Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆರೆಯಲ್ಲಿ ತೆಪ್ಪ ಮುಗುಚಿ ಟೆಕ್ಕಿ ಕಣ್ಮರೆ – ಪಾರ್ಟಿ ಅಮಲಿನಲ್ಲಿ ಮುಳುಗಿದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆರೆಯಲ್ಲಿ ತೆಪ್ಪ ಮುಗುಚಿ ಟೆಕ್ಕಿ ಕಣ್ಮರೆ – ಪಾರ್ಟಿ ಅಮಲಿನಲ್ಲಿ ಮುಳುಗಿದ್ರು

Bengaluru City

ಕೆರೆಯಲ್ಲಿ ತೆಪ್ಪ ಮುಗುಚಿ ಟೆಕ್ಕಿ ಕಣ್ಮರೆ – ಪಾರ್ಟಿ ಅಮಲಿನಲ್ಲಿ ಮುಳುಗಿದ್ರು

Public TV
Last updated: February 8, 2020 2:19 pm
Public TV
Share
3 Min Read
techei copy
SHARE

– ಶವಕ್ಕಾಗಿ ಕಲ್ಕೆರೆ ಕೆರೆಯಲ್ಲಿ ತೀವ್ರ ಶೋಧ
– ವಿಹಾರಕ್ಕೆ ಹೋಗಿದ್ದ ಟೆಕ್ಕಿಗಳು

ಬೆಂಗಳೂರು: ಸಿಲಿಕಾನ್ ಸಿಟಿಯ ರಾಮಮೂರ್ತಿನಗರದ ಕಲ್ಕೆರೆ ಕೆರೆಯಲ್ಲಿ ತೆಪ್ಪ ಮುಗುಚಿ ಟೆಕ್ಕಿಯೊಬ್ಬರು ಕಣ್ಮರೆಯಾಗಿರುವ ಘಟನೆ ನಡೆದಿದೆ.

ಕೊಡಗು ವಿರಾಜಪೇಟೆ ಮೂಲದ ಸಚಿನ್ ಕಣ್ಮರೆಯಾಗಿರುವ ಟೆಕ್ಕಿ. ಸಚಿನ್ ಮತ್ತು ಆರ್‌ಟಿ ನಗರದ ಉಲ್ಲಾಸ್ ಇಬ್ಬರೂ ಟೆಕ್ಕಿಗಳಾಗಿದ್ದು, ಶುಕ್ರವಾರ ರಾತ್ರಿ ಕಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದರು. ಮುಂಜಾನೆ ಸುಮಾರು 3 ಗಂಟೆಗೆ ಇಬ್ಬರು ಕೆಲ್ಕೆರೆ ಕೆರೆ ಏರಿ ಮೇಲೆ ಬಂದಿದ್ದರು. ಈ ವೇಳೆ ಕೆರೆ ಏರಿ ಮೇಲೆ ತೆಪ್ಪ ಕಂಡು ತೆಪ್ಪದಲ್ಲಿ ವಿಹಾರಕ್ಕೆ ಹೊರಟ್ಟಿದ್ದರು.

ತೆಪ್ಪದಲ್ಲಿ ಹೋಗುವಾಗ ಹುಟ್ಟು ಜಾರಿ ನೀರಿಗೆ ಬಿದ್ದಿದೆ. ಈ ವೇಳೆ ಕೈಯಲ್ಲಿ ತೆಪ್ಪ ನಡೆಸುವಾಗ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳು ಕೆರೆಗೆ ಬಿದ್ದಿದ್ದಾರೆ. ಟೆಕ್ಕಿ ಉಲ್ಲಾಸ ಈಜಿ ದಡ ಸೇರಿದ ಬದುಕುಳಿದ್ದಾರೆ. ಆದರೆ ಸಚಿನ್ ಮಾತ್ರ ಎಲ್ಲೂ ಪತ್ತೆಯಾಗಿಲ್ಲ. ತಕ್ಷಣ ಉಲ್ಲಾಸ್ ತನ್ನ ಅಣ್ಣನಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬಂದು ಕಲ್ಕೆರೆ ಕೆರೆಯಲ್ಲಿ ಟೆಕ್ಕಿ ಸಚಿನ್‍ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಮಧ್ಯಾಹ್ನನವಾದರೂ ಸಚಿನ್ ಪತ್ತೆಯಾಗಿಲ್ಲ.

