Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ಪಿ ಬಳಿಕ ಟಿಆರ್‌ಎಸ್‌ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ – ತೃತೀಯ ರಂಗ ಸ್ಥಾಪನೆಗೆ ಮುನ್ನುಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಸ್‍ಪಿ ಬಳಿಕ ಟಿಆರ್‌ಎಸ್‌ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ – ತೃತೀಯ ರಂಗ ಸ್ಥಾಪನೆಗೆ ಮುನ್ನುಡಿ

Bengaluru City

ಬಿಎಸ್‍ಪಿ ಬಳಿಕ ಟಿಆರ್‌ಎಸ್‌ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ – ತೃತೀಯ ರಂಗ ಸ್ಥಾಪನೆಗೆ ಮುನ್ನುಡಿ

Public TV
Last updated: April 13, 2018 5:46 pm
Public TV
Share
2 Min Read
TDD TSR
SHARE

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಪಡೆಯಲು ಮಯಾವತಿಯವರ ಬಿಎಸ್‍ಪಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದ ಜೆಡಿಎಸ್, ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ರಾಜಕಾರಣವನ್ನು ಮುಂದುವರೆಸಿದ್ದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಪಕ್ಷದೊಂದಿಗೆ ಸೇರಿ ತೃತೀಯ ರಂಗ ರಚಿಸಲು ಹೊರಟಿದೆ.

ರಾಷ್ಟ್ರ ಮಟ್ಟದಲ್ಲಿ ತೃತಿಯ ರಂಗ ಸ್ಥಾಪನೆ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ಟಿಆರ್ ಎಸ್ ಪಕ್ಷದ ನಾಯಕ ಕೆಸಿ ಚಂದ್ರಶೇಖರ್ ರಾವ್(ಕೆಸಿಆರ್) ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನಗರದ ಪದ್ಮನಾಭ ನಗರದ ಎಚ್‍ಡಿಡಿ ನಿವಾಸಕ್ಕೆ ಆಗಮಿಸಿದ ಚಂದ್ರಶೇಖರ್ ರಾವ್ ಅವರು ಸುಮಾರು 2 ಗಂಟೆಕಾಲ ದೇವೇಗೌಡರ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ, ನಟ ಪ್ರಕಾಶ್ ರೈ, ಟಿಆರ್ ಎಸ್ ಪಕ್ಷದ ಸಂಸದರು, ಶಾಸಕರು ಚರ್ಚೆಯಲ್ಲಿ ಭಾಗಿದ್ದರು.

TDD TSR 1

ಎಚ್‍ಡಿಡಿ ನಿವಾಸದಲ್ಲೇ ಮಧ್ಯಾಹ್ನದ ಭೋಜನ ಸೇವಿಸಿದ ಕೆಸಿಆರ್ ಕರ್ನಾಟಕ ವಿಧಾನಸಭಾ ಚನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಕರ್ನಾಟಕದಲ್ಲಿರುವ ಎಲ್ಲ ತೆಲುಗು ಭಾಷಿಕ ಮತದಾರರಿಗೆ ಮನವಿ ಮಾಡುವುದಾಗಿ ಘೋಷಿಸಿದರು. ಅಲ್ಲದೇ ಕುಮಾರಸ್ವಾಮಿ ಅವರು ಎಲ್ಲೆಲ್ಲಿ ನನ್ನ ಅಗತ್ಯ ಇದೆ ಎಂದು ಕರೆಯುತ್ತಾರೋ ಅಲ್ಲಿಗೆ ನಾನು ಪ್ರಚಾರಕ್ಕೆ ಬರುತ್ತೇನೆ ಎಂದರು.

ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕೆಸಿಆರ್, ರಾಜ್ಯ ಜೆಡಿಎಸ್ ಬೆಂಬಲದೊಂದಿಗೆ ರಾಷ್ಟ್ರ ಮಟ್ಟದಲ್ಲಿ ತೃತಿಯ ರಂಗ ಸ್ಥಾಪನೆ ವಿಷಯವನ್ನು ಪ್ರಸ್ತಾಪಿಸಿದರು. ಈಗಾಗಲೇ ಪಶ್ಚಿಮ ಬಂಗಾಳ, ಜಾರ್ಖಂಡ್ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ಜೊತೆ ಚರ್ಚೆ ನಡೆಸಲಾಗಿದೆ. ದೇಶದ ಪ್ರಮುಖ ನದಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ನೀರಿದೆ. ಆದರೆ ರಾಜ್ಯಗಳ ನಡುವೆ ನಿರಂತರವಾಗಿ ನೀರಿಗಾಗಿ ಜಗಳ ನಡೆಯುತ್ತಿದೆ. ಈ ಜಲ ಯುದ್ಧಕ್ಕೆ ಕಾರಣ ಯಾರು? 65 ವರ್ಷ ಕಳೆದರೂ ಸಮಸ್ಯೆ ಪರಿಹಾರ ಸಿಕ್ಕಿಲ್ಲ. ರೈತರಿಗೆ ನೀರು ಸಿಗುತ್ತಿಲ್ಲ. ಕೇಂದ್ರ ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್ ಟ್ರ್ಯಾಪ್ ನಿಂದ ಪ್ರಾದೇಶಿಕ ಪಕ್ಷಗಳನ್ನು ಹೊರತರಬೇಕಿದೆ. ಇದಕ್ಕಾಗಿ ನೂತನ ತೃತೀಯ ರಂಗ ಸ್ಥಾಪನೆಗೆ ಮುಂದಾಗಿದ್ದೇವೆ ಎಂದರು.

vlcsnap 2018 04 13 17h34m11s238

ಜನಪರ, ಜನ ಸಾಮಾನ್ಯರ, ರೈತರ ಪರವಾದ ತೃತೀಯ ರಂಗವನ್ನು ರಚಿಸುವುದು ನಮ್ಮ ಉದ್ದೇಶ. ದೇಶದಲ್ಲಿ ಸಾಕಷ್ಟು ನೀರು ಇದೆ. ಕರ್ನಾಟಕ, ತಮಿಳುನಾಡು ಸೇರಿದಂತೆ ಎಲ್ಲ ರಾಜ್ಯಗಳಿಗೂ ಸಮರ್ಪಕ ನೀರು ಸಿಗುವಂತೆ ಮಾಡುತ್ತೇವೆ. ಎರಡೂ ರಾಷ್ಟ್ರೀಯ ಪಕ್ಷಗಳಿಂದ ಭಾರತ, ಭಾರತ ಮಾತೆ ಮತ್ತು ಭಾರತೀಯರನ್ನು ರಕ್ಷಿಸಬೇಕಿದೆ. ಈ ನಿಟ್ಟಿನಲ್ಲಿ ಯಾವುದೇ ಪಕ್ಷ ನಮ್ಮ ತೃತೀಯ ರಂಗಕ್ಕೆ ಸೇರಿದರೂ ಆ ಪಕ್ಷಕ್ಕೆ ಸ್ವಾಗತ ಎಂದರು.

ಈ ವೇಳೆ ಮಾತನಾಡಿದ ಎಚ್‍ಡಿಡಿ ತೃತೀಯ ರಂಗ ಎನ್ನುವುದಕ್ಕಿಂತ ಇದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ. ಕೆಸಿಆರ್ ತೆಲಂಗಾಣ ಪ್ರತ್ಯೇಕ ರಾಜ್ಯ ನಂತರ ಇದು ಮೊದಲ ಭೇಟಿಯಾಗಿದ್ದು, ರಾಜ್ಯದ ಸಿಎಂ ಆಗಿ ಕೆಸಿಆರ್ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಬ್ಬರು ನೀರಾವರಿ ಹಾಗೂ ರೈತರ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.

ವಿಶೇಷವಾಗಿ ಈ ಭೇಟಿಯಲ್ಲಿ ಭಾಗವಹಿಸಿದ್ದ ಬಹು ಭಾಷಾ ನಟ ಪ್ರಕಾಶ್ ರೈ ಮಾತನಾಡಿ, ನಾವು ಸಮಾನ ಮನಸ್ಕರು ಒಂದು ವೇದಿಕೆಯಾಡಿ ಬರುವ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮಲ್ಲಿ ಸಾಕಷ್ಟು ಸಂಪನ್ಮೂಲವಿದ್ದರೂ ರಾಷ್ಟ್ರಾಭಿವೃದ್ದಿ ಸಾಧ್ಯವಾಗಿಲ್ಲ. ಹಾಗಾಗಿ ಯಾರನ್ನೂ ಮುಕ್ತ ಮಾಡುವ ವಿಷಯ ನಮ್ಮದಲ್ಲ. ನಾನು ಯಾವೊಂದು ರಾಜಕೀಯ ಪಕ್ಷವನ್ನೂ ಬೆಂಬಲಿಸುತ್ತಿಲ್ಲ. ಹಾಗಾಗಿಯೇ ಅಭಿವೃದ್ಧಿ ಪರವಾದ ಕೆಸಿಆರ್ ಪ್ರಯತ್ನಕ್ಕೆ ನಾನು ಕೈ ಜೋಡಿಸಿದ್ದೇನೆ ಎಂದರು.

vlcsnap 2018 04 13 17h33m40s183

TAGGED:actor prakash raibengalurudevegowdajdsKC Chandrasekhar RaoPublic TVTRSಕೆಸಿ ಚಂದ್ರಶೇಖರ್ ರಾವ್ಜೆಡಿಎಸ್ಟಿಆರ್ ಎಸ್ದೇವೇಗೌಡನಟ ಪ್ರಕಾಶ್ ರೈಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

YOGI ADITYANATH
Latest

ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್‌

Public TV
By Public TV
24 minutes ago
onion price raichuru
Latest

ಮಧ್ಯಪ್ರಾಚ್ಯ ದೇಶಗಳ ಯುದ್ಧದ ಎಫೆಕ್ಟ್: ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ

Public TV
By Public TV
1 hour ago
FLY91 hubballi technical issue
Dharwad

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ – 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು

Public TV
By Public TV
2 hours ago
Hassan Father In Law Son In Law Drown In Lake
Crime

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

Public TV
By Public TV
2 hours ago
Lalbag Lake Sankey Tank
Bengaluru City

ಬಿರು ಬೇಸಿಗೆಗೆ ಬತ್ತುತ್ತಿವೆ ಬೆಂಗಳೂರಿನ ಪ್ರಮುಖ ಕೆರೆಗಳು – ನಾಲ್ಕೈದು ಅಡಿ ಕುಸಿದ ನೀರಿನ ಮಟ್ಟ

Public TV
By Public TV
2 hours ago
Char Dham Yatra Temples
Latest

ತೆರೆದ ಗಂಗೋತ್ರಿ, ಯಮುನೋತ್ರಿ ದೇವಾಲಯಗಳ ಬಾಗಿಲು – ಚಾರ್‌ ಧಾಮ್‌ ಯಾತ್ರೆ ಪ್ರಾರಂಭ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?