ಹೈದರಬಾದ್: ಪಶುವೈದ್ಯೆ ಪ್ರಿಯಾಂಕ ರೆಡ್ಡಿ ನಂತರ ಅದೇ ಪ್ರದೇಶದಲ್ಲಿ ಸಿಕ್ಕ ಮೊತ್ತೊಂದು ಮಹಿಳೆ ಶವ ಕೊಲೆ ಮಾಡಿ ಸುಟ್ಟಿರುವುದಲ್ಲ ಅದು ಆತ್ಮಹತ್ಯೆ ಎಂದು ಪೊಲೀಸರು ಹೇಳಿದ್ದಾರೆ.
ಹೈದರಾಬಾದ್ ಸಮೀಪ ಶಂಶಾಬಾದ್ ನಗರದ ಹೊರ ವಲಯದ ಅಂಡರ್ ಬ್ರಿಡ್ಜ್ ಕೆಳಗೆ ಗುರುವಾರ ಪಶುವೈದ್ಯ ಪ್ರಿಯಾಂಕ ಶವ ಸಿಕ್ಕಿತ್ತು. ಇದೇ ಜಾಗದ ಸಮೀಪದಲ್ಲಿ ಮತ್ತೋರ್ವ ಮಹಿಳೆಯ ಮೃತದೇಹವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅದನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು.
ಈಗ ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಪ್ರಿಯಾಂಕ ಶವದ ನಂತರ ಸಿಕ್ಕ ಮಹಿಳೆ ಶವ ಕೊಲೆ ಮಾಡಿ ಸುಟ್ಟಿದ್ದಲ್ಲ. ಆಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾರೆ. ಈ ಪ್ರಕರಣದ ಪ್ರಾಥಮಿಕ ತನಿಖೆಯಿಂದ ಶವವಾಗಿ ಸಿಕ್ಕಿರುವ 35 ವರ್ಷದ ಮಹಿಳೆ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಆಕೆಯ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾರೆ.
ಈ ಪ್ರಕರಣದ ತನಿಖೆಯಲ್ಲಿ ನಾವು ಸಿಸಿಟಿವಿಯನ್ನು ಚೆಕ್ ಮಾಡಿದ್ದೇವೆ. ಇದರಲ್ಲಿ ಶುಕ್ರವಾರ ಸಂಜೆ ಮಹಿಳೆ ಬ್ಯಾಗ್ ಅನ್ನು ಹಿಡಿದುಕೊಂಡು ದೇವಸ್ಥಾನದ ಬಳಿ ಹೋಗಿರುವುದು ಗೊತ್ತಾಗಿದೆ. ಆ ಬ್ಯಾಗ್ ನಲ್ಲಿ ಪೆಟ್ರೋಲ್ ತೆಗೆದುಕೊಂಡು ಹೋಗಿದ್ದಾಳೆ ಎನ್ನಲಾಗಿದೆ. ಇದರ ಜೊತೆಗೆ ಸ್ಥಳೀಯರು ಅವಳನ್ನು ಆ ಸಮಯದಲ್ಲಿ ನೋಡಿದ್ದು, ಆಕೆ ಹಿಂದಿಯಲ್ಲಿ ಮಾತನಾಡುತ್ತಾ ಆಳುತ್ತಿದ್ದಳು ಎಂದು ಹೇಳಿದ್ದಾರೆ. ಆದ್ದರಿಂದ ಈಕೆ ಉತ್ತರ ಭಾರತ ಮೂಲದವಳಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ನಾವು ಮಾಡಿದ ಪ್ರಾಥಮಿಕ ತನಿಖೆ ಆಧಾರದ ಮೇಲೆ ಆತ್ಮಹತ್ಯೆ ಎಂದು ತಿಳಿದು ಬಂದಿದೆ. ಆದರೆ ನಾವು ಹೆಚ್ಚಿನ ತನಿಖೆ ಮಾಡುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳನ್ನು ನೀಡಲಾಗುವುದು. ಸಿಸಿಟಿವಿ ದೃಶ್ಯವನ್ನು ನೋಡಿ ಆಕೆ ಯಾರು ಎಂಬುದನ್ನು ಕಂಡು ಹಿಡಿಯುತ್ತೇವೆ. ಆದರೆ ಈಗ ಸಿಸಿಟಿವಿ ಮತ್ತು ಆಕೆಯ ದೇಹ ಪತ್ತೆಯಾದ ಸುತ್ತಮುತ್ತ ಸ್ಥಳದಲ್ಲಿ ದೊರೆತ ವಸ್ತುಗಳ ಆಧಾರದ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನು ