಟ್ಯೂಷನ್ ಶಿಕ್ಷಕನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೇ ತೆರಳಿ ಸನ್ಮಾನಿಸಲಿದ್ದಾರೆ ರಾಜ್ಯಪಾಲರು