vlcsnap 2020 02 08 14h07m06s47

ಉಲ್ಲಾಸ್ ಬ್ಯಾಗ್ ಹಾಕಿಕೊಂಡಿದ್ದರು. ಹೀಗಾಗಿ ಬ್ಯಾಗ್ ಹಾಕಿದ್ದರಿಂದ ಸೇಫ್ ಆಗಿ ಉಲ್ಲಾಸ್ ದಡ ಸೇರಿದ್ದಾರೆ. ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಈ ನಡೆದ ಘಟನೆ ನಡೆದಿದೆ. ಸಚಿನ್ ಮಾನ್ಯತಾ ಟೆಕ್ ಪಾರ್ಕ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಅಲ್ಲದೇ ಸಚಿನ್‍ಗೆ ಈಜು ಬರುತ್ತಿತ್ತು ಎಂದು ಹೇಳಲಾಗುತ್ತಿದೆ. ಆದರೆ ತೆಪ್ಪ ಮಗುಚಿದಾಗ ಈಜಿ ದಡ ತಲುಪಲು ವಿಫಲರಾಗಿದ್ದಾರೆ.

ರಾತ್ರಿ ಸುಮಾರು 12 ಗಂಟೆಗೆ ಬೀಟ್ ಬಂದಿದ್ದೆ. ಬಳಿಕ ಮತ್ತೆ 3 ಗಂಟೆಗೆ ಬೀಟ್‍ಗೆ ಬಂದೆ. ಆದರೆ ಈ ವೇಳೆ ರಸ್ತೆ ಪಕ್ಕ ಕುಳಿತುಕೊಂಡು ಓರ್ವ ಅಳುತಿದ್ದರು. ಏನಾಯ್ತು ಅಂತ ಕೇಳಿದಾಗ ಕೆರೆಯಲ್ಲಿ ಮುಳುಗಿರುವ ಬಗ್ಗೆ ಹೇಳಿದರು. ರಾತ್ರಿ ಪಾರ್ಟಿ ಮಾಡೊಕೆ ಬಂದಿದ್ದಾರೆ. ಕುಡಿದು ಹೋದಾಗ ಈ ಘಟನೆ ಆಗಿದೆ. ಶುಕ್ರವಾರ ನಾನೊಬ್ಬನೇ ಇದ್ದೆ. ನಾನು ಬರುವ ವೇಳೆಗಾಗಲೇ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದರು. ಯಾರನ್ನೂ ಕೂಡ ಕೆರೆ ಒಳಗೆ ಬಿಡೋದಿಲ್ಲ. ಇವರು ಕುಡಿದು ಬಂದು ತೆಪ್ಪ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆರೆಯ ಸೆಕ್ಯೂರಿಟಿ ರಾಜೇಶ್ ಹೇಳಿದ್ದಾನೆ.

vlcsnap 2020 02 08 14h08m51s70

ಅಪರೂಪಕ್ಕೆ ಗೆಳೆಯರು ಭೇಟಿ:
ಸಚಿನ್ ಮತ್ತು ಉಲ್ಲಾಸ್ ಇಬ್ಬರ ಅಪರೂಪಕ್ಕೆ ಭೇಟಿಯಾಗಿದ್ದರು. ಈ ಹಿಂದೆ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ಇಬ್ಬರು ಬೇರೆ ಕಂಪನಿಗೆ ಕೆಲಸ ಬದಲಾಯಿಸಿದ್ದರು. ಅದರಂತೆ ಸಚಿನ್ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಉದ್ಯೋಗದಲ್ಲಿದ್ದರು. ವೀಕೆಂಡ್ ಹಿನ್ನೆಲೆಯಲ್ಲಿ ಶುಕ್ರವಾರ ಇಬ್ಬರು ಭೇಟಿಯಾಗಿದ್ದರು. ಈ ವೇಳೆ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿಕೊಂಡು ಕೆರೆಯಲ್ಲಿ ವಿಹಾರ ಮಾಡುವುದಕ್ಕೆ ಇಬ್ಬರು ಬಂದಿದ್ದರು. ಆಗ ಸಚಿನ್ ಬಲವಂತ ಮಾಡಿ ಉಲ್ಲಾಸ್ ಕರೆತಂದಿದ್ದರು. ಈ ಹಿಂದೆ ಒಂದು ಬಾರಿ ಇದೇ ರೀತಿ ತೆಪ್ಪದಲ್ಲಿ ವಿಹಾರ ಹೋಗಿ ಬಂದಿದ್ದರು. ಅದೇ ರೀತಿ ರಾತ್ರಿ ತೆಪ್ಪದಲ್ಲಿ ವಿಹಾರ ಮಾಡಲು ಬಂದಿದ್ದರು. ಇಬ್ಬರು ಬಂದ ವೇಳೆ ಈ ಅವಘಡ ಸಂಭವಿದೆ.

