Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 8ರ ಬಾಲಕನನ್ನು ಕಿಡ್ನಾಪ್ ಮಾಡಿ ಆತನ ಆಂಟಿಗಾಗಿ ಬೇಡಿಕೆಯಿಟ್ಟ ಭಗ್ನ ಪ್ರೇಮಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 8ರ ಬಾಲಕನನ್ನು ಕಿಡ್ನಾಪ್ ಮಾಡಿ ಆತನ ಆಂಟಿಗಾಗಿ ಬೇಡಿಕೆಯಿಟ್ಟ ಭಗ್ನ ಪ್ರೇಮಿ!

Latest

8ರ ಬಾಲಕನನ್ನು ಕಿಡ್ನಾಪ್ ಮಾಡಿ ಆತನ ಆಂಟಿಗಾಗಿ ಬೇಡಿಕೆಯಿಟ್ಟ ಭಗ್ನ ಪ್ರೇಮಿ!

Public TV
Last updated: April 10, 2018 4:03 pm
Public TV
Share
3 Min Read
KIDNAP POLICE
SHARE

ಹೈದರಾಬಾದ್: ಮಕ್ಕಳು, ಯುವಕರನ್ನು ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಡುವುದನ್ನು ಕೇಳಿದ್ದೇವೆ. ಆದ್ರೆ ಇಲ್ಲೊಬ್ಬ 8 ವರ್ಷದ ಬಾಲಕನನ್ನು ಕಿಡ್ನಾಪ್ ಮಾಡಿ ಆತನ ಆಂಟಿಗಾಗಿ ಬೇಡಿಕೆಯಿಟ್ಟ ವಿಚಿತ್ರ ಪ್ರಕರಣವೊಂದು ಹೈದರಾಬಾದ್ ನಲ್ಲಿ ನಡೆದಿದೆ.

ಆರೋಪಿಯನ್ನು 23 ವರ್ಷದ ವಂಶಿ ಕೃಷ್ಣ ಎಂದು ಗುರುತಿಸಲಾಗಿದ್ದು, ಈತ ಮಹಬೂಬ್ ನಗರ ಜಿಲ್ಲೆಯವನಾಗಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರೋ ಈತ ಕಿಡ್ನಾಪ್ ಮಾಡಿದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪೊಲೀಸರು ಬಾಲಕನನ್ನು ರಕ್ಷಿಸಿದ್ದಾರೆ.

ಕಿಡ್ನಾಪ್ ಮಾಡಿದ್ದು ಯಾಕೆ?: ವಂಶಿ ಕೃಷ್ಣ ಬಾಲಕನಿಗೆ ಸಂಬಂಧದಲ್ಲಿ ಆಂಟಿಯಾಗಬೇಕಿದ್ದವರ ಜೊತೆ ಪ್ರೇಮ ಸಂಬಂಧವಿಟ್ಟುಕೊಂಡಿದ್ದನು. ಈಕೆ ಹೈದರಾಬಾದ್ ನ ಶಿವರಾಮ್‍ಪಳ್ಳಿಯಲ್ಲಿ ನೆಲೆಸಿದ್ದರು. ವಂಶಿ ಹಾಗೂ ಮಹಿಳೆಯ ಪ್ರೇಮ ಸಂಬಂಧದ ವಿಚಾರ ಆಕೆಯ ಮನೆಯವರಿಗೆ ತಿಳಿದು ದೊಡ್ಡ ರದ್ದಾಂತವೇ ನಡೆದಿತ್ತು. ಶಿವರಾಮ್ ಪಳ್ಳಿಗೆ ಬಂದಿದ್ದ ವೇಳೆ ಮಹಿಳೆಯ ಕುಟುಂಬಸ್ಥರು ವಂಶಿಗೆ ಚೆನ್ನಾಗಿ ಥಳಿಸಿದ್ದಾರೆ. ಅಷ್ಟೇ ಅಲ್ಲದೇ ಇನ್ನು ಮುಂದೆ ಈ ಪ್ರದೇಶದಲ್ಲಿ ಕಾಣಿಸಿಕೊಳ್ಳಬಾರದೆಂದು ಎಚ್ಚರಿಕೆ ನೀಡಿ ಕಳುಹಿಸಿದ್ದರು. ಇದರಿಂದ ವಂಶಿ ಸಿಟ್ಟಾಗಿದ್ದು, ಮಹಿಳೆಯ ಕುಟುಂಬಸ್ಥರ ಮೇಲೆ ಸೇಡು ತೀರಿಸಿಕೊಳ್ಳಲು ಹೊಂಚುಹಾಕುತ್ತಿದ್ದನು.

