Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ನಾಳೆಯಿಂದ ಆರಂಭ – ಸುರೇಶ್ ಕುಮಾರ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ನಾಳೆಯಿಂದ ಆರಂಭ – ಸುರೇಶ್ ಕುಮಾರ್

Bengaluru City

ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ನಾಳೆಯಿಂದ ಆರಂಭ – ಸುರೇಶ್ ಕುಮಾರ್

Public TV
Last updated: September 3, 2019 7:04 pm
Public TV
Share
3 Min Read
suresh kumar
SHARE

ಬೆಂಗಳೂರು: ವರ್ಷದಿಂದ ಕಗ್ಗಂಟಾಗಿ ಉಳಿದಿರುವ ಶಿಕ್ಷಕರ ವರ್ಗಾವಣೆಗೆ ಕೊನೆಗೂ ಕಾಲ ಕೂಡಿಬಂದಿದ್ದು, ನಾಳೆಯಿಂದ ಕೌನ್ಸಿಲಿಂಗ್ ನಡೆಯಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಇಂದು ಸರ್ವ ಶಿಕ್ಷಣ ಅಭಿಯಾನದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಡ್ಡಾಯ ವರ್ಗಾವಣೆ ಬಗ್ಗೆ ಅನೇಕ ಗೊಂದಲಗಳು ಇತ್ತು. ಅನೇಕ ಜನ ಕಡ್ಡಾಯ ವರ್ಗಾವಣೆ ಬಗ್ಗೆ ನನ್ನ ಬಳಿ ದೂರು ನೀಡಿದ್ದರು. ಹೀಗಾಗಿ ನಾನು ವರ್ಗಾವಣೆ ನಿಲ್ಲಿಸಿದ್ದೆ. ಈ ಸುದ್ದಿಗೋಷ್ಠಿಯನ್ನು ಸಹ ಸಂತೋಷದಿಂದ ಮಾಡುತ್ತಿಲ್ಲ. ಎರಡು ಗುಂಪುಗಳ ಮಧ್ಯೆ ಸಿಲುಕಿ ಹಾಕಿಕೊಂಡಿದ್ದೇನೆ ಎಂದು ತಿಳಿಸಿದರು.

ಕಡ್ಡಾಯ ವರ್ಗಾವಣೆ ಮಾಡದಿದ್ದಲ್ಲಿ ನಿಮ್ಮ ಮನೆ ಮುಂದೆ ವಿಷ ತೆಗೆದುಕೊಳ್ಳುತ್ತೇನೆ ಎಂದು ಕೆಲವರು ಹೇಳುತ್ತಾರೆ. ಇನ್ನೂ ಕೆಲವರು ಕಡ್ಡಾಯ ವರ್ಗಾವಣೆ ಮಾಡಿದ್ದಲ್ಲಿ ನಿಮ್ಮ ಮನೆ ಮುಂದೆ ವಿಷ ತೆಗೆದುಕೊಳ್ಳುತ್ತೇನೆ ಎಂದು ಹೇಳುತ್ತಾರೆ. ಹೀಗಾಗಿ ಎರಡೂ ಗುಂಪುಗಳ ಮಧ್ಯೆ ಸಿಲುಕಿಕೊಂಡಿದ್ದೇನೆ. ಈ ಕುರಿತು 20 ಗಂಟೆಗಳ ಕಾಲ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದೇನೆ ಎಂದು ಮಾಹಿತಿ ನೀಡಿದರು.

School

ಎಲ್ಲರಿಗೂ ಸಮಾನ ರೀತಿಯಲ್ಲಿ ಅನುಕೂಲವಾಗುವಂತೆ ವರ್ಗಾವಣೆ ಮಾಡಲು ಚಿಂತನೆ ನಡೆಸಿದ್ದೇನೆ. ಕಡ್ಡಾಯ ವರ್ಗಾವಣೆ ಆಗುವವರಿಗೆ ಕೆಲವು ಆಫರ್ ನೀಡಲಾಗಿದೆ. ಏನೆಂದರೆ, ಅವರಿಗೆ ಇಷ್ಟವಾಗದ ಜಾಗದಲ್ಲಿ ವರ್ಗಾವಣೆ ಸಿಗದೇ ಇದ್ದರೆ ಪಕ್ಕದ ತಾಲೂಕು, ಅಥವಾ ಹತ್ತಿರದ ಜಿಲ್ಲೆಗೆ ವರ್ಗಾವಣೆ ಮಾಡಲು ಸೂಚನೆ ನೀಡಲಾಗಿದೆ. ಇದರಿಂದ ಎಲ್ಲರಿಗೂ ಅನುಕೂಲವಾಗಲಿದೆ. ಅಲ್ಲದೆ, ವರ್ಗಾವಣೆ ಬಯಸಿದವರಿಗೂ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮುಂದಿನ ವರ್ಷದಿಂದ ವರ್ಗಾವಣೆ ಪ್ರಕ್ರಿಯೆಯನ್ನು ಆದಷ್ಟು ಬೇಗ ಪ್ರಾರಂಭಿಸಲಾಗುವುದು. ಇನ್ನೊಂದು ವರ್ಷದಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೆ ತರುತ್ತೇವೆ. ಶಿಕ್ಷಕ ಸ್ನೇಹಿ ವರ್ಗಾವಣೆ ಜಾರಿಗೆ ತರಲು ಕೆಲಸ ಮಾಡುತ್ತೇನೆ. ಮುಂದಿನ ವರ್ಷದೊಳಗೆ ತಿದ್ದುಪಡಿ ತರುತ್ತೇವೆ ಎಂದು ಭರವಸೆ ನೀಡಿದರು.

