ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಟೆಕ್ಕಿ ಆತ್ಮಹತ್ಯೆ

Public TV
1 Min Read
techie suicide 1

– 6 ಹಾಗೂ 2 ವರ್ಷದ ಮಕ್ಕಳನ್ನೇ ಕೊಂದ
– ಹಣಕಾಸಿನ ಸಮಸ್ಯೆಯಿಂದ ಆತ್ಮಹತ್ಯೆ ಶಂಕೆ

ಹೈದರಾಬಾದ್: ಟೆಕ್ಕಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರ ಪ್ರದೇಶದ ಹೈದರಾಬಾದ್‍ನಲ್ಲಿ ನಡೆದಿದೆ.

ಪ್ರದೀಪ್(40), ಸ್ವಾತಿ(35), ಕಲ್ಯಾಣ ಕೃಷ್ಣ(6) ಹಾಗೂ ಜಯ ಕೃಷ್ಣ(2) ಮೃತಪಟ್ಟವರು. ಸೋಮವಾರ ಎಲ್.ಬಿ ನಗರದ ಹಸ್ತಿನಾಪುರದಲ್ಲಿರುವ ಮನೆಯಲ್ಲಿ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರದೀಪ್ ಆತನ ಪತ್ನಿ ಹಾಗೂ ಮಕ್ಕಳ ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Police Jeep 1 1

ಪ್ರದೀಪ್ ಊಟದಲ್ಲಿ ವಿಷ ಬೆರಸಿ ಪತ್ನಿ- ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಮಕ್ಕಳ ಮೃತದೇಹ ಬೆಡ್‍ರೂಮಿನಲ್ಲಿ ಪತ್ತೆಯಾಗಿತ್ತು. ಹಣಕಾಸಿನ ಸಮಸ್ಯೆಯಿಂದಾಗಿ ಪ್ರದೀಪ್ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ಪ್ರದೀಪ್ ಊಟದಲ್ಲಿ ವಿಷಯ ಬೆರಸಿ ತನ್ನ ಪತ್ನಿ ಹಾಗೂ ಮಕ್ಕಳನ್ನು ಕೊಲೆ ಮಾಡಿದ್ದಾನೆ. ಬಳಿಕ ತಾನು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದಾನೆ ಎಂಬ ಶಂಕೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.

uttar pradesh police jpg 1575793938 e1577603453458

ಭಾನುವಾರ ಪ್ರದೀಪ್ ಮನೆಯಿಂದ ಯಾರು ಹೊರ ಬರದನ್ನು ನೋಡಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಾಗಿಲನ್ನು ಒಡೆದು ಮನೆಯೊಳಗೆ ಹೋಗಿದ್ದಾರೆ. ಈ ವೇಳೆ ನಾಲ್ವರ ಮೃತದೇಹ ಹಾಸಿಗೆ ಮೇಲೆ ಪತ್ತೆಯಾಗಿದೆ.

ಸದ್ಯ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಒಸ್ಮಾನಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ವರದಿ ಬಂದ ನಂತರ ಈ ಬಗ್ಗೆ ತನಿಖೆ ನಡೆಸಲಿದ್ದಾರೆ. ಪ್ರದೀಪ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ತಂದೆಗೆ ಪತ್ರ ಬರೆದಿದ್ದು, ಅದರಲ್ಲಿ ನಾನು ನಿಮಗೆ ಭಾರವಾಗಿರಲು ಇಷ್ಟವಿಲ್ಲ ಎಂದು ಉಲ್ಲೇಖಿದ್ದನು.

police 1

Share This Article
Leave a Comment

Leave a Reply

Your email address will not be published. Required fields are marked *