Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ ಆಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ, ಶೃಂಗೇರಿ ಮಠಗಳೂ ಉಳಿಯಲ್ಲ: ತೇಜಸ್ವಿ ಸೂರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‌ ಆಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ, ಶೃಂಗೇರಿ ಮಠಗಳೂ ಉಳಿಯಲ್ಲ: ತೇಜಸ್ವಿ ಸೂರ್ಯ

Bengaluru City

ಕಾಂಗ್ರೆಸ್‌ ಆಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ, ಶೃಂಗೇರಿ ಮಠಗಳೂ ಉಳಿಯಲ್ಲ: ತೇಜಸ್ವಿ ಸೂರ್ಯ

Public TV
Last updated: November 2, 2024 5:36 pm
Public TV
Share
3 Min Read
Tejasvi Surya 1
SHARE

– ಇಡೀ ಸಮಸ್ಯೆಯ ಮೂಲವೇ ಈ ವಕ್ಫ್ ಅದಾಲತ್
– ಮುಸ್ಲಿಂ ಮತ ಬ್ಯಾಂಕ್‌ಗೆ 1995, 2013 ರಲ್ಲಿ ವಕ್ಫ್‌ಬೋರ್ಡ್‌ಗೆ ಪರಮಾಧಿಕಾರ

ಬೆಂಗಳೂರು: ಕಾಂಗ್ರೆಸ್‌ (Congress) ಆಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ ದೇವಸ್ಥಾನ (Dharmasthala), ಶೃಂಗೇರಿ ಮಠಗಳೂ (Sringeri Mutt) ಉಳಿಯುವುದಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದ್ದಾರೆ.

ರೈತರಿಗೆ ವಕ್ಫ್ ಬೋರ್ಡ್‌ನಿಂದ ನೋಟಿಸ್ ನೀಡಿದ ವಿಚಾರಕ್ಕೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗ ಉಚಿತ ಬಸ್ಸು ಇದೆ ಎಂದು ಶೃಂಗೇರಿ, ಧರ್ಮಸ್ಥಳ ಅಂತ ಓಡಾಡುತ್ತಿದ್ದೀರಿ. ಹೀಗೆ ಉಚಿತ ಕೊಡುತ್ತಾರೆ ಎಂದು ಕಾಂಗ್ರೆಸ್‌ಗೆ ಮತ ಹಾಕಿದರೆ ಮುಂದಿನ ದಿನಗಳಲ್ಲಿ ಉಚಿತ  ಬಸ್ಸೂ ಇರುವುದಿಲ್ಲ. ನೋಡಲು ಧರ್ಮಸ್ಥಳ ಶೃಂಗೇರಿಯೂ ಇರುವುದಿಲ್ಲ. ಅದು ವಕ್ಫ್ ಅಂತ ಹೇಳುತ್ತಾರೆ ಎಂದು ಕಿಡಿಕಾರಿದರು.

ವಕ್ಫ್ ಸಭೆಯ ನಡಾವಳಿಯಲ್ಲಿ ಸಿಎಂ ಸೂಚನೆ ಎಂದೇ ಉಲ್ಲೇಖಿಸಲಾಗಿದೆ. ವಕ್ಫ್ ಅದಾಲತ್ ಕಲ್ಪನೆ ಸಂವಿಧಾನದಲ್ಲಿ ಹೇಳಿದ್ಯಾ? ಯಾವ ಕಾನೂನಿನಲ್ಲಿ ಬಂದಿದೆ? ವಕ್ಫ್ ಕಾಯ್ದೆ, ಕಂದಾಯ ಕಾಯ್ದೆಯಡಿ ವಕ್ಫ್ ಅದಾಲತ್ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಈ ವಕ್ಫ್ ಅದಾಲತ್ ಎನ್ನುವುದು ಸಿದ್ದರಾಮಯ್ಯ (Siddaramaiah) ಸರ್ಕಾರದ ಸಂಶೋಧನೆ. ಕೇಂದ್ರ ಸರ್ಕಾರ ವಕ್ಫ್ ನಿಯಮಕ್ಕೆ ತಿದ್ದುಪಡಿ ತರಲು ಮುಂದಾಗಿದೆ. ಅದಕ್ಕೂ ಮುನ್ನ ಸಾವಿರಾರು ಎಕ್ರೆ ಜಾಗವನ್ನು ವಕ್ಫ್‌ಗೆ ಕೊಡಲು ಈ ಹುನ್ನಾರ ನಡೆದಿದೆ. ಇವರಿಗೆ ವಕ್ಫ್ ಅದಾಲತ್ ನಡೆಸಲು ಅಧಿಕಾರ ಇಲ್ಲ, ಕಾನೂನಿನಲ್ಲೂ ಅವಕಾಶ ಇಲ್ಲ. ಇಡೀ ಸಮಸ್ಯೆಯ ಮೂಲವೇ ಈ ವಕ್ಫ್ ಅದಾಲತ್ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜ್ಯದಲ್ಲಿ ನಿಲ್ಲದ ವಕ್ಫ್ ಅವಾಂತರ – ಹಿಂದೂ ಅಷ್ಟೇ ಅಲ್ಲ, ಮುಸ್ಲಿಮರ ಪಹಣಿಯಲ್ಲೂ ವಕ್ಫ್!