man arrested

ಬಾಲಕನ ಕಿಡ್ನಾಪ್: ತನ್ನ ಪ್ರಿಯತಮೆಯ ಮನೆಯವ ವಿರುದ್ಧ ಸಿಡಿದೆದ್ದ ವಂಶಿ ಅದೇ ಕುಟುಂಬಕ್ಕೆ ಸೇರಿದ ಬಾಲಕನನ್ನು ಅಪಹರಿಸುವ ಯೋಜನೆ ಹಾಕಿದ್ದಾನೆ.

8 ವರ್ಷದ ಬಾಲಕ ಚಂದ್ರು ನಾಯ್ಕ್ ಕೊಥಕೋಟದಲ್ಲಿರೋ ಭಾರತೀಯ ವಿದ್ಯಾಮಂದಿರ್ ವಸತಿ ಶಾಲೆಯಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಈ ವಿಚಾರ ವಂಶಿಗೆ ತಿಳಿದಿತ್ತು. ಹೀಗಾಗಿ ಆತನನ್ನೇ ಕಿಡ್ನಾಪ್ ಮಾಡಿ ಪ್ರೇಯಸಿಯನ್ನು ತನ್ನವಳನ್ನಾಗಿ ಮಾಡಿಕೊಳ್ಳಬಹುದೆಂದು ಪ್ಲಾನ್ ಹಾಕಿದ್ದ. ಹೀಗಾಗಿ ಚಂದ್ರು ವ್ಯಾಸಂಗ ಮಾಡುವ ವಸತಿ ಶಾಲೆಯತ್ತ ತನ್ನ ಚಿತ್ತ ಹರಿಸಿದ್ದಾನೆ. ಶಾಲೆಗೆ ಬಂದ ವಂಶಿ, ಬಾಲಕ ಚಂದ್ರುವಿನ ತಾಯಿಗೆ ಹೈದರಾಬಾದ್ ನಲ್ಲಿ ಅಪಘಾತವಾಗಿದೆ. ಹೀಗಾಗಿ ಆತನನ್ನು ಕರೆದುಕೊಂಡು ಬರುವಂತೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕನನ್ನು ತನ್ನ ಜೊತೆ ಕರೆದುಕೊಂಡು ಹೋಗಲು ಅನುವು ಮಾಡಿಕೊಡಬೇಕೆಂದು ಅಲ್ಲಿನ ಸಿಬ್ಬಂದಿಯಲ್ಲಿ ವಿನಂತಿಸಿಕೊಂಡಿದ್ದಾನೆ.

