ಛತ್ತೀಸ್ಗಢ: ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಪ್ಪಬಾರದೆಂದು ನಿತ್ಯ ಗುಡ್ಡಗಾಡು ರಸ್ತೆಯಲ್ಲಿ 8 ಕಿಮೀ ನಡೆಯುವ ಶಿಕ್ಷಕರು ಬಿಸಿಯೂಟವನ್ನು ಹೊತ್ತು ತರುತ್ತಿರುವ ಘಟನೆ ಛತ್ತೀಸಗಢದ ಬಲರಾಮ್ಪುರ್ ಜಿಲ್ಲೆಯಲ್ಲಿ ಕಂಡು ಬಂದಿದೆ.
ನಮ್ಮ ಶಿಕ್ಷಕರಾದ ಸುಶೀಲ್ ಯಾದವ್ ಮತ್ತು ಪಂಕಜ್ ಸಾರ್ವಜನಿಕ ಪಡಿತರ ಅಂಗಡಿಯಿಂದ ದಿನಸಿ ಹೊತ್ತು ಪ್ರತಿದಿನ 8 ಕಿಮೀ ಬೆಟ್ಟಗುಡ್ಡದ ಹಾದಿಯಲ್ಲಿ ನಡೆದು ಹೋಗುತ್ತಿದ್ದಾರೆ. ಅವರ ಬದ್ಧತೆ ಮತ್ತು ಕರ್ತವ್ಯನಿಷ್ಠೆಯ ಬಗ್ಗೆ ನಮಗೆ ಗೌರವವಿದೆ ಎಂದು ಬಲರಾಮ್ಪುರ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿ ಬಿ.ಎಕ್ಕಾ ಹೇಳಿದ್ದಾರೆ. ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ
Chhattisgarh: Teachers in a remote village of Balrampur dist carry Mid-Day Meal ration on their shoulders for 8 km crossing mountain, streams
“We want to ensure that village school students get mid-day meals. We request govt to build a road to the village,” says school teacher pic.twitter.com/cyavFj6XT4
— ANI (@ANI) October 24, 2021
ಖಂಡಿಯಾ ದಾಮರ್ ಗ್ರಾಮ ಪಂಚಾಯಿತಿ ಶಾಲೆಯಲ್ಲಿ ಇಬ್ಬರು ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ನಡೆದೇ ಬರುವ ಶಿಕ್ಷಕರ ಬದ್ಧತೆಗೆ ಕೈಮುಗಿಯಬೇಕು ಎನ್ನಿಸುತ್ತದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಇದನ್ನೂ ಓದಿ: ಕಟೀಲ್ಗೆ ಸೀರೆ ಉಡಿಸಿದ್ರೆ ಆತ ಹೆಂಗಸು ಅಲ್ಲ, ಗಂಡಸು ಅಲ್ಲ: ಬೇಳೂರು ಗೋಪಾಲಕೃಷ್ಣ
ಈ ರಸ್ತೆಯಲ್ಲಿ ಸಾಗಿಬರುವುದು ತುಂಬಾ ಕಷ್ಟವಾಗಿದೆ. ಮಳೆ ಬಿದ್ದರಂತೂ ಈ ರಸ್ತೆಯಲ್ಲಿ ನಡೆಯಲು ಸಾಧ್ಯವಾಗುವುದಿಲ್ಲ. ಕಾಡುಪ್ರಾಣಿಗಳ ಹಾವಳಿಯೂ ಇದೆ. ಆದರೂ ಮಕ್ಕಳು ಪ್ರತಿದಿನ ಮಧ್ಯಾಹ್ನದ ಊಟ ತಪ್ಪಿಸಿಕೊಳ್ಳಬಾರದು ಎಂದು ನಾವಿಷ್ಟು ಕಷ್ಟ ಪಡುತ್ತಿದ್ದೇವೆ. ಮ್ಕಳಿಗೆ ಬಿಸಿಯೂಟ ತಪ್ಪಬಾರದು ಎನ್ನುವ ಕಾಳಜಿಯಿಂದ ಗುಡ್ಡ ಮೇಲಿರುವ ಶಾಲೆಗೆ ರಸ್ತೆ ಸಂಪರ್ಕವನ್ನು ಕಲ್ಪಿಸಿಕೊಡುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದೇನೆ. ಈಗಲೂ ಮಾಡುತ್ತಿದ್ದೇನೆ ಎಂದು ಶಿಕ್ಷಕ ಸುಶೀಲ್ ಯಾದವ್ ಹೇಳಿದ್ದಾರೆ.