ನಮ್ಮ ಸರ್ಕಾರ ಅವಧಿಯಲ್ಲೂ ನೋಟಿಸ್‌ ಹೋಗಿದೆ. ಆದರೆ ಅದು ವಕ್ಫ್‌ ಬೋರ್ಡ್‌ನಿಂದ ಹೋಗಿದೆ.  ಆದರೆ ವಕ್ಫ್‌ ಅದಾಲತ್‌ ನಡೆಸಲು ನಮ್ಮ ಸರ್ಕಾರ ಸೂಚನೆ ನೀಡಿಲ್ಲ. ಹಿಂದೆ ಅಕ್ಬರ್‌, ಔರಾಂಗಜೇಬ್‌, ಟಿಪ್ಪು ಸುಲ್ತಾನ್‌ ಅವಧಿಯಲ್ಲಿ ದೇವಸ್ಥಾನ ಒಡೆಯಲು ಮತ್ತು ಮತಾಂತರ ಮಾಡಲು ಟಾರ್ಗೆಟ್‌ ನೀಡಲಾಗಿತ್ತು. ಇದು ನಾನು ಹೇಳುತ್ತಿಲ್ಲ. ಅಂದಿನ ಇತಿಹಾಸಕಾರರೇ ಪುಸ್ತಕಗಳಲ್ಲಿ ದಾಖಲೆ ನೀಡಿದ್ದಾರೆ. ಈಗ ಅದೇ ರೀತಿಯಾಗಿ ಹಿಂದೂಗಳ ಆಸ್ತಿ ಒಡೆಯಲು  ಸಿದ್ದರಾಮಯ್ಯ ಸರ್ಕಾರ ವಕ್ಫ್‌ ಅದಾಲತ್‌ ನಡೆಸಿ ಟಾರ್ಗೆಟ್‌ ನೀಡಿದೆ ಎಂದು ಆಕ್ರೋಶ ಹೊರಹಾಕಿದರು.

 

ವಕ್ಫ್ ವಿಚಾರದಲ್ಲಿ ಈಗ ಸಾಕಷ್ಟು ವಿಚಾರಗಳು ಹೊರಗೆ ಬರುತ್ತಿವೆ. ಈಗಾಗಲೇ ನಮ್ಮ ಪಕ್ಷದ ನಿಯೋಗ ವಿಜಯಪುರ ಭೇಟಿ ಮಾಡಿ ಪರಿಶೀಲಿಸಿದೆ. ಬೇರೆಲ್ಲ ಜಿಲ್ಲೆಗಳಿಗೂ ವಕ್ಫ್ ನೋಟಿಸ್, ಪಹಣಿ ದಾಖಲು ಹಬ್ಬಿದೆ. ರಾಜ್ಯದಲ್ಲಿ ನಮಗೆ ಸಿಕ್ಕ ಮಾಹಿತಿ ಪ್ರಕಾರ 50 ಸಾವಿರ ಎಕರೆ ಭೂಮಿಯನ್ನು ವಕ್ಫ್ ತನ್ನದು ಎಂದು ಹೇಳಿಕೊಂಡಿದೆ. ಯಾವ ಜಿಲ್ಲೆಯೂ ಇದರಿಂದ ಹೊರತಾಗಿಲ್ಲ. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ಆರ್‌ಟಿಸಿ, ಮ್ಯೂಟೇಷನ್, ಪಹಣಿಗಳನ್ನು ಪರಿಶೀಲಿಸಿಕೊಳ್ಳುವುದು ಒಳ್ಳೆಯದು. ನಿಮ್ಮ ಜಮೀನು ಪತ್ರಗಳನ್ನು ಆದಷ್ಟು ಬೇಗ ಒಮ್ಮೆ ಪರಿಶೀಲಿಸಿಕೊಳ್ಳಿ ಎಂದು ಮನವಿ ಮಡಿದರು. ಇದನ್ನೂ ಓದಿ: Waqf Land Row | ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಮುಸ್ಲಿಂ ಮತಗಳನ್ನು ಗಟ್ಟಿ ಮಾಡಿಕೊಳ್ಳುವ ಉದ್ದೇಶದಿಂದ ವಕ್ಫ್‌ಬೋರ್ಡ್‌ಗೆ 1995 ಮತ್ತು 2013 ರಲ್ಲಿ ಕಾಂಗ್ರೆಸ್‌ ಪರಮಾಧಿಕಾರ ನೀಡಿತು. 1995 ರಲ್ಲೂ ವಕ್ಫ್ ಟ್ರಿಬ್ಯೂನಲ್‌ಗಳನ್ನು ಶುರು ಮಾಡಿದರು. ಅದಕ್ಕೂ ಮುನ್ನ ವಕ್ಫ್ ತಕರಾರು ಪ್ರಶ್ನಿಸಿ ಜನ ಸಿವಿಲ್ ಕೋರ್ಟಿಗೆ ಹೋಗಬಹುದಿತ್ತು. ಆದರೆ 1995 ರಲ್ಲಿ ಕಾಂಗ್ರೆಸ್ ಸರ್ಕಾರ ಮುಸಲ್ಮಾನರಿಗೆ ಗಿಫ್ಟ್ ಕೊಡಲು ವಕ್ಫ್ ಟ್ರಿಬ್ಯೂನಲ್ ರಚನೆಗೆ ಅವಕಾಶ ನೀಡಿತು. 2013 ರಲ್ಲಿ ವಕ್ಫ್ ಕಾಯ್ದೆಗೆ ಕಾಂಗ್ರೆಸ್ ಸೆಕ್ಷನ್40 ಸೇರಿಸಿತು. ಇದರ ಪ್ರಕಾರ ವಕ್ಫ್ ತೋರಿಸಿದ ಜಾಗಕ್ಕೆ ಗೆಜೆಟ್ ನೊಟಿಫಿಕೇಷನ್ ಹೊರಡಿಸುವ ಅಧಿಕಾರ ನೀಡಿತು. ಈಗ ಕಾಂಗ್ರೆಸ್ ನವರ ಆಮಿಷಕ್ಕೆ ಬಲಿಯಾದರೆ ನಮ್ಮ ಜಮೀನು, ಮಠ, ದೇವಸ್ಥಾನದ ಜಾಗಗಳನ್ನೆಲ್ಲ ಮುಸಲ್ಮಾನರಿಗೆ ಕೊಡುತ್ತಾರೆ ಎಂದು ಕಿಡಿಕಾರಿದರು.

