ಹೈದರಾಬಾದ್: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯೇ ಪತ್ನಿ ಮತ್ತು ಆಕೆಯ ಪ್ರಿಯಕರನ ಹತ್ಯೆಗೈದಿರುವ ಘಟನೆ ತೆಲಂಗಾಣದ ಹೈದರಾಬಾದ್ನ ರಾಚಕೊಂಡದಲ್ಲಿ ನಡೆದಿದೆ.
ಕಾರು ಚಾಲಕನಾಗಿದ್ದ ಯಶವಂತ್ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿಗೆ ಎಷ್ಟು ಬಾರಿ ತಿಳುವಳಿಕೆ ಹೇಳಿದರೂ ಕೇಳದ ಹಿನ್ನೆಲೆ ಅವಮಾನ ಅನುಭವಿಸಿ ಆರೋಪಿ ಈ ಕೃತ್ಯ ಎಸಗಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಲ್ಬಿ ನಗರದ ಉಪ ಪೊಲೀಸ್ ಆಯುಕ್ತ ಸನ್ಪ್ರೀತ್ ಸಿಂಗ್ ತಿಳಿಸಿದ್ದಾರೆ.

ವಿಜಯವಾಡದಿಂದ ಹೈದರಾಬಾದ್ಗೆ ಮಹಿಳೆ ಮತ್ತು ಆಕೆಯ ಕುಟುಂಬಸ್ಥರು ಶಿಫ್ಟ್ ಆಗಿದ್ದರು. ಈ ವೇಳೆ ತನ್ನ ಪತ್ನಿಗೆ ಯಶವಂತ್ ಪರಿಚಯವಾಗಿ ನಂತರ ಇಬ್ಬರ ನಡುವೆ ಅಕ್ರಮ ಸಂಬಂಧ ಶುರುವಾಗಿತ್ತು. ಈ ವಿಚಾರ ತಿಳಿದು ನಿರಾಕರಿಸಿ ಆರೋಪಿ ತನ್ನ ಪತ್ನಿಗೆ ಅನೇಕ ಬಾರಿ ಬುದ್ಧಿವಾದ ಹೇಳಿದ್ದಾನೆ. ಆದರೆ ಆಕೆ ಪತಿಯನ್ನೇ ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕಿದ್ದಾಳೆ. ನಂತರ ಆರೋಪಿ ಮತ್ತೆ ವಿಜಯವಾಡಕ್ಕೆ ಹಿಂತಿರುಗುವುದಾಗಿ ಹೆಂಡತಿ ಬಳಿ ಪ್ರಸ್ತಾಪಿಸಿದಾಗ ಆಕೆ ಕೂಡ ಒಪ್ಪಿಕೊಂಡಿದ್ದಳು. ಆದರೆ ಜೊತೆಯಲ್ಲಿ ಯಶವಂತ್ನನ್ನು ಸಹ ತಮ್ಮೊಂದಿಗೆ ಕರೆದುಕೊಂಡು ಹೋಗಬೇಕೆಂದು ಕೇಳಿಕೊಂಡಿದ್ದಳು. ಇದೇ ವೇಳೆ ಆರೋಪಿ ಕೊಲ್ಲಲು ಪ್ಲಾನ್ ಮಾಡಿದ್ದನು. ಇದನ್ನೂ ಓದಿ: 2024ರಲ್ಲಿ ಶುಕ್ರಯಾನಕ್ಕೆ ISRO ಸಜ್ಜು- ಇಲ್ಲಿದೆ ಶುಕ್ರಗ್ರಹದ ಸ್ವಾರಸ್ಯಕರ ಸಂಗತಿ

ನಂತರ ಮೂವರೂ ಎರಡು ವಾಹನಗಳಲ್ಲಿ ಕೊತಗುಡೆಂ ಪಟ್ಟಣವನ್ನು ತಲುಪಿದರು. ಬಳಿಕ ತನ್ನನ್ನು ಮತ್ತು ಯಶವಂತ್ನನ್ನು ಒಬ್ಬಂಟಿಯಾಗಿ ಬಿಡುವಂತೆ ಮಹಿಳೆ ತನ್ನ ಪತಿಯನ್ನು ಕೇಳಿದ್ದಾಳೆ. ಈ ವೇಳೆ ಆರೋಪಿ ಮದ್ಯ ಸೇವಿಸಲು ಪ್ರಾರಂಭಿಸಿದಾಗ, ಆತನ ಹೆಂಡತಿ ಮತ್ತು ಆಕೆಯ ಪ್ರಿಯಕರ ಆರೋಪಿ ಮುಂದೆಯೇ ಲೈಂಗಿಕ ಸಂಭೋಗವನ್ನು ಪ್ರಾರಂಭಿಸಿದ್ದಾರೆ. ಇದನ್ನು ಕಂಡು ಕೋಪಗೊಂಡ ಆರೋಪಿ ಬಂಡೆಕಲ್ಲುಗಳಿಂದ ಇಬ್ಬರಿಗೂ ಹೊಡೆದು ಸ್ಕ್ರೂಡ್ರೈವರ್ನಿಂದ ಇರಿದಿದ್ದಾನೆ. ಇದರಿಂದಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೃತದೇಹಗಳನ್ನು ಜನನಿಬಿಡ ಪ್ರದೇಶದಲ್ಲಿ ಬಿಟ್ಟು ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಫಿನ್ಲ್ಯಾಂಡ್ ಪ್ರಧಾನಿಯನ್ನು ಭೇಟಿ ಮಾಡಿದ ಮೋದಿ – ಕಾರಣವೇನು?