ಉಲ್ಲಾಸ್ ಹಾಗೂ ಸಚಿನ್ ಕೆರೆ ಮಧ್ಯದ ಐಲ್ಯಾಂಡ್‍ಗೆ ತೆರಳಲು ಮುಂದಾಗಿದ್ದರು. ಆದರೆ ಸಚಿನ್ ಹೆಚ್ಚು ಭಾರವಿದ್ದ, ಹೀಗಾಗಿ ಒಂದೇ ಕಡೆ ತೆಪ್ಪ ವಾಲಿತ್ತು. ಆದ್ದರಿಂದ ಕೆರೆ ಏರಿಯಿಂದ 100 ಮೀಟರ್ ತೆರಳುತ್ತಿದ್ದಂತೆ ತೆಪ್ಪ ಆಯ ತಪ್ಪಿದೆ. ಈ ವೇಳೆ ನೀರಿನಲ್ಲೇ ಹುಟ್ಟನ್ನು ಬಿಟ್ಟಿದ್ದಾರು. ಆಗ ತೆಪ್ಪದೊಳಗೆ ನೀರು ತುಂಬಿ ಮುಗುಚಿ ಬಿದ್ದಿತ್ತು. ಇಬ್ಬರು ನುರಿತ ಈಜಿಗಾರರಲ್ಲ, ಸಾಧಾರಣ ಈಜು ಕಲಿತಿದ್ದರು. ಸಚಿನ್ ಹೆಚ್ಚು ಭಾರ ಹಾಗೂ ಮದ್ಯಪಾನ ಮಾಡಿದ್ದರಿಂದ ಈಜಲಾಗದೇ ನೀರಿನಲ್ಲಿ ಮುಳುಗಿರೋ ಸಾಧ್ಯತೆ ಇದೆ ಎಂದು ಶಂಕಿಸಲಾಗುತ್ತಿದೆ.

vlcsnap 2020 02 08 14h08m39s204

ವರ್ಷದ ಹಿಂದೆ ಮದುವೆ:
ಉಲ್ಲಾಸ್ ಹಾಗೂ ಸಚಿನ್ ಇಬ್ಬರೂ ವರ್ಷದ ಹಿಂದೆ ಮದುವೆಯಾಗಿದ್ದರು. ಕಲ್ಕೆರೆಯ ಯುವತಿಯನ್ನು ಉಲ್ಲಾಸ್ ಮದುವೆಯಾಗಿದ್ದರು. ಅಲ್ಲದೇ ಉಲ್ಲಾಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿಯ ಸಹೋದರ ಕೃಷ್ಣಪ್ಪರ ಅಳಿಯರಾಗಿದ್ದಾರೆ. ಉಲ್ಲಾಸ್ ಹೆಂಡತಿ, ಉಲ್ಲಾಸ್ ಮತ್ತು ಅವರ ಸ್ನೇಹಿತ ಕೆರೆ ಬಳಿ ಹೋಗಿದ್ದರಂತೆ. ಆದರೆ ತೆಪ್ಪ ಮಗುಚಿ ಸಚಿನ್ ಕಾಣಿಸುತ್ತಿಲ್ಲ ಎಂದು ಅಪ್ಪನ ಬಳಿ ವಿಚಾರ ಹೇಳಿದ್ದಾರೆ. ಕೂಡಲೇ ಉಲ್ಲಾಸ್ ಮಾವ ಕೃಷ್ಣಪ್ಪ ಮೀನುಗಾರರಿಗೆ ಫೋನ್ ಮಾಡಿ ಕೆರೆ ಬಳಿ ಬಂದಿದ್ದಾರೆ. ಕಾರಿನಲ್ಲಿ ಇಡೀ ಪ್ರದೇಶವನ್ನು ಒಂದು ರೌಂಡ್ ಬಂದಿದ್ದಾರೆ. ಸಚಿನ್ ಕಾಣದಾದಾಗ ಅವರ ಪತ್ನಿ ಮತ್ತು ಕುಟುಂಬಸ್ಥರಿಗೆ ಕರೆ ಮಾಡಿದ್ದಾರೆ. ಈ ಘಟನೆಯ ಹಿನ್ನೆಲೆಯನ್ನು ಉಲ್ಲಾಸ್ ಮಾವ ಕೃಷ್ಣಪ್ಪ ಸಂಪೂರ್ಣವಾಗಿ ವಿವರಿಸಿದ್ದಾರೆ.

TAGGED:bengaluruFirefighterslakepartypolicePublic TVtechieTeppaಅಗ್ನಿಶಾಮಕ ದಳಕೆರೆಟೆಕ್ಕಿಗಳುತೆಪ್ಪಪಬ್ಲಿಕ್ ಟಿವಿಪಾರ್ಟಿಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Turkey School Shooting By Student
Crime

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – 9 ಮಂದಿ ದುರ್ಮರಣ, ದಾಳಿಕೋರ ಸಾವು

Public TV
By Public TV
3 minutes ago
ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
24 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
50 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?