ಮೈಸೂರು: ಎಚ್.ಡಿ.ಕೋಟೆ ತಾಲೂಕಿನ ಮುಚ್ಚರೆ ಗ್ರಾಮದಲ್ಲಿ ಶಾಲಾ ಕಟ್ಟಡ ಕುಸಿದಿರುವ ಪರಿಣಾಮಾಗಿ ವಿದ್ಯಾರ್ಥಿಗಳು ಅನಿವಾರ್ಯವಾಗಿ ದೇವಸ್ಥಾನದ ಆವರಣದಲ್ಲೇ ಪಾಠ ಕೇಳುತ್ತಿದ್ದಾರೆ.
ಮುಚ್ಚರೆ ಗ್ರಾಮದಲ್ಲಿನ ಸರ್ಕಾರಿ ಶಾಲೆಯು ಕುಸಿದ ಕಾರಣ ವಿದ್ಯಾರ್ಥಿಗಳು ಅನಿವಾರ್ಯವಾಗಿ ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಪಾಠ ಕೇಳುವ ಪರಿಸ್ಥಿತಿ ಬಂದಿದೆ. ಈ ಪ್ರಾಥಮಿಕ ಶಾಲೆಯಲ್ಲಿ 1ರಿಂದ 5ನೇ ತರಗತಿಗಳಿದ್ದು, ಒಟ್ಟು 25 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
- Advertisement 2
ಶಾಲೆ ಕಟ್ಟಡ ಕುಸಿದು ಹಲವು ದಿನಗಳೇ ಕಳೆದರೂ, ಜನಪ್ರತಿನಿಧಿಗಳು ಇತ್ತ ಸುಳಿದಿಲ್ಲ. ಶಾಲಾ ಕಟ್ಟಡವು ಸಂಪೂರ್ಣ ಶಿಥಿಲವಾಗಿದ್ದು, ಕೊಠಡಿಯಲ್ಲಿ ಮೇಲ್ಛಾವಣೆಯ ಕುಸಿದು ಬೀಳುತ್ತಿದೆ. ಇದು ಮಕ್ಕಳ ಜೀವಕ್ಕೇ ಅಪಾಯವಿರುವ ಕಾರಣ ಗ್ರಾಮಸ್ಥರು ದೇವಸ್ಥಾನದ ಆವರಣದಲ್ಲೇ ಶಾಲೆ ನಡೆಸುವಂತೆ ಶಿಕ್ಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
- Advertisement 3
- Advertisement 4
ಈ ಕುರಿತು ಗ್ರಾಮಸ್ಥರು ಹತ್ತಾರು ಭಾರೀ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ವಿಷಯ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡುತ್ತಿರುವ ಇಂತಹ ಜನಪ್ರತಿನಿಧಿಗಳು ನಮಗೇ ಬೇಕೇ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ಮಾಡಿಕೊಡಬೇಕಾಗಿದೆ.