ಹೈದರಾಬಾದ್: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಒಂದು ವರ್ಷದ ತನ್ನ ಪುಟ್ಟ ಮಗಳನ್ನು ಮಹಿಳೆಯೊಬ್ಬಳು ಸಂಪ್ಗೆ ಎಸೆದು ಹತ್ಯೆಗೈದು, ನಂತರ ಮಗುವಿನ ಸಾವಿಗೆ ಸರಗಳ್ಳರು ಕಾರಣ ಎಂದು ಕಥೆ ಕಟ್ಟಿದ್ದಾಳೆ.
ಸರಗಳ್ಳರು ಮನೆಯ ಬಳಿ ಮಗುವಿನ ಹತ್ತಿರ ಸರ ಕದಿಯಲು ಯತ್ನಿಸಿದಾಗ, ಮಗು ಸಂಪ್ಗೆ ಬಿದ್ದು ಸಾವನ್ನಪ್ಪಿದೆ ಎಂದು ಮಹಿಳೆ ಆರಂಭದಲ್ಲಿ ಹೇಳಿದ್ದಳು. ಆದರೆ ತನಿಖೆ ನಡೆಸಿದ ಪೊಲೀಸರು ಸರಗಳ್ಳತನ ಮಗುವಿನ ಸಾವಿಗೆ ಕಾರಣವಲ್ಲ. ಮಗುವನ್ನು ತಾನೇ ಕೊಂದು ಹಾಕಿ ನಂತರ ಮಹಿಳೆ ನಾಟಕವಾಡಿದ್ದಾಳೆ ಎಂದು ತಿಳಿಸಿದ್ದಾರೆ.
ಮಹಿಳೆಗೆ ಇಬ್ಬರು ಮಕ್ಕಳಿದ್ದು, ಮೃತ ಮಗು ಕಿರಿಯ ಮಗುವಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿತ್ತು. ಆರೋಗ್ಯದ ದೃಷ್ಟಿಯಿಂದ ಮಗುವಿಗೆ ಮತ್ತು ತನಗೆ ತೊಂದರೆಯಾಗುತ್ತದೆ ಎಂದು ಭಾವಿಸಿ ಮಹಿಳೆ ಮಗುವನ್ನು ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಲ್ಖೈದಾ ಮುಖ್ಯಸ್ಥ ಝವಾಹಿರಿ ಹತ್ಯೆ- ಮೋಸ್ಟ್ ವಾಂಟೆಡ್ ಉಗ್ರನ ಮೇಲೆ ಡ್ರೋಣ್ ಸ್ಟ್ರೈಕ್
ಈ ಕುರಿತಂತೆ ಮಹಿಳೆ ಕೂಡ ವಿಚಾರಣೆ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಇದೀಗ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು