Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಮಗನನ್ನು ಕರೆತರಲು 1,400 ಕಿಮೀ ದೂರ ಒಬ್ಬರೇ ಸ್ಕೂಟಿಯಲ್ಲಿ ಹೋದ ತಾಯಿ

Public TV
Last updated: April 10, 2020 2:46 pm
Public TV
Share
3 Min Read
telangana mom 759
SHARE

– ಪೊಲೀಸರ ಸಹಕಾರದಿಂದ ತಾಯಿಯನ್ನು ಸೇರಿದ ಮಗ

ಹೈದರಾಬಾದ್: ಲಾಕ್‍ಡೌನ್ ಮಧ್ಯೆ ಮನೆಗೆ ಬರಲಾಗದೇ ಪರದಾಡುತ್ತಿದ್ದ ಮಗನಿಗಾಗಿ ತೆಲಂಗಾಣದಲ್ಲಿ ತಾಯಿ ಒಬ್ಬರೇ ಸ್ಕೂಟಿಯಲ್ಲಿ ಬರೋಬ್ಬರಿ 1,400 ಕಿಮೀ ಪ್ರಯಾಣಿಸಿ ಆತನನ್ನು ಕರೆತಂದಿದ್ದಾರೆ. ಈ ಮೂಲಕ ತಾಯಿ ಮಕ್ಕಳಿಗಾಗಿ ಯಾವುದೇ ಸಂಕಷ್ಟವನ್ನು ಎದುರಿಸಲು ಅಂಜಲ್ಲ ಎನ್ನೋದಕ್ಕೆ ಉದಾಹರಣೆ ಆಗಿದ್ದಾರೆ.

ತೆಲಂಗಾಣದ ನಿಜಾಮಾಬಾದ್‍ನಲ್ಲಿರುವ ಬೋಧಾನ್ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯಿನಿ ಆಗಿ ಕಾರ್ಯನಿರ್ವಹಿಸುತ್ತಿರುವ ರಜಿಯಾ ಬೇಗಮ್ ಮಗನಿಗಾಗಿ ಸಾವಿರಾರು ಕಿ.ಮೀ ಪ್ರಯಾಣಿಸಿದ್ದಾರೆ. ಮಗ ಮೊಹ್ಮದ್ ನಿಜಾಮುದ್ದೀನ್(19) ಹೈದರಾಬಾದಿನ ನಾರಾಯಣ ವೈದ್ಯಕೀಯ ಅಕಾಡೆಮಿ ಅಲ್ಲಿ ವ್ಯಾಸಂಗ ಮಾಡುತ್ತಿದ್ದು, ಮಾರ್ಚ್ 12ರಂದು ಸ್ನೇಹಿತನ ತಂದೆಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆತನ ಜೊತೆ ಮೊಹ್ಮದ್ ಆಂಧ್ರ ಪ್ರದೇಶದ ನೆಲ್ಲೂರಿಗೆ ತೆರೆಳಿದ್ದನು. ಬಳಿಕ ಅಲ್ಲಿಂದ ಬೋಧಾನ್‍ಗೆ ವಾಪಸ್ ಬರಲು ರೈಲ್ವೆ ಟಿಕೆಟ್ ಕೂಡ ಮಾರ್ಚ್ 23ರಂದು ಬುಕ್ ಮಾಡಿದ್ದನು. ಆದರೆ ಇದೇ ವೇಳೆ ಲಾಕ್‍ಡೌನ್ ಜಾರಿಯಾದ ಹಿನ್ನೆಲೆ ಮೊಹ್ಮದ್ ಬುಕ್ ಮಾಡಿದ್ದ ರೈಲ್ವೆ ಟಿಕೆಟ್ ಕೂಡ ರದ್ದು ಮಾಡಲಾಗಿತ್ತು. ಅಲ್ಲದೇ ಮನೆಗೆ ಹೋಗಲು ಆತನಿಗೆ ಯಾವುದೇ ವಾಹನವೂ ಸಿಗುತ್ತಿರಲಿಲ್ಲ. ಹೀಗಾಗಿ ಸ್ನೇಹಿತನ ಮನೆಯಲ್ಲಿಯೇ ಉಳಿದಿದ್ದನು.

