ಬೆಂಗಳೂರು: ಪ್ರೀತಿಸುವಂತೆ ಯುವತಿಯನ್ನು ಪೀಡಿಸಿ, ಹಲ್ಲೆ ಮಾಡಿರುವ ಕಾಮುಕ ಟೆಕ್ಕಿಯನ್ನು (Techie) ಬನಶಂಕರಿ ಪೋಲಿಸರು (Banashankari Police) ಬಂಧಿಸಿದ್ದಾರೆ.
ಶ್ರೀಕಾಂತ್(45) ಬಂಧಿತ ಟೆಕ್ಕಿ. ಶ್ರೀಕಾಂತ್ಗೆ ಈ ಹಿಂದೆ ಮದುವೆಯಾಗಿದ್ದು, ಆತನ ಮನೆಯಲ್ಲಿ ಬಾಡಿಗೆಗೆ ಇದ್ದ 20 ವರ್ಷದ ಕಾಲೇಜು ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದನು. ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ – ಜಮ್ಮು ಸರ್ಕಾರ ಅಲರ್ಟ್; ವೈದ್ಯಕೀಯ ಸಿಬ್ಬಂದಿ ರಜೆ ರದ್ದು
ಈ ಬಗ್ಗೆ ಯುವತಿಯು ಆತನ ಪತ್ನಿಗೆ ದೂರು ನೀಡಿದ್ದಳು. ಆದರೆ ಇದರಿಂದ ಯಾವುದೇ ಪ್ರಯೋಜನ ಆಗಿರಲಿಲ್ಲ. ಯುವತಿಯು ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಟೆಕ್ಕಿಯು ಕೋಪಗೊಂಡಿದ್ದ. ಇದನ್ನೂ ಓದಿ: ದೇವದುರ್ಗದಲ್ಲಿ ಸಿಡಿಲಿಗೆ ಹೊತ್ತಿ ಉರಿದ ಬೊಲೆರೋ – ನಾಲ್ವರಿಗೆ ಗಾಯ
ಕಳೆದ 3 ದಿನಗಳ ಹಿಂದೆ ಯುವತಿ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಬೇರೊಬ್ಬ ಯುವಕನೊಂದಿಗೆ ನಿಂತಿದ್ದಳು. ಇದನ್ನೂ ಟೆಕ್ಕಿ ಗಮನಿಸಿದ್ದ. ಬೇರೊಬ್ಬ ಯುವಕನೊಂದಿಗೆ ಪ್ರೀತಿ ಇರುವುದಕ್ಕೆ ನಿರಾಕರಿಸುತ್ತಿದ್ದೀಯಾ ಎಂದು ಟೆಕ್ಕಿಯು ಯುವಕ ಯುವತಿಗೆ ಚಾಕು ಹಾಕಿದ್ದ. ಇದನ್ನೂ ಓದಿ: ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!
ನೊಂದ ಯುವತಿಯು ಟೆಕ್ಕಿಯ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಯುವತಿ ಕೊಟ್ಟ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಬನಶಂಕರಿ ಪೊಲೀಸರು ಕಾಮುಕ ಟೆಕ್ಕಿಯನ್ನು ಬಂಧನ ಮಾಡಿದ್ದಾರೆ.