ಬಾಲಕನು ಕೂಡ ವಂಶಿ ನಮ್ಮ ನೆರೆಮನೆಯವನೆಂದು ಶಾಲಾ ಸಿಬ್ಬಂದಿಯಲ್ಲಿ ಹೇಳಿದ್ದಾನೆ. ಹೀಗಾಗಿ ಅವರು ವಂಶಿ ಜೊತೆ ಚಂದ್ರು ಹಾಗೂ ಆತನ ಇಬ್ಬರು ಸಹೋದರರನ್ನು ಕಳುಹಿಸಿಕೊಡಲು ಒಪ್ಪಿದ್ದಾರೆ. ಕೊಥಕೋಟ ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ವಂಶಿ ಸಹೋದರರನ್ನು ನಿಲ್ದಾಣದಲ್ಲೇ ನಿಲ್ಲುವಂತೆ ಹೇಳಿ, ಚಂದ್ರು ನಾಯ್ಕ್ ನನ್ನು ಕರೆದುಕೊಂಡು ಹೋಗಿದ್ದಾನೆ. ಇತ್ತ ಕೆಲ ಹೊತ್ತು ಕಳೆದ್ರೂ ಇವರಿಬ್ಬರೂ ಹಿಂದಿರುಗಿ ಬಾರದೇ ಇದ್ದುದರಿಂದ ಚಂದ್ರು ಸಹೋದರರಿಬ್ಬರೂ ಶಾಲೆಗೆ ವಾಪಸ್ ತೆರಳಿದ್ದಾರೆ. ಇಷ್ಟೆಲ್ಲಾ ಆದ ಬಳಿಕ ಮನೆಯವರು ಶಾಲೆಗೆ ಕರೆ ಮಾಡಿ, ವಂಶಿ ಯಾಕೆ ಅವರನ್ನು ಕರೆದಿದ್ದು, ಆತ ಇದೀಗ ಬಾಲಕ ಚಂದ್ರುವನ್ನು ಕಿಡ್ನಾಪ್ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.

ಇತ್ತ ವಂಶಿ ಬಾಲಕನ ಮನೆಗೆ ಪದೇ ಪದೇ ಕರೆ ಮಾಡಿ ಮಹಿಳೆ ನನ್ನನ್ನು ಪ್ರೀತಿಸಿದರೆ ಆತನನ್ನು ಬಿಟ್ಟು ಬಿಡುವುದಾಗಿ ಬೇಡಿಕೆಯಿಟ್ಟಿದ್ದಾನೆ. ಕೂಡಲೇ ಅಂದ್ರೆ ಏ.8ರಂದು ಬಾಲಕ ಚಂದ್ರುವಿನ ಅಜ್ಜಿ ರತ್ಲಾವತ್ ಜೂಲಿ ಕೊಥಕೋಟ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವನಪರ್ಥಿ ಜಿಲ್ಲೆಯ ಎಸ್‍ಪಿ ರೀಮಾ ರಾಜೇಶ್ವರಿ ವಿಶೇಷ ತಂಡಗಳನ್ನು ರಚಿಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಕನ ರಕ್ಷಣೆ: ಆರೋಪಿ ವಂಶಿ ಬಾಲಕನನ್ನು ಅಪಹರಿಸಿ ಮಹಾರಾಷ್ಟ್ರದಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಮೊಬೈಲ್ ಟವರ್ ಪತ್ತೆ ಹಚ್ಚಿ ಕೂಡಲೇ ತೆಲಂಗಾಣ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಹೀಗಾಗಿ ಎಚ್ಚೆತ್ತ ಪೊಲೀಸರು ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಿದ್ದಾರೆ. ಇತ್ತ ಕೊಥಕೋಟಾದ ವಿಶೇಷ ತಂಡ ಪುಣೆಗೆ ತೆರಳಿತ್ತು. ಪುಣೆ ರೈಲು ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ಬಾಲಕನನ್ನು ಕಂಡ ಪೊಲೀಸರು ಆತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರನ್ನು ಕಂಡ ಆರೋಪಿ ವಂಶಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದ್ರೆ ವಿಶೇಷ ತಂಡ ಲಾರೋಪಿಯನ್ನು ಬಂಧಿಸಿ, ಇಬ್ಬರನ್ನೂ ಊರಿಗೆ ವಾಪಸ್ ಕರೆದುಕೊಂಡು ಬಂದಿದ್ದಾರೆ.

TAGGED:auntyboyHyderabadkidanpkidnapmaharastramumbaipublictvಆಂಟಿಕಿಡ್ನಾಪ್ಪಬ್ಲಿಕ್ ಟಿವಿಬಾಲಕಮಹಾರಾಷ್ಟ್ರಮುಂಬೈಹೈದರಾಬಾದ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
46 seconds ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
8 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
8 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
8 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?