ಲಕ್ನೋ: 16 ವರ್ಷದ ಅಪ್ರಾಪ್ತ ಹುಡುಗಿಯನ್ನ ಅಪಹರಿಸಿ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ನೋಯ್ದಾದಲ್ಲಿ ನಡೆದಿದೆ.
ಸಂತ್ರಸ್ತೆ ಗೌತಮ್ ಬುದ್ಧನಗರ ಜಿಲ್ಲೆಯ ಜಸ್ವರ ಸಮೀಪದ ದಸ್ತಂಪೂರ್ ಗ್ರಾಮದ ನಿವಾಸಿಯಾಗಿದ್ದು, ಆಗಸ್ಟ್ 24 ರಂದು ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ನಡೆದಿದ್ದೇನು?
ಸಂತ್ರಸ್ತೆ ತನ್ನ ಮನೆಯ ಸಮೀಪವಿದ್ದ ಹೊಲಿಗೆ ತರಗತಿಗೆ ಹೋಗಿದ್ದಳು. ಈ ವೇಳೆ ಆರೋಪಿಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಸಂತ್ರಸ್ತೆಯನ್ನು ಅಪಹರಿಸಿದ್ದಾರೆ. ಬಳಿಕ ಆಕೆಗೆ ಬಲವಂತವಾಗಿ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದಾರೆ. ಆಗ ಸಂತ್ರಸ್ತೆ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಸಂತ್ರಸ್ತೆಯ ಮೇಲೆ ಇಬ್ಬರು ಹಲ್ಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಎಸ್.ಎಸ್. ಭಾಟಿ ಹೇಳಿದ್ದಾರೆ.
ಆರೋಪಿಗಳಿಬ್ಬರು ಸಂತ್ರಸ್ತೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ನಂತರ ಮರುದಿನ ಬೆಳಿಗ್ಗೆ ದಸ್ತಂಪೂರ್ ಗ್ರಾಮದ ಸಂತ್ರಸ್ತೆಯನ್ನು ಆಕೆಯ ಮನೆಯ ಮುಂದೆ ಎಸೆದು ಹೋಗಿದ್ದಾರೆ. ಬಳಿಕ ಮಗಳನ್ನು ನೋಡಿದ ತಂದೆ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ.
ತಂದೆ ನೀಡಿದ ದೂರಿನ್ವಯ ನಾವು ಈ ಕುರಿತು ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯಕ್ಕೆ ಈ ಪ್ರಕರಣ ಕುರಿತು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಭಾಟಿ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv