Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ಪಿ ಬಳಿಕ ಟಿಆರ್‌ಎಸ್‌ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ – ತೃತೀಯ ರಂಗ ಸ್ಥಾಪನೆಗೆ ಮುನ್ನುಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಸ್‍ಪಿ ಬಳಿಕ ಟಿಆರ್‌ಎಸ್‌ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ – ತೃತೀಯ ರಂಗ ಸ್ಥಾಪನೆಗೆ ಮುನ್ನುಡಿ

Bengaluru City

ಬಿಎಸ್‍ಪಿ ಬಳಿಕ ಟಿಆರ್‌ಎಸ್‌ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ – ತೃತೀಯ ರಂಗ ಸ್ಥಾಪನೆಗೆ ಮುನ್ನುಡಿ

Public TV
Last updated: April 13, 2018 5:46 pm
Public TV
Share
2 Min Read
TDD TSR
SHARE

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಪಡೆಯಲು ಮಯಾವತಿಯವರ ಬಿಎಸ್‍ಪಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದ ಜೆಡಿಎಸ್, ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ರಾಜಕಾರಣವನ್ನು ಮುಂದುವರೆಸಿದ್ದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಪಕ್ಷದೊಂದಿಗೆ ಸೇರಿ ತೃತೀಯ ರಂಗ ರಚಿಸಲು ಹೊರಟಿದೆ.

ರಾಷ್ಟ್ರ ಮಟ್ಟದಲ್ಲಿ ತೃತಿಯ ರಂಗ ಸ್ಥಾಪನೆ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ಟಿಆರ್ ಎಸ್ ಪಕ್ಷದ ನಾಯಕ ಕೆಸಿ ಚಂದ್ರಶೇಖರ್ ರಾವ್(ಕೆಸಿಆರ್) ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನಗರದ ಪದ್ಮನಾಭ ನಗರದ ಎಚ್‍ಡಿಡಿ ನಿವಾಸಕ್ಕೆ ಆಗಮಿಸಿದ ಚಂದ್ರಶೇಖರ್ ರಾವ್ ಅವರು ಸುಮಾರು 2 ಗಂಟೆಕಾಲ ದೇವೇಗೌಡರ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ, ನಟ ಪ್ರಕಾಶ್ ರೈ, ಟಿಆರ್ ಎಸ್ ಪಕ್ಷದ ಸಂಸದರು, ಶಾಸಕರು ಚರ್ಚೆಯಲ್ಲಿ ಭಾಗಿದ್ದರು.

TDD TSR 1

ಎಚ್‍ಡಿಡಿ ನಿವಾಸದಲ್ಲೇ ಮಧ್ಯಾಹ್ನದ ಭೋಜನ ಸೇವಿಸಿದ ಕೆಸಿಆರ್ ಕರ್ನಾಟಕ ವಿಧಾನಸಭಾ ಚನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಕರ್ನಾಟಕದಲ್ಲಿರುವ ಎಲ್ಲ ತೆಲುಗು ಭಾಷಿಕ ಮತದಾರರಿಗೆ ಮನವಿ ಮಾಡುವುದಾಗಿ ಘೋಷಿಸಿದರು. ಅಲ್ಲದೇ ಕುಮಾರಸ್ವಾಮಿ ಅವರು ಎಲ್ಲೆಲ್ಲಿ ನನ್ನ ಅಗತ್ಯ ಇದೆ ಎಂದು ಕರೆಯುತ್ತಾರೋ ಅಲ್ಲಿಗೆ ನಾನು ಪ್ರಚಾರಕ್ಕೆ ಬರುತ್ತೇನೆ ಎಂದರು.

ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕೆಸಿಆರ್, ರಾಜ್ಯ ಜೆಡಿಎಸ್ ಬೆಂಬಲದೊಂದಿಗೆ ರಾಷ್ಟ್ರ ಮಟ್ಟದಲ್ಲಿ ತೃತಿಯ ರಂಗ ಸ್ಥಾಪನೆ ವಿಷಯವನ್ನು ಪ್ರಸ್ತಾಪಿಸಿದರು. ಈಗಾಗಲೇ ಪಶ್ಚಿಮ ಬಂಗಾಳ, ಜಾರ್ಖಂಡ್ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ಜೊತೆ ಚರ್ಚೆ ನಡೆಸಲಾಗಿದೆ. ದೇಶದ ಪ್ರಮುಖ ನದಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ನೀರಿದೆ. ಆದರೆ ರಾಜ್ಯಗಳ ನಡುವೆ ನಿರಂತರವಾಗಿ ನೀರಿಗಾಗಿ ಜಗಳ ನಡೆಯುತ್ತಿದೆ. ಈ ಜಲ ಯುದ್ಧಕ್ಕೆ ಕಾರಣ ಯಾರು? 65 ವರ್ಷ ಕಳೆದರೂ ಸಮಸ್ಯೆ ಪರಿಹಾರ ಸಿಕ್ಕಿಲ್ಲ. ರೈತರಿಗೆ ನೀರು ಸಿಗುತ್ತಿಲ್ಲ. ಕೇಂದ್ರ ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್ ಟ್ರ್ಯಾಪ್ ನಿಂದ ಪ್ರಾದೇಶಿಕ ಪಕ್ಷಗಳನ್ನು ಹೊರತರಬೇಕಿದೆ. ಇದಕ್ಕಾಗಿ ನೂತನ ತೃತೀಯ ರಂಗ ಸ್ಥಾಪನೆಗೆ ಮುಂದಾಗಿದ್ದೇವೆ ಎಂದರು.

