Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್‌ ಆಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ, ಶೃಂಗೇರಿ ಮಠಗಳೂ ಉಳಿಯಲ್ಲ: ತೇಜಸ್ವಿ ಸೂರ್ಯ

Public TV
Last updated: November 2, 2024 5:36 pm
Public TV
Share
3 Min Read
Tejasvi Surya 1
SHARE

– ಇಡೀ ಸಮಸ್ಯೆಯ ಮೂಲವೇ ಈ ವಕ್ಫ್ ಅದಾಲತ್
– ಮುಸ್ಲಿಂ ಮತ ಬ್ಯಾಂಕ್‌ಗೆ 1995, 2013 ರಲ್ಲಿ ವಕ್ಫ್‌ಬೋರ್ಡ್‌ಗೆ ಪರಮಾಧಿಕಾರ

ಬೆಂಗಳೂರು: ಕಾಂಗ್ರೆಸ್‌ (Congress) ಆಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ ದೇವಸ್ಥಾನ (Dharmasthala), ಶೃಂಗೇರಿ ಮಠಗಳೂ (Sringeri Mutt) ಉಳಿಯುವುದಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದ್ದಾರೆ.

ರೈತರಿಗೆ ವಕ್ಫ್ ಬೋರ್ಡ್‌ನಿಂದ ನೋಟಿಸ್ ನೀಡಿದ ವಿಚಾರಕ್ಕೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗ ಉಚಿತ ಬಸ್ಸು ಇದೆ ಎಂದು ಶೃಂಗೇರಿ, ಧರ್ಮಸ್ಥಳ ಅಂತ ಓಡಾಡುತ್ತಿದ್ದೀರಿ. ಹೀಗೆ ಉಚಿತ ಕೊಡುತ್ತಾರೆ ಎಂದು ಕಾಂಗ್ರೆಸ್‌ಗೆ ಮತ ಹಾಕಿದರೆ ಮುಂದಿನ ದಿನಗಳಲ್ಲಿ ಉಚಿತ  ಬಸ್ಸೂ ಇರುವುದಿಲ್ಲ. ನೋಡಲು ಧರ್ಮಸ್ಥಳ ಶೃಂಗೇರಿಯೂ ಇರುವುದಿಲ್ಲ. ಅದು ವಕ್ಫ್ ಅಂತ ಹೇಳುತ್ತಾರೆ ಎಂದು ಕಿಡಿಕಾರಿದರು.

ವಕ್ಫ್ ಸಭೆಯ ನಡಾವಳಿಯಲ್ಲಿ ಸಿಎಂ ಸೂಚನೆ ಎಂದೇ ಉಲ್ಲೇಖಿಸಲಾಗಿದೆ. ವಕ್ಫ್ ಅದಾಲತ್ ಕಲ್ಪನೆ ಸಂವಿಧಾನದಲ್ಲಿ ಹೇಳಿದ್ಯಾ? ಯಾವ ಕಾನೂನಿನಲ್ಲಿ ಬಂದಿದೆ? ವಕ್ಫ್ ಕಾಯ್ದೆ, ಕಂದಾಯ ಕಾಯ್ದೆಯಡಿ ವಕ್ಫ್ ಅದಾಲತ್ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಈ ವಕ್ಫ್ ಅದಾಲತ್ ಎನ್ನುವುದು ಸಿದ್ದರಾಮಯ್ಯ (Siddaramaiah) ಸರ್ಕಾರದ ಸಂಶೋಧನೆ. ಕೇಂದ್ರ ಸರ್ಕಾರ ವಕ್ಫ್ ನಿಯಮಕ್ಕೆ ತಿದ್ದುಪಡಿ ತರಲು ಮುಂದಾಗಿದೆ. ಅದಕ್ಕೂ ಮುನ್ನ ಸಾವಿರಾರು ಎಕ್ರೆ ಜಾಗವನ್ನು ವಕ್ಫ್‌ಗೆ ಕೊಡಲು ಈ ಹುನ್ನಾರ ನಡೆದಿದೆ. ಇವರಿಗೆ ವಕ್ಫ್ ಅದಾಲತ್ ನಡೆಸಲು ಅಧಿಕಾರ ಇಲ್ಲ, ಕಾನೂನಿನಲ್ಲೂ ಅವಕಾಶ ಇಲ್ಲ. ಇಡೀ ಸಮಸ್ಯೆಯ ಮೂಲವೇ ಈ ವಕ್ಫ್ ಅದಾಲತ್ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜ್ಯದಲ್ಲಿ ನಿಲ್ಲದ ವಕ್ಫ್ ಅವಾಂತರ – ಹಿಂದೂ ಅಷ್ಟೇ ಅಲ್ಲ, ಮುಸ್ಲಿಮರ ಪಹಣಿಯಲ್ಲೂ ವಕ್ಫ್!