2017ರಲ್ಲಿ ಬಂದ ಈ ವರ್ಗಾವಣೆ ಕಾಯ್ದೆ ಯಾವುದೇ ಚರ್ಚೆ ಇಲ್ಲದೆ ಅಧಿವೇಶನದಲ್ಲಿ ಪಾಸ್ ಆಗಿದೆ. ಯಾವುದೇ ಚರ್ಚೆ ಇಲ್ಲದೆ ಪಾಸ್ ಆಗಿರೋದಕ್ಕೆ ಇಂದು ಸಮಸ್ಯೆ ತಂದಿಟ್ಟಿದೆ. ಹೀಗಾಗಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾದ ಅನಿವಾರ್ಯವಿದೆ. ಕಡ್ಡಾಯ ವರ್ಗಾವಣೆ ಪದ ಅನ್ನೋದೇ ಸರಿಯಿಲ್ಲ. ಈ ಕಡ್ಡಾಯ ವರ್ಗಾವಣೆ ಅನ್ನೋದು ಒಂದು ರೀತಿ ಶಿಕ್ಷೆ ಇದ್ದ ಹಾಗೆ. ಹೀಗಾಗಿ ಕಾಯ್ದೆಗೆ ಅಗತ್ಯ ತಿದ್ದುಪಡಿ ತರಲು ಸಿದ್ದಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಡ್ಡಾಯ ವರ್ಗಾವಣೆ ತಿದ್ದುಪಡಿ ಕಾಯ್ದೆಗೆ ಆದಷ್ಟು ಬೇಗ ತಿದ್ದುಪಡಿ ತರುತ್ತೇವೆ ಎಂದು ಮಾಹಿತಿ ನೀಡಿದರು.

school bags 2

ಖಾಯಿಲೆ ಇರುವವರು ಹಾಗೂ ಬೇರೆ ಸಮಸ್ಯೆ ಇರುವವರಿಗಾಗಿ ಕಡ್ಡಾಯ ವರ್ಗಾವಣೆಗೆ ಗುರುತಿಸಲಾಗಿದೆ. ಪ್ರಾಥಮಿಕ ಶಾಲೆಯಲ್ಲಿ ಕಡ್ಡಾಯ ವರ್ಗಾವಣೆಗೆ 12,622 ಶಿಕ್ಷಕರನ್ನು ಗುರುತಿಸಲಾಗಿದೆ. ಇದರಲ್ಲಿ 6,832 ಜನ ವಿವಿಧ ಕಾರಣಕ್ಕೆ ವಿನಾಯಿತಿ ಪಡೆದಿದ್ದಾರೆ. ಒಟ್ಟು 5,790 ಜನ ವರ್ಗಾವಣೆಗೆ ಅರ್ಹರಾಗಿದ್ದಾರೆ. ಶೇ.4ರಷ್ಟು ವರ್ಗಾವಣೆಯ ನಿಯಮದಂತೆ 4,084 ಜನ ವರ್ಗಾವಣೆಗೆ ಅರ್ಹರಾಗಿದ್ದಾರೆ. ಬಳ್ಳಾರಿಯಲ್ಲೇ ಹೆಚ್ಚು ವರ್ಗಾವಣೆ ನಡೆಯುತ್ತಿದ್ದು, 320 ಒಂದೇ ಜಿಲ್ಲೆಯಲ್ಲಿ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ಮಟ್ಟದಲ್ಲಿ 3,692 ಕಡ್ಡಾಯ ವರ್ಗಾವಣೆಗೆ ಶಿಕ್ಷಕರನ್ನು ಗುರುತಿಸಲಾಗಿದೆ. ಇದರಲ್ಲಿ 2100 ಜನರಿಗೆ ವಿನಾಯಿತಿ ನೀಡಲಾಗಿದೆ. 1,592 ಜನ ವರ್ಗಾವಣೆಗೆ ಅರ್ಹರಾಗಿದ್ದಾರೆ. ಶೇ.4ರ ನಿಯಮದಡಿ 1,234 ಜನ ವರ್ಗಾವಣೆ ಆಗಬೇಕು ಎಂದು ಮಾಹಿತಿ ನಿಡಿದರು.