telangana mom 1

ಪ್ರತಿದಿನ ತಾಯಿ ಬಳಿ ಫೋನ್‍ನಲ್ಲಿಯೇ ಮೊಹ್ಮದ್ ಮಾತನಾಡುತ್ತಿದ್ದನು. ನನಗೆ ಮನೆಗೆ ಬರಬೇಕು ಎನಿಸುತ್ತಿದೆ ಎಂದು ಹೇಳಿಕೊಂಡಿದ್ದನು. ಇತ್ತ ರಜಿಯಾ ಅವರಿಗೂ ಮಗನ ಚಿಂತೆ ಶುರುವಾಗಿತ್ತು. ಹೀಗಾಗಿ ಬೋಧಾನ್ ಎಸಿಪಿ ಬಳಿ ಹೋಗಿ ಪರಿಸ್ಥಿತಿಯನ್ನು ವಿವರಿಸಿ ಮಗನನ್ನು ಕರೆತರಲು ಅನುಮತಿ ಪತ್ರವನ್ನು ಪಡೆದುಕೊಂಡು ಬಂದಿದ್ದರು. ಬಳಿಕ ಸೋಮವಾರ ಮನೆಮಂದಿಗೆ ಯಾರಿಗೂ ತಿಳಿಸದೆ ಬೆಳಗ್ಗೆ ಸ್ಕೂಟಿಯಲ್ಲಿ ರಜಿಯಾ ಮನೆಬಿಟ್ಟರು. ಬಳಿಕ ಹೈದರಾಬಾದ್ ತಲುಪಿದ ನಂತರ ಮಗನಿಗೆ ಕರೆಮಾಡಿ ನಾನು ನಿನ್ನನ್ನು ಕರೆದುಕೊಂಡು ಹೋಗಲು ಬರುತ್ತಿದ್ದೇನೆ ಎಂದು ತಿಳಿಸಿದ್ದರು.

ಬೋಧಾನ್‍ನಿಂದ ನೆಲ್ಲೂರಿಗೆ ಸುಮಾರು 700 ಕಿಮೀ ಅಂತರವಿದೆ. ಈ ದೂರವನ್ನು ರಜಿಯಾ ಸ್ಕೂಟಿಯಲ್ಲಿಯೇ ಒಬ್ಬರೇ ಕ್ರಮಿಸಿದ್ದಾರೆ. ಹಾಗೆಯೇ ಚೆಕ್‍ಪೋಸ್ಟ್ ಗಳಲ್ಲಿ ಪೊಲೀಸರು ತಡೆದಾಗ ಎಸಿಪಿ ಕೊಟ್ಟ ಪತ್ರವನ್ನು ತೋರಿಸಿ ಮುಂದೆ ಸಾಗುತ್ತಿದ್ದರು. ಮನೆಯಿಂದಲೇ ಊಟ, ತಿಂಡಿಯನ್ನೂ ರಜಿಯಾ ಕಟ್ಟಿಕೊಂಡು ಬಂದಿದ್ದರು. ಹಾಗೆಯೇ ಸ್ಕೂಟಿಗೆ ಪೆಟ್ರೋಲ್‍ಗಾಗಿ 5 ಲೀಟರ್ ಕ್ಯಾನ್‍ನನ್ನು ಇಟ್ಟುಕೊಂಡಿದ್ದರು. ಮಾರ್ಗ ಮಧ್ಯೆ ಸಿಗುತ್ತಿದ್ದ ಪೆಟ್ರೋಲ್ ಬಂಕ್‍ಗಳಲ್ಲಿ ವಾಹನಕ್ಕೆ ಪೆಟ್ರೋಲ್ ಹಾಕಿಸಿಕೊಂಡು, 15ರಿಂದ 20 ನಿಮಿಷ ಬ್ರೇಕ್ ಪಡೆದು ಊಟ-ತಿಂಡಿ ಮಾಡಿಕೊಂಡು ಮತ್ತೆ ಮುಂದೆ ಸಾಗುತ್ತಿದ್ದರು.

telangana mom 2

ಹೀಗೆ ಸ್ಕೂಟಿಯಲ್ಲಿಯೇ ಪ್ರಯಾಣಿಸಿ ಮಂಗಳವಾರ ಮಧ್ಯಾಹ್ನ ನೆಲ್ಲೂರು ತಲುಪಿದರು. ಆ ಬಳಿಕ ಅಲ್ಲಿ ಮಗನನ್ನು ಕರೆದುಕೊಂಡು ಮಂಗಳವಾರ ಸಂಜೆಯೇ ನೆಲ್ಲೂರು ಬಿಟ್ಟು ಬೋಧಾನ್ ಕಡೆ ಪ್ರಯಾಣ ಬೆಳೆಸಿದರು. ಕೊನೆಗೆ ಬುಧವಾರ ಸಂಜೆ ಬೋಧಾನ್ ಬಂದು ತಲುಪಿದ್ದರು.

