ಹೈದರಾಬಾದ್: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದಂತೆ ತೆಲಂಗಾಣ (Telangana) ಸರ್ಕಾರವೂ ಸಹ 6 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತ್ತು.
ತೆಲಂಗಾಣದ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಿದರು. ಈ ವರ್ಷದ ಬಜೆಟ್ ಗಾತ್ರ ಮೊದಲ ಬಾರಿಗೆ 3 ಲಕ್ಷ ಕೋಟಿ ರೂ.ಗಳನ್ನು ದಾಟಿದೆ. ಇದನ್ನೂ ಓದಿ: ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ ‘ಸಿಕಂದರ್’ ಚಿತ್ರದ ಸಾಂಗ್ ರಿಲೀಸ್
ಇದೀಗ ತೆಲಂಗಾಣ ಸರ್ಕಾರ ರಾಜ್ಯ ಬಜೆಟ್ನಲ್ಲಿ 6 ಗ್ಯಾರಂಟಿ ಯೋಜನೆಗಳಿಗೆ ಒಟ್ಟು 56,984 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದನ್ನೂ ಓದಿ: ಮಸ್ಕ್ ಆಫರ್ ತಿರಸ್ಕರಿಸಿದ್ದ ಬೈಡನ್ – ಬಾಹ್ಯಾಕಾಶದಲ್ಲೇ 9 ತಿಂಗಳು ಕಳೆದ ಸುನಿತಾ
ಮಹಾಲಕ್ಷ್ಮಿ ಯೋಜನೆಗೆ 4,305 ಕೋಟಿ ರೂ., ಗೃಹ ಜ್ಯೋತಿಗೆ 2,080 ಕೋಟಿ ರೂ., ಸನ್ನಾ ಅಕ್ಕಿ ಬೋನಸ್ಗೆ 1,800 ಕೋಟಿ ರೂ., ರಾಜೀವ್ ಆರೋಗ್ಯ ಶ್ರೀ ಯೋಜನೆಗೆ 1,143 ಕೋಟಿ ರೂ., ಗ್ಯಾಸ್ ಸಿಲಿಂಡರ್ ಸಬ್ಸಿಡಿಗೆ 723 ಕೋಟಿ ರೂ. ಮತ್ತು ಇಂದಿರಮ್ಮ ಆತ್ಮ ಭರೋಸಾ ಯೋಜನೆಗೆ 600 ಕೋಟಿ ರೂ.ಹಣವನ್ನು ಮೀಸಲಿಟ್ಟಿದೆ. ಇದನ್ನೂ ಓದಿ: PUBLiC TV Impact| ತೋಟದ ವಸತಿ ಪ್ರದೇಶಗಳಲ್ಲಿ ಮೊಬೈಲ್ ಟಾರ್ಚ್ ಬಳಸಿ ಓದುತ್ತಿದ್ದ ಮಕ್ಕಳಿಗೆ ವಿದ್ಯುತ್ ಪೂರೈಕೆ