ಬೆಂಗಳೂರು: ಗೃಹಿಣಿಯೊಬ್ಬರು ಮದುವೆ ವಾರ್ಷಿಕೋತ್ಸವ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ನವ್ಯಾ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಈ ಘಟನೆ ಹೆಬ್ಬಾಳ ಸಮೀಪದ ಕೆಂಪಾಪುರದಲ್ಲಿ ನಡೆದಿದೆ. ರಮೇಶ್ ಬಾಬು ಮತ್ತು ನವ್ಯಾ ಮದುವೆಯಾಗಿ ಹತ್ತು ವರ್ಷಗಳಾಗಿತ್ತು. ರಮೇಶ್ ಬಾಬು ಸಾಫ್ಟ್ ವೇರ್ ಕೆಲಸ ಮಾಡುತ್ತಿದ್ದನು. ಮಂಗಳವಾರ ಇವರ ಮದುವೆ ವಾರ್ಷಿಕೋತ್ಸವ ಇತ್ತು. ಆದ್ದರಿಂದ ಮದುವೆ ವಾರ್ಷಿಕೋತ್ಸವಕ್ಕೆ ಬೇಕಾದ ತಯಾರಿ ನಡೆಸುತ್ತಿದ್ದರು. ಆದರೆ ಸಂಜೆವರೆಗೂ ಖುಷಿ ಖುಷಿಯಾಗಿ ಓಡಾಡಿಕೊಂಡಿದ್ದ ಪತ್ನಿ ನವ್ಯಾ, ಏಕಾಏಕಿ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನನ್ನ ಮಗಳ ಮೇಲೆ ಗಂಡ ರಮೇಶ್ ಬಾಬು ಯಾವಾಗಲೂ ಅನುಮಾನ ಪಡುತ್ತಿದ್ದನು. ಅಷ್ಟೇ ಅಲ್ಲದೇ ಮಾನಸಿಕ ಕಿರುಕುಳ ನೀಡುತ್ತಿದ್ದನು. ಸಾಕಷ್ಟು ಬಾರಿ ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ಕೂಡ ನಡೆದಿತ್ತು. ಈಗ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೆ ಪತಿ ರಮೇಶ್ ಬಾಬುನೇ ಕಾರಣ ಎಂದು ಮೃತ ನವ್ಯಾಳ ಪೋಷಕರು ಆರೋಪಿಸುತ್ತಿದ್ದಾರೆ.
ಸದ್ಯ ಈ ಸಂಬಂಧ ಅಮೃತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪತಿ ರಮೇಶ್ ಬಾಬುವನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv