ಹೈದರಾಬಾದ್: 17 ವರ್ಷದ ಹುಡುಗಿ ಅತ್ಯಾಚಾರಕ್ಕೆ ಯತ್ನಿಸಿದಾಗ ಪ್ರತಿರೋಧವೊಡ್ಡಿದ್ದಕ್ಕೆ ಕಾಮುಕನೊಬ್ಬ ಹಲ್ಲೆ ಮಾಡಿ ನೀರಿಲ್ಲದ ಪಾಳು ಬಾವಿಗೆ ಎಸೆದಿರುವ ಅಮಾನವಿಯ ಘಟನೆ ತೆಲಂಗಾಣದ ಜಂಗಾಂವ್ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ.
ಯುವಕ ರಾಜೇಶ್ (25) ಈ ದುಷ್ಕೃತ್ಯವೆಸಗಿದ್ದಾನೆ. ಶನಿವಾರ ಹುಡುಗಿಯ ಪೋಷಕರು ಕೆಲಸಕ್ಕೆ ಹೋಗಿದ್ದಾರೆ. ಬಳಿಕ ಮನೆಯಲ್ಲಿ ಒಂಟಿಯಾಗಿದ್ದಾಳೆ ಎಂದು ತಿಳಿದು ಕಾಮುಕ ಏಕಾಏಕಿ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಆದರೆ ಹುಡುಗಿ ಆತನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಆಗ ಕಾಮುಕ ಸಂತ್ರಸ್ತೆಗೆ ಮನಬಂದಂತೆ ಥಳಿಸಿ ಕೊನೆಗೆ ಅಲ್ಲೇ ಸಮೀಪದ ಕೃಷಿ ಗದ್ದೆಯಲ್ಲಿದ್ದ ಪಾಳು ಬಾವಿಗೆ ಎಸೆದಿದ್ದಾನೆ. ನಂತರ ಆಕೆಯ ಕಿರುಚಾಟದ ಶಬ್ದ ಕೇಳಿ ಸ್ಥಳಿಯರು ಸ್ಥಳಕ್ಕೆ ಬಂದು ಹುಡುಗಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಷ್ಟೇ ಅಲ್ಲದೇ ಸ್ಥಳಿಯರು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಿಡಿದು ಥಳಿಸಿದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಈಗಾಗಲೇ ಆರೋಪಿಯನ್ನ ಬಂಧಿಸಲಾಗಿದೆ. ಆತನ ವಿರುದ್ಧ ಐಪಿಸಿ ಸೆಕ್ಷನ್ ಕೊಲೆ ಮತ್ತು ಅತ್ಯಾಚಾರ ಯತ್ನ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಸದ್ಯಕ್ಕೆ ಹುಡುಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv