Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪ-ಅಮ್ಮನಿಗೆ ಬಾಯ್ ಹೇಳಿ ಚಲಿಸ್ತಿದ್ದ ರೈಲಿನಿಂದ ಜಿಗಿದ ಟೆಕ್ಕಿ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪ್ಪ-ಅಮ್ಮನಿಗೆ ಬಾಯ್ ಹೇಳಿ ಚಲಿಸ್ತಿದ್ದ ರೈಲಿನಿಂದ ಜಿಗಿದ ಟೆಕ್ಕಿ..!

Bengaluru City

ಅಪ್ಪ-ಅಮ್ಮನಿಗೆ ಬಾಯ್ ಹೇಳಿ ಚಲಿಸ್ತಿದ್ದ ರೈಲಿನಿಂದ ಜಿಗಿದ ಟೆಕ್ಕಿ..!

Public TV
Last updated: December 19, 2018 5:04 pm
Public TV
Share
2 Min Read
TECHIE
SHARE

-ಮಗನಿಗೆ ಏನಾಗಿದೆಯೆಂದು ನೋಡಲು ತಂದೆಯೂ ರೈಲಿನಿಂದ ಹಾರಿದ್ರು

ಬೆಂಗಳೂರು: ಕೇರಳದಿಂದ ತನ್ನನ್ನು ನೋಡಲು ನಗರಕ್ಕೆ ಬಂದಿದ್ದ ತಂದೆ-ತಾಯಿಯನ್ನು ಕಳುಹಿಸಲೆಂದು ಹೋದ ಟೆಕ್ಕಿ, ಚಲಿಸುತ್ತಿರುವ ರೈಲಿನಿಂದ ಹಾರಿದ ಪರಿಣಾಮ ಮೃತಪಟ್ಟ ಮನಕಲಕುವ ಘಟನೆಯೊಂದು ಸೋಮವಾರ ನಡೆದಿರುವುದಾಗಿ ವರದಿಯಾಗಿದೆ.

ಈ ಘಟನೆ ಪೂರ್ವ ಬೆಂಗಳೂರಿನ ಕಾರ್ಮೆಲರಂ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೃತ ದುರ್ದೈವಿ ಟೆಕ್ಕಿಯನ್ನು 26 ವರ್ಷದ ವಿಕ್ರಮ್ ವಿಜಯನ್ ಎಂದು ಗುರುತಿಸಲಾಗಿದೆ. ಇವರು ಪ್ರತಿಷ್ಠಿತ ವಿಪ್ರೊ ಕಂಪೆನಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದಾರೆ. ಘಟನೆಯಲ್ಲಿ ತಂದೆ 65 ವರ್ಷದ ವಿಜಯನ್ ಚಕ್ಕಿಂಗಲ್ ಅವರಿಗೂ ಗಾಯಳಾಗಿವೆ.

ಘಟನೆಯೇನು..?
ವಿಕ್ರಮ್ ಎಚ್ ಎಸ್ ಆರ್ ಲೇಔಟ್ ನಲ್ಲಿ ನೆಲೆಸಿದ್ದು, ಪ್ರತಿಷ್ಠಿತ ವಿಪ್ರೊ ಕಂಪೆನಿಯ ಟೆಕ್ಕಿಯಾಗಿದ್ದಾರೆ. ಇವರ ತಂದೆ ವಿಜಯನ್ ಚಕ್ಕಿಂಗಲ್ ನಿವೃತ್ತ ಟೆಕ್ನಿಶಿಯನ್ ಆಗಿದ್ದರು. ಇವರು ಮೂಲತಃ ಕೇರಳದ ಪಾಲಕಾಡ್ ಜಿಲ್ಲೆಯ ಕಂಜಿಕೋಡ್ ನಿವಾಸಿಯಾಗಿದ್ದಾರೆ. ಸದ್ಯ ಘಟನೆಯಲ್ಲಿ ಗಾಯಗೊಂಡ ಇವರು ಮಾರತಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

unnamed

ವಿಜಯನ್ ಹಾಗೂ ಪತ್ನಿ ಉದಯ ಕುಮಾರಿ ಕೆಲ ದಿನಗಳ ಹಿಂದೆ ಮಗನ ಜೊತೆ ಇರಲು ಬಂದಿದ್ದರು. ಬಳಿಕ ಸೋಮವಾರ ಯಶವಂತಪುರ-ಕಣ್ಣೂರು ರೈಲಿನಲ್ಲಿ ಮತ್ತೆ ತಮ್ಮ ಊರು ಪಾಲಕಾಡ್ ಗೆ ತೆರಳಲೆಂದು ಮಗ ವಿಕ್ರಮ್ ಜೊತೆ ಕಾರ್ಮೆಲರಂ ರೈಲು ನಿಲ್ದಾಣಕ್ಕೆ ಬಂದಿದ್ದಾರೆ. ಅಂತೆಯೇ ರಾತ್ರಿ 8.56ರ ಸುಮಾರಿಗೆ ರೈಲು ಫ್ಲಾಟ್ ಫಾರಂ ನಂಬರ್ 1ಕ್ಕೆ ಬಂದು ಕೆಲ ನಿಮಿಷ ನಿಂತಿತ್ತು.

