ಪೊಲೀಸರ ಕಿರುಕುಳದಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ

Public TV
1 Min Read
DASHARATH

ಮುಂಬೈ: ಕುಟುಂಬದ ಮೇಲೆ ಪೊಲೀಸರು ನೀಡುತ್ತಿದ್ದ ಕಿರುಕುಳದಿಂದ ಮನನೊಂದ ಸಾಫ್ಟ್ ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.

ದಶರಥ ರೆಡ್ಡಿ (24) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿಯಾಗಿದ್ದು, ಇವರು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಮೂಲತಃ ಮೆಟ್ಪಾಲಿ ಮಂಡಲ್ನ ಆರ್ಚ್ ಮೂಲದವರಾಗಿರೋ ದಶರಥ ಕುಟುಂಬಕ್ಕೆ ಪೊಲೀಸರು ಭೂ ವಿವಾದದಿಂದ ಕಿರುಕುಳ ನೀಡುತ್ತಿದ್ದರು. ಇದರಿಂದ ಅವರ ಕುಟುಂಬ ಪ್ರತಿನಿತ್ಯ ಭಯದಿಂದಲೇ ಜೀವನ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರ ಮೇಲೆ ಸಿಟ್ಟುಗೊಂಡಿದ್ದ ದಶರಥ ಬೆಂಗಳೂರಿನಿಂದ ತನ್ನ ಊರಿಗೆ ವಾಪಾಸ್ಸಾಗಿ ಪೊಲೀಸರನ್ನು ಹುಡುಕಾಡಲು ಶುರು ಮಾಡಿದ್ದಾರೆ. ಅಂತೆಯೇ ಶನಿವಾರ ರಾತ್ರಿ ಎಲ್ಲರೂ ನಿದ್ರಿಸುತ್ತಿದ್ದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸದ್ಯ ಪೊಲೀಸಪ್ಪನನ್ನು ತಕ್ಷಣವೇ ಕೆಲಸದಿಂದ ವಜಾ ಮಾಡುವಂತೆ ದಶರಥ ಸಂಬಂಧಿಕರು ಹಾಗೂ ನೆರೆಮನೆಯವರು ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಧರಣಿ ನಡೆಸಿದ್ದಾರೆ. ಇವರ ಪ್ರತಿಭಟನೆಯಿಂದಾಗಿ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಿ, ತನಿಖೆ ಮುಂದುವರೆಸಿದ್ದಾರೆ.

POLICE 1

Share This Article
Leave a Comment

Leave a Reply

Your email address will not be published. Required fields are marked *