ತಾಯಿಯ ಬಗ್ಗೆ ಮಗ ಮೊಹ್ಮದ್ ಮಾತನಾಡಿ, ನನ್ನ ಅಮ್ಮ ನನಗಾಗಿ 23ರಿಂದ 24 ಗಂಟೆ ಸುಮಾರು 700 ಕಿ.ಮೀ ಒಬ್ಬರೇ ಸ್ಕೂಟಿಯಲ್ಲಿ ಬಂದಿದ್ದಾರೆ. ಲಾಕ್‍ಡೌನ್ ಮಧ್ಯೆಯೂ ನನಗಾಗಿ ಪೊಲೀಸರ ಅನುಮತಿ ಪಡೆದು ಇಷ್ಟು ದೂರ ಬಂದಿದ್ದಾರೆ. ಎರಡು ದಿನ ನನಗಾಗಿ ಅಮ್ಮ ಕಷ್ಟ ಪಟ್ಟಿದ್ದಾರೆ ಎಂದು ಹೇಳಿದ್ದಾನೆ.

Telangana: Razia Begum from Bodhan, Nizamabad rode around 1,400 km on a 2-wheeler to Nellore in Andhra Pradesh, to bring back her son who was stranded there. She says, "I explained my situation to Bodhan ACP & he gave me a letter of permission to travel". (9.4.20) #CoronaLockdown pic.twitter.com/JHfRbdjOa1

— ANI (@ANI) April 10, 2020

ಇತ್ತ ರಜಿಯಾ ಅವರು ಪ್ರತಿಕ್ರಿಯಿಸಿ, ನನಗೆ ನನ್ನ ಮಗನ ಸುರಕ್ಷತೆ ಮುಖ್ಯವಾಗಿತ್ತು. ಆತ ಸ್ನೇಹಿತನ ಮನೆಯಲ್ಲಿ ಸುರಕ್ಷಿತವಾಗಿದ್ದನು. ಆದರೆ ನನಗೆ ಮನಸ್ಸು ತಡೆಯಲಿಲ್ಲ. ಆದ್ದರಿಂದ ಸ್ಕೂಟಿ ಹತ್ತಿ ಆತನನ್ನು ಕರೆತರಲು ಹೊರಟುಬಿಟ್ಟೆ. ನಾನು ಸುಮಾರು 25 ವರ್ಷದಿಂದ ಸ್ಕೂಟಿ ಚಲಾಯಿಸುತ್ತಿದ್ದೇನೆ. 14 ವರ್ಷಗಳ ಹಿಂದೆಯೇ ನನ್ನ ಪತಿ ತೀರಿಕೊಂಡರು. ಪತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ತುಂಬಾ ದೂರದ ಪ್ರಯಾಣ ಸ್ಕೂಟಿಯಲ್ಲಿಯೇ ಮಾಡಿದ್ದೇನೆ. ಹೀಗಾಗಿ ನೆಲ್ಲೂರು ತಲುಪುವುದು ನನಗೆ ಕಷ್ಟ ಅನಿಸಲಿಲ್ಲ. ಅದರಲ್ಲೂ ಪೊಲೀಸರು ಸಹಕಾರದಿಂದ ನಾನು ಇಂದು ನನ್ನ ಮಗನನ್ನು ಮನೆಗೆ ಕರೆತಂದಿದ್ದೇನೆ, ಪೊಲೀಸರಿಗೆ ಧನ್ಯವಾದ ಎಂದು ತಾಯಿ ತಿಳಿಸಿದ್ದಾರೆ.

telangana mom

ರಜಿಯಾ ಅವರ ಬಗ್ಗೆ ಬೋಧಾನ್ ಎಸಿಪಿ ಅವರು ಮಾತನಾಡಿ, ಅವರು ತುಂಬಾ ಧೈರ್ಯಶಾಲಿ ಮಹಿಳೆ. ಮೊದಲು ಅವರು ನನ್ನ ಬಳಿ ಮಗನನ್ನು ಕರೆದುಕೊಂಡು ಬರಲು ಅನುಮತಿ ಕೇಳಿದಾಗ ಕಾರ್ ನಲ್ಲಿ ಮಗನನ್ನು ಕರೆದುಕೊಂಡು ಬನ್ನಿ ಎಂದು ಸಲಹೆ ನೀಡಿದ್ದೆ. ಆಗ ಅವರು ನನ್ನ ಬಳಿ ಅಷ್ಟು ಹಣವಿಲ್ಲ, ನಾನು ಸ್ಕೂಟಿಯಲ್ಲಿಯೇ ಮಗನನ್ನು ಕರೆತರುತ್ತೇನೆ ದಯವಿಟ್ಟು ಅನುಮತಿ ನೀಡಿ ಎಂದು ಮನವಿ ಮಾಡಿದ್ದರು. ಅಲ್ಲದೇ ರಾತ್ರಿ ವೇಳೆ ಕೂಡ ನಿರ್ಜನ ರಸ್ತೆ ಮಾರ್ಗದಲ್ಲಿ, ಅರಣ್ಯ ಮಾರ್ಗದಲ್ಲಿ ಧೈರ್ಯಗೆಡದೆ ಪ್ರಯಾಣಿಸಿದ್ದಾರೆ. ಚೆಕ್‍ಪೋಸ್ಟ್ ಬಳಿ ಪೊಲೀಸರು ಹೀಗೆ ಒಬ್ಬರೇ ಹೋಗುವುದು ಸುರಕ್ಷಿತವಲ್ಲ ಎಂದು ಹೇಳಿದರೂ ಅವರು ಮಗನಿಗಾಗಿ ನಾನು ಹೋಗಲೇಬೇಕು ಎಂದು ಮನವಿ ಮಾಡಿಕೊಂಡು ಹೋಗಿದ್ದಾರೆ. ಈ ತಾಯಿಯ ಧೈರ್ಯ, ಪ್ರೀತಿ ನಿಜಕ್ಕೂ ಮೆಚ್ಚಲೇಬೇಕು ಎಂದು ಹೇಳಿದ್ದಾರೆ.