ನಮ್ಮ ಸರ್ಕಾರ ಅವಧಿಯಲ್ಲೂ ನೋಟಿಸ್‌ ಹೋಗಿದೆ. ಆದರೆ ಅದು ವಕ್ಫ್‌ ಬೋರ್ಡ್‌ನಿಂದ ಹೋಗಿದೆ.  ಆದರೆ ವಕ್ಫ್‌ ಅದಾಲತ್‌ ನಡೆಸಲು ನಮ್ಮ ಸರ್ಕಾರ ಸೂಚನೆ ನೀಡಿಲ್ಲ. ಹಿಂದೆ ಅಕ್ಬರ್‌, ಔರಾಂಗಜೇಬ್‌, ಟಿಪ್ಪು ಸುಲ್ತಾನ್‌ ಅವಧಿಯಲ್ಲಿ ದೇವಸ್ಥಾನ ಒಡೆಯಲು ಮತ್ತು ಮತಾಂತರ ಮಾಡಲು ಟಾರ್ಗೆಟ್‌ ನೀಡಲಾಗಿತ್ತು. ಇದು ನಾನು ಹೇಳುತ್ತಿಲ್ಲ. ಅಂದಿನ ಇತಿಹಾಸಕಾರರೇ ಪುಸ್ತಕಗಳಲ್ಲಿ ದಾಖಲೆ ನೀಡಿದ್ದಾರೆ. ಈಗ ಅದೇ ರೀತಿಯಾಗಿ ಹಿಂದೂಗಳ ಆಸ್ತಿ ಒಡೆಯಲು  ಸಿದ್ದರಾಮಯ್ಯ ಸರ್ಕಾರ ವಕ್ಫ್‌ ಅದಾಲತ್‌ ನಡೆಸಿ ಟಾರ್ಗೆಟ್‌ ನೀಡಿದೆ ಎಂದು ಆಕ್ರೋಶ ಹೊರಹಾಕಿದರು.

 

ವಕ್ಫ್ ವಿಚಾರದಲ್ಲಿ ಈಗ ಸಾಕಷ್ಟು ವಿಚಾರಗಳು ಹೊರಗೆ ಬರುತ್ತಿವೆ. ಈಗಾಗಲೇ ನಮ್ಮ ಪಕ್ಷದ ನಿಯೋಗ ವಿಜಯಪುರ ಭೇಟಿ ಮಾಡಿ ಪರಿಶೀಲಿಸಿದೆ. ಬೇರೆಲ್ಲ ಜಿಲ್ಲೆಗಳಿಗೂ ವಕ್ಫ್ ನೋಟಿಸ್, ಪಹಣಿ ದಾಖಲು ಹಬ್ಬಿದೆ. ರಾಜ್ಯದಲ್ಲಿ ನಮಗೆ ಸಿಕ್ಕ ಮಾಹಿತಿ ಪ್ರಕಾರ 50 ಸಾವಿರ ಎಕರೆ ಭೂಮಿಯನ್ನು ವಕ್ಫ್ ತನ್ನದು ಎಂದು ಹೇಳಿಕೊಂಡಿದೆ. ಯಾವ ಜಿಲ್ಲೆಯೂ ಇದರಿಂದ ಹೊರತಾಗಿಲ್ಲ. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ಆರ್‌ಟಿಸಿ, ಮ್ಯೂಟೇಷನ್, ಪಹಣಿಗಳನ್ನು ಪರಿಶೀಲಿಸಿಕೊಳ್ಳುವುದು ಒಳ್ಳೆಯದು. ನಿಮ್ಮ ಜಮೀನು ಪತ್ರಗಳನ್ನು ಆದಷ್ಟು ಬೇಗ ಒಮ್ಮೆ ಪರಿಶೀಲಿಸಿಕೊಳ್ಳಿ ಎಂದು ಮನವಿ ಮಡಿದರು. ಇದನ್ನೂ ಓದಿ: Waqf Land Row | ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಮುಸ್ಲಿಂ ಮತಗಳನ್ನು ಗಟ್ಟಿ ಮಾಡಿಕೊಳ್ಳುವ ಉದ್ದೇಶದಿಂದ ವಕ್ಫ್‌ಬೋರ್ಡ್‌ಗೆ 1995 ಮತ್ತು 2013 ರಲ್ಲಿ ಕಾಂಗ್ರೆಸ್‌ ಪರಮಾಧಿಕಾರ ನೀಡಿತು. 1995 ರಲ್ಲೂ ವಕ್ಫ್ ಟ್ರಿಬ್ಯೂನಲ್‌ಗಳನ್ನು ಶುರು ಮಾಡಿದರು. ಅದಕ್ಕೂ ಮುನ್ನ ವಕ್ಫ್ ತಕರಾರು ಪ್ರಶ್ನಿಸಿ ಜನ ಸಿವಿಲ್ ಕೋರ್ಟಿಗೆ ಹೋಗಬಹುದಿತ್ತು. ಆದರೆ 1995 ರಲ್ಲಿ ಕಾಂಗ್ರೆಸ್ ಸರ್ಕಾರ ಮುಸಲ್ಮಾನರಿಗೆ ಗಿಫ್ಟ್ ಕೊಡಲು ವಕ್ಫ್ ಟ್ರಿಬ್ಯೂನಲ್ ರಚನೆಗೆ ಅವಕಾಶ ನೀಡಿತು. 2013 ರಲ್ಲಿ ವಕ್ಫ್ ಕಾಯ್ದೆಗೆ ಕಾಂಗ್ರೆಸ್ ಸೆಕ್ಷನ್40 ಸೇರಿಸಿತು. ಇದರ ಪ್ರಕಾರ ವಕ್ಫ್ ತೋರಿಸಿದ ಜಾಗಕ್ಕೆ ಗೆಜೆಟ್ ನೊಟಿಫಿಕೇಷನ್ ಹೊರಡಿಸುವ ಅಧಿಕಾರ ನೀಡಿತು. ಈಗ ಕಾಂಗ್ರೆಸ್ ನವರ ಆಮಿಷಕ್ಕೆ ಬಲಿಯಾದರೆ ನಮ್ಮ ಜಮೀನು, ಮಠ, ದೇವಸ್ಥಾನದ ಜಾಗಗಳನ್ನೆಲ್ಲ ಮುಸಲ್ಮಾನರಿಗೆ ಕೊಡುತ್ತಾರೆ ಎಂದು ಕಿಡಿಕಾರಿದರು.

