ಬೆಂಗಳೂರು: ಬಹುಮಹಡಿ ಕಟ್ಟಡದ ಕಿಟಕಿಯಿಂದ ಹಾರಿ ಟೆಕ್ಕಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಐಟಿಪಿಎಲ್ ನಲ್ಲಿ ನಡೆದಿದೆ.
ಭವೇಶ್ ಜಿಸ್ವಾಲ್(23) ಆತ್ಮಹತ್ಯೆ ಶರಣಾದ ಯುವಕ. ಭವೇಶ್ ಎಂಯು ಸಿಗ್ಮಾ ಕಂಪನಿಯ ಉದ್ಯೋಗಿಯಾಗಿದ್ದು, ಸಂಜೆ ನಾಲ್ಕು ಗಂಟೆ ಸುಮಾರಿನಲ್ಲಿ 12ನೇ ಮಹಡಿಯ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವೈಟ್ಫೀಲ್ಡ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೆಲಸಕ್ಕೆ ಬಂದು ಕಂಪೆನಿಯ ಕಟ್ಟಡದಿಂದ ಜಿಗಿದು ಭುವನೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಕಂಪೆನಿಯವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಇಲ್ಲವೇ ವೈಯಕ್ತಿಕ ಕಾರಣದಿಂದಾಗಿ ಆತ್ಮಹತ್ಯೆಗೆ ಶರಣಾದಾರೋ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.
ಸದ್ಯ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.