ಹೀಗಾಗಿ ರೈಲು ನಿಂತಿದೆಯೆಂದು ವಿಕ್ರಮ್ ಕೂಡ ತನ್ನ ಹೆತ್ತವರ ಲಗೇಜ್ ಹಿಡಿದುಕೊಂಡು ತಾವು ಬುಕ್ ಮಾಡಿದ್ದ ಸೀಟ್ ಹುಡುಕಿಕೊಡಲೆಂದು ರೈಲಿಗೆ ಹತ್ತಿದ್ದಾರೆ. ಅಂತೆಯೇ ಎಸಿ ಕಂಪಾರ್ಟ್ ಮೆಂಟ್ ನಲ್ಲಿ ತಾವು ರಿಸರ್ವ್ ಮಾಡಿದ ಸೀಟಿಗೆ ತೆರಳಿ ಅಪ್ಪ-ಅಮ್ಮನ ಲಗೇಜ್ ಇಟ್ಟು, ಅವರಿಗೆ ಸೀಟ್ ಇಲ್ಲಿದೆ ಅಂತ ಹೇಳಿದ್ದಾರೆ. ಅದಾಗಲೇ ರೈಲು ಚಲಿಸುತ್ತಿರುವುದು ವಿಕ್ರಮ್ ಗಮನಕ್ಕೆ ಬಂದಿದೆ. ಕೂಡಲೇ ಹೆತ್ತವರಿಗೆ ಹ್ಯಾಪಿ ಜರ್ನಿ ಅಂತ ವಿಶ್ ಮಾಡಿ ರೈಲಿನಿಂದ ಕೆಳಗಿಳಿಯಲು ಓಡಿದ್ದಾರೆ.

vikram train accident 750c500

ರೈಲು ಚಲಿಸುತ್ತಿತ್ತು. ಹೀಗಾಗಿ ವಿಕ್ರಮ್ ರೈಲು ಚಲಿಸುತ್ತಿದ್ದ ವಿರುದ್ಧ ದಿಕ್ಕಿನಿಂದ ಹಾರಿದ್ದಾರೆ. ಪರಿಣಾಮ ಕಂಟ್ರೋಲ್ ತಪ್ಪಿ ಫ್ಲಾಟ್ ಫಾರಂ ಹಾಗೂ ರೈಲ್ವೇ ಟ್ರ್ಯಾಕ್ ಮಧ್ಯೆ ಬಿದ್ದಿದ್ದು, ಚಕ್ರಗಳ ನಡುವೆ ಸಿಲುಕಿದ್ದಾರೆ. ರೈಲು ಚಲಿಸುತ್ತಿದ್ದುದರಿಂದ ಟೆಕ್ಕಿಯ ಕಾಲು, ಕೈ ಹಾಗೂ ತಲೆ ಬೇರೆಬೇರೆಯಾಗಿವೆ. ಮಗ ಹಾರಿದ ವಿಚಾರ ಗಮನಕ್ಕೆ ಬರುತ್ತಿದ್ದಂತೆಯೇ ವಿಕ್ರಮ್ ತಂದೆ ವಿಜಯನ್, ಮಗನಿಗೆ ಏನಾಗಿದೆ ಅಂತ ತಿಳಿದುಕೊಳ್ಳಲು ತಾವು ಕೂಡ ರೈಲಿನಿಂದ ಹಾರಿದ್ದಾರೆ. ಹೀಗಾಗಿ ಅವರಿಗೂ ಗಾಯಗಳಾಗಿವೆ ಅಂತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳನ್ನು ಕಂಡ ಉದಯಕುಮಾರಿ ಇತರ ರೈಲು ಪ್ರಯಾಣಿಕರಲ್ಲಿ ರೈಲನ್ನು ನಿಲ್ಲಿಸುವಂತೆ ಬೇಡಿಕೊಂಡಿದ್ದಾರೆ. ಹೀಗಾಗಿ ಪ್ರಯಾಣಿಕರು ರೈಲಿನ ಚೈನ್ ಎಳೆದು ನಿಲ್ಲಿಸಿದ್ದಾರೆ. ಕೂಡಲೇ ಗಾಯಗೊಂಡಿರುವ ವಿಜಯನ್ ಅವರನ್ನು ಮಾರತಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಅಂತ ಪೊಲೀಸರು ತಿಳಿಸಿದ್ದಾರೆ.

WAP4 22904 12625 AWY e1545218831593

ಘಟನೆಯ ಬಳಿಕ ಬೈಯಪ್ಪನಹಳ್ಳಿ ರೈಲ್ವೇ ಪೊಲೀಸರು ಮೃತ ವಿಕ್ರಮ್ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಮಂಗಳವಾರ ಬೆಳಗ್ಗೆ ವಿಕ್ರಮ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದೆ. ಸದ್ಯ ಪ್ರಕರಣ ಸಂಬಂಧ ಕಾರ್ಮೆಲರಂ ರೈಲ್ವೇ ನಿಲ್ದಾಣದ ಸ್ಟೇಷನ್ ಮಾಸ್ಟರ್ ಚಂದನ್ ಕುಮಾರ್ ಅವರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurukeralaPublic TVtechietrainಕೇರಳಟೆಕ್ಕಿಪಬ್ಲಿಕ್ ಟಿವಿಬೆಂಗಳೂರುರೈಲು
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Online Gas Booking
Bengaluru City

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Public TV
By Public TV
15 minutes ago
Kharg Island
Latest

ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌

Public TV
By Public TV
16 minutes ago
Mojtaba Khamenei 1 1
Latest

ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ತಲೆಗೆ 92.47 ಕೋಟಿ ಬಹುಮಾನ

Public TV
By Public TV
50 minutes ago
daily horoscope dina bhavishya
Astrology

ದಿನ ಭವಿಷ್ಯ 14-03-2026

Public TV
By Public TV
1 hour ago
cheng x ship karwar
Latest

ಯುದ್ಧ ಶುರುವಾದ ಬಳಿಕ ಯುಎಇಯಿಂದ ಕಾರವಾರಕ್ಕೆ ಬಂತು ಮೊದಲ ಹಡಗು

Public TV
By Public TV
2 hours ago
IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?