ಜೆಪಿಸಿ ಅಧ್ಯಕ್ಷ ಜಗದಂಬಿಕ ಪಾಲ್ ಅವರು ರಾಜ್ಯಕ್ಕೆ ಬರಬೇಕೆಂದು ನಾನು ಮನವಿ ಮಾಡಿಕೊಂಡಿದ್ದೇನೆ. ಇದರ ಬಗ್ಗೆ ಪತ್ರವನ್ನೂ ಬರೆದಿದ್ದೇನೆ. ನವೆಂಬರ್ 6 ಅಥವಾ 7 ರಂದು ಅವರು ರಾಜ್ಯಕ್ಕೆ ಪ್ರವಾಸ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದರು.

 

TAGGED:bjpcongresskarnatakapoliticssiddaramaiahTejasvi SuryaWaqf Boardಕರ್ನಾಟಕಕಾಂಗ್ರೆಸ್ತೇಜಸ್ವಿ ಸೂರ್ಯಬಿಜೆಪಿವಕ್ಫ್ ಬೋರ್ಡ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
10 minutes ago
Justice Swarana Kanta Sharma Arvind Kejriwal
Court

ಇದು ನನ್ನ ಸತ್ಯಾಗ್ರಹ – ಹಿಂದೆ ಸರಿಯಲ್ಲ ಎಂದು ಜಡ್ಜ್‌ ಹೇಳಿದ ಬೆನ್ನಲ್ಲೇ ವಿಚಾರಣೆಗೆ ಬರಲ್ಲ ಎಂದ ಕೇಜ್ರಿವಾಲ್‌

Public TV
By Public TV
11 minutes ago
Techie Dies Of Brain Stroke
Bengaluru City

ತಾಯಿ ಜೊತೆ ನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು

Public TV
By Public TV
25 minutes ago
kids illegally ridding scooter 1
Bengaluru City

ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರ ಸವಾರಿ – ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ಪೋಷಕರ ವಿರುದ್ಧ ಆಕ್ರೋಶ

Public TV
By Public TV
26 minutes ago
Chinnaswamy Stadium RCB
Bengaluru City

ಆರ್‌ಸಿಬಿ ಪಂದ್ಯದಂದೇ 240 ಸಿಸಿಟಿವಿ ಕೇಬಲ್‌ ಕಟ್‌ – ಚಿನ್ನಸ್ವಾಮಿಯಲ್ಲಿ ಭಾರೀ ಭದ್ರತಾ ಲೋಪ!

Public TV
By Public TV
2 hours ago
kunal ghosh TMC
Latest

ಬಿಜೆಪಿಗಾಗಿ ರಾಹುಲ್‌ ಗಾಂಧಿ ಕೆಲಸ, ಪಪ್ಪು ಅನ್ನೋದ್ರಲ್ಲಿ ತಪ್ಪಿಲ್ಲ: ಕುನಾಲ್ ಘೋಷ್ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?