Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಶಿಕ್ಷಕರ ವೃತ್ತಿ ಸಾಮಾಜಿಕ ಜವಾಬ್ದಾರಿ: ಸಿದ್ದರಾಮಯ್ಯ

Public TV
Last updated: September 5, 2024 4:27 pm
Public TV
Share
2 Min Read
CM SIDDARAMAIAH TEACHERS DAY
SHARE

ಬೆಂಗಳೂರು: ರೈತರು, ಶಿಕ್ಷಕರು, ಸೈನಿಕರು ದೇಶದ ನಿರ್ಮಾತೃಗಳು. ದೇಶದ ಅಭಿವೃದ್ಧಿ ಮತ್ತು ವ್ಯಕ್ತಿತ್ವ ರೂಪಿಸುವವರು ಶಿಕ್ಷಕರು. ಈ ವೃತ್ತಿ ಸಾಮಾಜಿಕ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸರ್ಕಾರದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಸಿಎಂ, ಶಿಕ್ಷಕ ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಇದನ್ನೂ ಓದಿ: ದರ ಏರಿಕೆ ನಿಯಂತ್ರಿಸಲು ಕಡಿಮೆ ಬೆಲೆಗೆ ಈರುಳ್ಳಿ ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ

ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ಡಾ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ. ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತೀ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಅನ್ನಿಸುತ್ತದೆ ಎಂದರು. ಇದನ್ನೂ ಓದಿ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ – ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಅವರಿಗೆ ಸಮಾಜ ಅರ್ಥ ಆಗುತ್ತದೆ. ಸಮಾಜದ ಸಮಸ್ಯೆಗಳಿಗೆ ಪರಿಹಾರ ರೂಪಿಸುತ್ತಾರೆ. ವಿಜ್ಞಾನ ಓದಿರುವ ವಿದ್ಯಾರ್ಥಿಗಳೂ ಮೌಡ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಅವರಿಗೆ ಸಿಕ್ಕ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣದ್ದಾಗಿದೆ ಎಂದರು. ಇದನ್ನೂ ಓದಿ: FIRE ಮನವಿಯನ್ನು ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ : ಸಿಎಂ

ಎಲ್ಲರಿಗೂ ಶಿಕ್ಷಣ ದೊರಕದಂತೆ ತಡೆಯುತ್ತಿದ್ದ ಕಾಲ ಈಗ ಇಲ್ಲ. ಈಗ ಪ್ರತಿಯೊಬ್ಬರಿಗೂ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಜೊತೆಗೆ ಅತ್ಯುತ್ತಮ ವ್ಯಕ್ತಿತ್ವಗಳನ್ನು ರೂಪಿಸುವ ರೂವಾರಿಗಳು ನಮ್ಮ ಶಿಕ್ಷಕರು ಎಂದು ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹೋಟೆಲ್‌ಗೆ ನುಗ್ಗಿದ ಟಿಪ್ಪರ್ – ಇಬ್ಬರ ದುರ್ಮರಣ

ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಶಿಕ್ಷಕರಿಂದ, ಶಿಕ್ಷಣದಿಂದ ಮಾತ್ರ ಸಾಧ್ಯ. 800 ವರ್ಷಗಳ ಹಿಂದೆಯೇ ಕರ್ಮ ಸಿದ್ಧಾಂತವನ್ನು ಬಸವಾದಿ ಶರಣರು ತಿರಸ್ಕರಿಸಿದ್ದರು. ಆದರೂ ಇವತ್ತಿನ ಶಿಕ್ಷಕರು ಹಣೆಬರಹ ಮುಂತಾದ ಕರ್ಮಸಿದ್ಧಾಂತವನ್ನು ನಂಬುತ್ತಾರೆ. ಇದು ಸರಿಯಲ್ಲ. ಸಾವಿತ್ರಿಬಾಯಿ ಫುಲೆ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಲಿ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ತಲೆ ಓಪನ್ – ‘ಡಿ’‌ ಗ್ಯಾಂಗ್‌ ಭೀಕರ ಕ್ರೌರ್ಯ ಫೋಟೊಗಳಿಂದ ಬಹಿರಂಗ

ಕಾರ್ಯಕ್ರಮದಲ್ಲಿ 20 ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲೆಯ 11 ಶಿಕ್ಷಕರು, ಪಿಯುಸಿ ವಿಭಾಗದಲ್ಲಿ ಒಬ್ಬ ಪ್ರಾಂಶುಪಾಲರು, 9 ಜನ ಉಪನ್ಯಾಸಕರಿಗೆ ಉತ್ತಮ ಶಿಕ್ಷಕ ಮತ್ತು ಉಪನ್ಯಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಚಿವ ಮಧು ಬಂಗಾರಪ್ಪ, ಡಾ. ಸುಧಾಕರ್ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಶಾಲಾ-ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

TAGGED:bengalurucm siddaramaiahTeachers Dayಡಾ. ಸುಧಾಕರ್ಬೆಂಗಳೂರುಮಧು ಬಂಗಾರಪ್ಪಶಿಕ್ಷಕರ ದಿನಾಚರಣೆಸರ್ವಪಲ್ಲಿ ರಾಧಾಕೃಷ್ಣನ್ಸಾವಿತ್ರಿಬಾಯಿ ಫುಲೆಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

Rekha Gupta 2
Latest

ಸಾರ್ವಜನಿಕ ಹಿತದೃಷ್ಟಿಗೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪದ ಮೇಲೆ ಹೇಡಿತನದ ಕೃತ್ಯ: ಹಲ್ಲೆ ಬಗ್ಗೆ ದೆಹಲಿ ಸಿಎಂ ರಿಯಾಕ್ಷನ್‌

Public TV
By Public TV
3 hours ago
Vijayapura
Districts

ಮಳೆಯಿಂದ ನಷ್ಟ ಅನುಭವಿಸಿದ 2 ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ ಎಂ.ಬಿ ಪಾಟೀಲ್

Public TV
By Public TV
3 hours ago
c.n.manjunath nirmala sitharaman
Latest

ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

Public TV
By Public TV
4 hours ago
Amit shah
Latest

ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

Public TV
By Public TV
4 hours ago
Narendra Modi Putin
Latest

ಭಾರತಕ್ಕೆ 5% ರಿಯಾಯಿತಿಯಲ್ಲಿ ತೈಲ ಪೂರೈಕೆ: ರಷ್ಯಾ

Public TV
By Public TV
4 hours ago
Agni 5 Missile
Latest

ಅಗ್ನಿ 5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?