ಬೆಂಗಳೂರು: ಶಿಕ್ಷಕರ ದಿನಾಚರಣೆ (Teachers Day) ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಇಬ್ಬರು ಉತ್ತಮ ಪ್ರಾಂಶುಪಾಲರು ಮತ್ತು 8 ಉಪನ್ಯಾಸಕರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ಘೋಷಣೆ ಮಾಡಿದೆ.
2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರ ಪ್ರಶಸ್ತಿಗೆ ಮೈಸೂರು (Mysuru) ಜಿಲ್ಲೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹುಣಸೂರಿನ ರಾಮೇಗೌಡ ಎ ಮತ್ತು ಉಡುಪಿ(Udupi) ಜಿಲ್ಲೆ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಮಕೃಷ್ಣ ಬಿ.ಜಿ. ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:ಹಾಲಿನ ಖರೀದಿಯಲ್ಲಿ 1.50 ರೂ. ಕಡಿತ – ರಾಜ್ಯ ಸರ್ಕಾರದ ವಿರುದ್ಧ ಹೆಚ್ಡಿಕೆ ಕಿಡಿ
ಉತ್ತಮ ಉಪನ್ಯಾಸಕ ಪ್ರಶಸ್ತಿ
ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗಣಿತ ಉಪನ್ಯಾಸಕ ವಾಸುದೇವ ಕೆ ಹೆಚ್
ಬೆಂಗಳೂರು ಉತ್ತರ ಮಲ್ಲೇಶ್ವರಂ 13ನೇ ಅಡ್ಡರಸ್ತೆ ಸರ್ಕಾರಿ ಎಸ್ಹೆಚ್ವಿಎನ್ಎಮ್ ಬಾಲಕಿಯರ ಪದವಿ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ನಾಗವೀಣಾ
ಬೆಳಗಾವಿ ಜಿಲ್ಲೆ ಶಹಪೂರ ಸರ್ಕಾರಿ ಚಿಂತಾಮಣಿ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಗಂಗಾಧರ ಬೆಟಗೇರಿ
ವಿಜಯಪುರ ಜಿಲ್ಲೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸಾವಲ್ ಸಂಗ್ ಎಸ್ ಬಿ. ಇದನ್ನೂ ಓದಿ: ತೋಳಗಳ ಹತ್ಯೆಗೆ ಕಂಡಲ್ಲಿ ಗುಂಡು – ಯೋಗಿ ಸರ್ಕಾರ ಆದೇಶ
ಉತ್ತರ ಕನ್ನಡ ಜಿಲ್ಲೆ ಶಿರಸಿ ವೆಂಕಟರಾವ್ ನೀಲೆಕಣಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ವಸಂತ ಕೆ ನಾಯಕ್
ಬಾಗಲಕೋಟೆ ಜಿಲ್ಲೆ ಮುಧೋಳ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕ ಸೈದುಸಾಬ್ ಪಡಸಲಗಿ
ಚಿಕ್ಕೋಡಿ ಜಿಲ್ಲೆ ರಾಯಭಾಗ ನ್ಯೂ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಅಣ್ಣಪ್ಪ ಸದಾಶಿವ ಕುಂಬಾರ
ಬೆಂಗಳೂರು ದಕ್ಷಿಣ ಬಸವನ ಗುಡಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕಿ ಗೌರಮ್ಮ ಹನುಮಂತಪ್ಪ ಕಡೇಮನಿ ಇದನ್ನೂ ಓದಿ: ಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್, 1 ಲಕ್ಷ ಜನರಿಗೆ ನೇರ ಉದ್ಯೋಗ: ಪ್ರಿಯಾಂಕ್ ಖರ್ಗೆ