ತೆಲಂಗಾಣ | ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಲು ಸಿಗದ ಅವಕಾಶ – ಬಿಜೆಪಿಗೆ ಶಾಸಕ ರಾಜಾ ಸಿಂಗ್ ಗುಡ್‌ ಬೈ

Public TV
2 Min Read
Raja Singh

ಹೈದರಾಬಾದ್: ತೆಲಂಗಾಣ (Telangana) ಬಿಜೆಪಿಯ (BJP) ಫೈರ್ ಬ್ರಾಂಡ್ ಹಾಗೂ ಕಟ್ಟ ಹಿಂದುತ್ವವಾದಿ ಶಾಸಕ ಟಿ. ರಾಜಾ ಸಿಂಗ್ (T.Raja Sing) ಪಕ್ಷಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ರಾಜಾ ಸಿಂಗ್ ಗೋಶಾಮಹಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ತೆಲಂಗಾಣ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಪ್ರಚೋದನಾತ್ಮಕ ಭಾಷಣಗಳಿಂದ ಅವರು ಆಗಾಗ ಸುದ್ದಿಯಾಗುತ್ತಿದ್ದರು. ಇದನ್ನೂ ಓದಿ: ಸ್ಲಂ ಬೋರ್ಡ್ ಮನೆ ನಿರ್ಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ತಹಶೀಲ್ದಾರ್ ವರದಿಯಲ್ಲಿ ಬಯಲಾಯ್ತು ಕರ್ಮಕಾಂಡ‌

T Raja Singh

ರಾಜೀನಾಮೆ ಕುರಿತು ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ ಕಿಶನ್ ರೆಡ್ಡಿಯವರಿಗೆ ಅವರು ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಪಕ್ಷದ ಕಚೇರಿಗೆ ಆಗಮಿಸಿ ಸಾಕಷ್ಟು ಸಮಯ ನಾಯಕರೊಂದಿಗೆ ಚರ್ಚಿಸಿ ಬಳಿಕ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ರಾಜೀನಾಮೆ ಪತ್ರದಲ್ಲಿ, ಬಿಜೆಪಿಯ ಮುಂದಿನ ರಾಜ್ಯಾಧ್ಯಕ್ಷರನ್ನಾಗಿ ಎನ್ ರಾಮಚಂದ್ರ ರಾವ್ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ರಾವ್ ಅವರನ್ನು ನೇಮಕ ಮಾಡಲಾಗುವುದು ಎಂದು ಮಾಧ್ಯಮ ವರದಿಗಳಿಂದ ತಿಳಿದುಕೊಂಡಿದ್ದೇನೆ. ಈ ನಿರ್ಧಾರ ನನಗೆ ಮಾತ್ರವಲ್ಲ, ಪಕ್ಷದ ಜೊತೆ ಇರುವ ಲಕ್ಷಾಂತರ ಕಾರ್ಯಕರ್ತರು, ನಾಯಕರು ಮತ್ತು ಮತದಾರರಿಗೆ ನಿರಾಶೆಯನ್ನುಂಟು ಮಾಡಿದೆ ಎಂದು ಬರೆದಿದ್ದಾರೆ ಎಂದು ವರದಿಯಾಗಿದೆ.

ರಾಜೀನಾಮೆ ಸಲ್ಲಿಸಿದ ಬಳಿಕ ಮಾತಾಡಿದ ರಾಜಾಸಿಂಗ್‌, ‘ರಾಮಚಂದ್ರ ರಾವ್ ಅವರಿಗೆ ಪಕ್ಷದ ಅಧಿಕಾರ ಹಸ್ತಾಂತರದಿಂದ ನನಗೆ ತೀವ್ರ ಬೇಸರವಿದೆ. ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನಾನು ನಾಮಪತ್ರ ಸಲ್ಲಿಸಲು ಬಯಸಿದ್ದೆ. ಆದರೆ, ನನ್ನ ಬೆಂಬಲಿಗರಿಗೆ ಬೆದರಿಕೆ ಹಾಕಲಾಯಿತು. ನಾನು ನಾಮಪತ್ರ ಸಲ್ಲಿಸಲು ಬಂದಾಗ ನನಗೆ ಅವಕಾಶ ನೀಡಲಿಲ್ಲ. ಅವರು ತಮಗೆ ಬೇಕಾದ ಜನರಿಗೆ ಹುದ್ದೆಯನ್ನು ನೀಡುತ್ತಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

ಹೈಕೋರ್ಟ್ ವಕೀಲ ಮತ್ತು ರಾಜ್ಯ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ರಾಮಚಂದ್ರ ರಾವ್ ಅವರು ಈ ಹಿಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಭಾರತೀಯ ಜನತಾ ಯುವ ಮೋರ್ಚಾ ಮತ್ತು ಬಿಜೆಪಿಯ ಕಾನೂನು ಘಟಕದಲ್ಲಿ ಕೆಲಸ ಮಾಡಿದ್ದರು. ಅವರು ಹಿಂದೆ ಪಕ್ಷದ ಹೈದರಾಬಾದ್ ಘಟಕದ ನೇತೃತ್ವ ವಹಿಸಿದ್ದರು. ಇದನ್ನೂ ಓದಿ: 5 ಹುಲಿಗಳ ಸಾವು ಪ್ರಕರಣ – ಡಿಸಿಎಫ್, ಎಸಿಎಫ್‌ಗಳಿಗೆ ಕಡ್ಡಾಯ ರಜೆ ಮೇಲೆ ತೆರಳಲು ಸರ್ಕಾರ ಆದೇಶ

Share This Article