ಜೆಪಿಸಿ ಅಧ್ಯಕ್ಷ ಜಗದಂಬಿಕ ಪಾಲ್ ಅವರು ರಾಜ್ಯಕ್ಕೆ ಬರಬೇಕೆಂದು ನಾನು ಮನವಿ ಮಾಡಿಕೊಂಡಿದ್ದೇನೆ. ಇದರ ಬಗ್ಗೆ ಪತ್ರವನ್ನೂ ಬರೆದಿದ್ದೇನೆ. ನವೆಂಬರ್ 6 ಅಥವಾ 7 ರಂದು ಅವರು ರಾಜ್ಯಕ್ಕೆ ಪ್ರವಾಸ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದರು.

 

TAGGED:bjpcongresskarnatakapoliticssiddaramaiahTejasvi SuryaWaqf Boardಕರ್ನಾಟಕಕಾಂಗ್ರೆಸ್ತೇಜಸ್ವಿ ಸೂರ್ಯಬಿಜೆಪಿವಕ್ಫ್ ಬೋರ್ಡ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood

You Might Also Like

CHALUVARAYASWAMY
Bengaluru City

ಮತಗಳ್ಳತನದ ಬಗ್ಗೆ ಮಂಡ್ಯದ ಡಿಟೇಲ್ಸ್ ನೋಡಿ ಹೇಳ್ತೀನಿ: ಚಲುವರಾಯಸ್ವಾಮಿ

Public TV
By Public TV
3 minutes ago
siddapura dubare ghat landslide
Latest

ಭಾರೀ ಮಳೆ; ಸಿದ್ದಾಪುರದ ದುಬಾರಿ ಘಟ್ಟದ ಬಳಿ ರಸ್ತೆ ಪಕ್ಕದಲ್ಲೇ ಕುಸಿದ ಧರೆ

Public TV
By Public TV
4 minutes ago
Prahlad Joshi 1
Bengaluru City

ಮಹದಾಯಿಗೆ ಕೇಂದ್ರ ಅನುಮತಿ ನೀಡಲ್ಲ ಎಂದಿದ್ದು ಗೋವಾ ಸಿಎಂ ವೈಯಕ್ತಿಕ ಹೇಳಿಕೆ – ಜೋಶಿ ಸ್ಪಷ್ಟನೆ

Public TV
By Public TV
24 minutes ago
PRAJWAL REVANNA 1
Bengaluru City

ಹೊಳೆನರಸೀಪುರ‌ ರೇಪ್ ಕೇಸ್ – 2ನೇ ಬಾರಿಯೂ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

Public TV
By Public TV
41 minutes ago
BY Vijayendra 1
Bengaluru City

ಮಹದಾಯಿ ವಿಚಾರದಲ್ಲಿ ರಾಜ್ಯದ ಹಿತ ಬಲಿ ಕೊಡಲ್ಲ: ವಿಜಯೇಂದ್ರ

Public TV
By Public TV
57 minutes ago
odisha teen rape case
Crime

15ರ ಬಾಲಕಿ ಮೇಲೆ ಅತ್ಯಾಚಾರ, ಗರ್ಭಿಣಿಯಾಗಿದ್ದವಳ ಜೀವಂತ ಹೂತುಹಾಕಲು ಯತ್ನ – ಇಬ್ಬರು ಸಹೋದರರ ಬಂಧನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?