ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಟೆಕ್ಕಿ ಯುವತಿಯ ತಲೆ ಮೇಲೆ ಲಾರಿ ಹರಿದ ಪರಿಣಾಮ ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಹೊಸೂರು ಮುಖ್ಯರಸ್ತೆಯ ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ವೀರಸಂದ್ರ ಸಿಗ್ನಲ್ ಬದೀ ಭೀಕರ ಅಪಘಾತ ನೆಡೆದಿದೆ. ವೈಟ್ ಫೀಲ್ಡ್ ನ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 26 ವರ್ಷದ ಕಾವ್ಯಶ್ರೀ ಮೃತ ಯುವತಿ.
ಮೂಲತಃ ಗುಜರಾತಿನ ವಡೋದರ ಮೂಲದವರಾದ ಕಾವ್ಯಶ್ರೀ ಆಕ್ಸಿಸ್ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಲಾರಿ ಡಿಕ್ಕಿ ಹೊಡೆದು ಈಕೆಯ ತಲೆಯ ಮೇಲೆ ಹರಿದಿದೆ. ಈಕೆ ಹೆಲ್ಮೆಟ್ ಧರಿಸಿದ್ದರೂ ಕೂಡ ಹೆಲ್ಮೆಟ್ ಸಮೇತ ತಲೆ ಛಿದ್ರ ಛಿದ್ರಗೊಂಡು ಯುವತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಲಾರಿ ಚಾಲಕನನ್ನು ವಶಕ್ಕೆ ಪಡೆದ ಎಲೆಕ್ಟ್ರಾನಿಕ್ಸ್ ಸಿಟಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.