ವರ್ಗಾವಣೆಗೆ ಅರ್ಹರಾಗಿರುವವರಿಗೆ ಬಿ ಮತ್ತು ಸಿ ಝೋನ್ ನಲ್ಲಿ ಸ್ಥಳವಿಲ್ಲ. ಹೀಗಾಗಿ ಮತ್ತೊಂದು ಸಮಸ್ಯೆ ಆಗಿದೆ. ಈವರೆಗೆ 1,6066 ಶಿಕ್ಷಕರ ವರ್ಗಾವಣೆ ಆಗಿದೆ. ಉಳಿದಂತೆ 4,260 ಕಡ್ಡಾಯ ವರ್ಗಾವಣೆ, ಪರಸ್ಪರ ವರ್ಗಾವಣೆ 3,777 ಮತ್ತು ಅಂತರ್ ಘಟಕ ವರ್ಗಾವಣೆ 1,4076 ಬಾಕಿ ಇದ್ದು, ವರ್ಗಾವಣೆ ಪ್ರಕ್ರಿಯೆ ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ಸಚಿವರು ತಿಳಿಸಿದರು.

SCHOOL

ಇದೇ ವೇಳೆ 10 ಸಾವಿರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಿದ್ಧತೆ ಆಗಿದೆ. ಅಕ್ಟೋಬರ್ ಅಂತ್ಯದೊಳಗೆ ಎಲ್ಲರಿಗೂ ನೇಮಕಾತಿ ಆದೇಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿ ನಂತರ ಕೆಲವು ಶಿಕ್ಷಕರು ಕಡ್ಡಾಯ ವರ್ಗಾವಣೆ ಬೇಡ ಎಂದು ಸಚಿವ ಸುರೇಶ್ ಕುಮಾರ್‍ಗೆ ಮನವಿ ಮಾಡಿದರು. ಕಣ್ಣೀರು ಹಾಕಿ ವರ್ಗಾವಣೆ ಬೇಡ ಎಂದು ಗೋಗರೆದರು. ಆದರೆ, ಇದ್ಯಾವುದಕ್ಕೂ ಒಪ್ಪದ ಸಚಿವರು, ನಿಯಮದ ಪ್ರಕಾರ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ವಲಯವಾರು ಆಧಾರದ ಮೇಲೆ ಶಿಕ್ಷಕರನ್ನು ವರ್ಗಾವಣೆ ಮಾಡಲಾಗುತ್ತದೆ. ಎ ಝೋನ್ ಎಂದರೆ ನಗರ ಪ್ರದೇಶ, ಬಿ ಝೋನ್ ಎಂದರೆ ತಾಲೂಕು, ಸಿ ಝೋನ್ ಎಂದರೆ ಗ್ರಾಮೀಣ ಭಾಗ ಎಂದರ್ಥ.

TAGGED:Department of Primary and Secondary EducationMinister Suresh KumarPublic TVTeachers Transferಪಬ್ಲಿಕ್ ಟಿವಿಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಶಿಕ್ಷಕರ ವರ್ಗಾವಣೆಸಚಿವ ಸುರೇಶ್ ಕುಮಾರ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

IPL MI LSG
Cricket

ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯ

Public TV
ByPublic TV
4 hours ago
Vijay 2
Latest

8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

Public TV
ByPublic TV
4 hours ago
Himanta Sarmas BJP To Win 70 80 Of Assams 126 Seats NDA Sweep Exit Poll
Latest

WE ARE BACK, back with a BANG! – ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಜಯ – 3ನೇ ಅವಧಿಗೂ ಶರ್ಮಾ ಸಿಎಂ ಆಗೋದು ಫಿಕ್ಸ್‌

Public TV
ByPublic TV
4 hours ago
SUVENDU ADHIKARI
Latest

ಬಂಗಾಳದಲ್ಲಿ ಬಿಜೆಪಿ ಗೆಲುವು, ಟಿಎಂಸಿ ಸೋಲಿಗೆ ಕಾರಣಗಳೇನು?

Public TV
ByPublic TV
4 hours ago
big bulletin 04 may 2026 part 1
Big Bulletin

ಬಿಗ್‌ ಬುಲೆಟಿನ್‌ 04 May 2026 ಭಾಗ-1

Public TV
ByPublic TV
4 hours ago
big bulletin 04 may 2026 part 2
Big Bulletin

ಬಿಗ್‌ ಬುಲೆಟಿನ್‌ 04 May 2026 ಭಾಗ-2

Public TV
ByPublic TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?