TAGGED:Andhra PradeshLockdownmotherpolicePublic TVscootysontelanganaಆಂಧ್ರಪ್ರದೇಶತಾಯಿತೆಲಂಗಾಣಪಬ್ಲಿಕ್ ಟಿವಿಪೊಲೀಸರುಮಂಗಲಾಕ್‍ಡೌನ್ಸ್ಕೂಟಿ
Share This Article
Facebook Whatsapp Whatsapp Telegram

Cinema news

bigg boss kannada 12
ಬಿಗ್‌ ಬಾಸ್‌ ಅರಮನೆಯಲ್ಲಿ ಸ್ಪೆಷಲ್‌ ಗೆಸ್ಟ್‌ಗಳ ದರ್ಬಾರ್‌; ಪಾರ್ಟಿ ಮಾಡೋಕೆ ಬಂದಿದ್ದಾರೆ ಮಾಜಿ ಸ್ಪರ್ಧಿಗಳು
Cinema Latest Top Stories TV Shows
Sherlyn Chopra
ಸೌಂದರ್ಯವೇ ʻಎದೆʼಗೆ ಭಾರವಾದಾಗ…. ಸ್ತನ ಕಸಿ ತೆಗೆಸಿದ್ದೇಕೆ ಶೆರ್ಲಿನ್‌ ಚೋಪ್ರಾ? ಸ್ತನ ಕಸಿಯಿಂದೇನಾಗುತ್ತದೆ?
Bollywood Cinema Health Latest National Top Stories
Vijay Sethupathi and Puri Jagannadh
ವಿಜಯ್ ಸೇತುಪತಿ ಹೊಸ ಸಿನಿಮಾದ ಶೂಟಿಂಗ್ ಮುಕ್ತಾಯ: ಪುರಿ ನಿರ್ದೇಶನದ ಸಿನಿಮಾ
Cinema Latest South cinema
Risha Gowda
ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲಬೇಕು – ರಿಷಾ ಗೌಡ
Cinema Karnataka Latest Top Stories TV Shows

You Might Also Like

Basavaraj rayreddy Siddaramaiah
Koppal

ನೀವ್ ನೀವೆ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ?- ಕುರ್ಚಿ ಕದನದಲ್ಲಿ ಸಿಎಂ ಪರ ರಾಯರೆಡ್ಡಿ ಬ್ಯಾಟಿಂಗ್

Public TV
By Public TV
10 minutes ago
Narendra Modi Ayodhya Ram Mandir
Latest

2047ರಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ರಾಮನ ಗುಣ ಮೈಗೂಡಿಸಿಕೊಳ್ಳಬೇಕು: ಮೋದಿ

Public TV
By Public TV
14 minutes ago
Datta Peetha 1
Chikkamagaluru

ದತ್ತಪೀಠ ಹಿಂದೂಗಳದ್ದು, ಮೈಸೂರು ಅರಸರು ಸಾವಿರಾರು ಎಕರೆ ದಾನ ನೀಡಿದ ದಾಖಲೆಗಳಿವೆ: ವಿಹೆಚ್‌ಪಿ

Public TV
By Public TV
32 minutes ago
Davanagere Death
Crime

ದಾವಣಗೆರೆ | ನಾಪತ್ತೆಯಾಗಿದ್ದ ಯುವಕರ ಶವ ಕೆರೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆ

Public TV
By Public TV
54 minutes ago
Anekal Lorry Fell Into Lake
Bengaluru Rural

Anekal | ರಸ್ತೆ ಗುಂಡಿ ತಪ್ಪಿಸಲು ಹೋಗಿ ಚಾಲಕನ ಸಮೇತ ಕೆರೆಗೆ ಬಿದ್ದ ಲಾರಿ

Public TV
By Public TV
1 hour ago
PM Modi Sacred Flag Ram Temple
Latest

ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?