vlcsnap 2018 04 13 17h34m11s238

ಜನಪರ, ಜನ ಸಾಮಾನ್ಯರ, ರೈತರ ಪರವಾದ ತೃತೀಯ ರಂಗವನ್ನು ರಚಿಸುವುದು ನಮ್ಮ ಉದ್ದೇಶ. ದೇಶದಲ್ಲಿ ಸಾಕಷ್ಟು ನೀರು ಇದೆ. ಕರ್ನಾಟಕ, ತಮಿಳುನಾಡು ಸೇರಿದಂತೆ ಎಲ್ಲ ರಾಜ್ಯಗಳಿಗೂ ಸಮರ್ಪಕ ನೀರು ಸಿಗುವಂತೆ ಮಾಡುತ್ತೇವೆ. ಎರಡೂ ರಾಷ್ಟ್ರೀಯ ಪಕ್ಷಗಳಿಂದ ಭಾರತ, ಭಾರತ ಮಾತೆ ಮತ್ತು ಭಾರತೀಯರನ್ನು ರಕ್ಷಿಸಬೇಕಿದೆ. ಈ ನಿಟ್ಟಿನಲ್ಲಿ ಯಾವುದೇ ಪಕ್ಷ ನಮ್ಮ ತೃತೀಯ ರಂಗಕ್ಕೆ ಸೇರಿದರೂ ಆ ಪಕ್ಷಕ್ಕೆ ಸ್ವಾಗತ ಎಂದರು.

ಈ ವೇಳೆ ಮಾತನಾಡಿದ ಎಚ್‍ಡಿಡಿ ತೃತೀಯ ರಂಗ ಎನ್ನುವುದಕ್ಕಿಂತ ಇದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ. ಕೆಸಿಆರ್ ತೆಲಂಗಾಣ ಪ್ರತ್ಯೇಕ ರಾಜ್ಯ ನಂತರ ಇದು ಮೊದಲ ಭೇಟಿಯಾಗಿದ್ದು, ರಾಜ್ಯದ ಸಿಎಂ ಆಗಿ ಕೆಸಿಆರ್ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಬ್ಬರು ನೀರಾವರಿ ಹಾಗೂ ರೈತರ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.

ವಿಶೇಷವಾಗಿ ಈ ಭೇಟಿಯಲ್ಲಿ ಭಾಗವಹಿಸಿದ್ದ ಬಹು ಭಾಷಾ ನಟ ಪ್ರಕಾಶ್ ರೈ ಮಾತನಾಡಿ, ನಾವು ಸಮಾನ ಮನಸ್ಕರು ಒಂದು ವೇದಿಕೆಯಾಡಿ ಬರುವ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮಲ್ಲಿ ಸಾಕಷ್ಟು ಸಂಪನ್ಮೂಲವಿದ್ದರೂ ರಾಷ್ಟ್ರಾಭಿವೃದ್ದಿ ಸಾಧ್ಯವಾಗಿಲ್ಲ. ಹಾಗಾಗಿ ಯಾರನ್ನೂ ಮುಕ್ತ ಮಾಡುವ ವಿಷಯ ನಮ್ಮದಲ್ಲ. ನಾನು ಯಾವೊಂದು ರಾಜಕೀಯ ಪಕ್ಷವನ್ನೂ ಬೆಂಬಲಿಸುತ್ತಿಲ್ಲ. ಹಾಗಾಗಿಯೇ ಅಭಿವೃದ್ಧಿ ಪರವಾದ ಕೆಸಿಆರ್ ಪ್ರಯತ್ನಕ್ಕೆ ನಾನು ಕೈ ಜೋಡಿಸಿದ್ದೇನೆ ಎಂದರು.

vlcsnap 2018 04 13 17h33m40s183

TAGGED:actor prakash raibengalurudevegowdajdsKC Chandrasekhar RaoPublic TVTRSಕೆಸಿ ಚಂದ್ರಶೇಖರ್ ರಾವ್ಜೆಡಿಎಸ್ಟಿಆರ್ ಎಸ್ದೇವೇಗೌಡನಟ ಪ್ರಕಾಶ್ ರೈಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
1 hour ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
2 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
01 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-1

Public TV
By Public TV
2 hours ago
02 7
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-2

Public TV
By Public TV
2 hours ago
03 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?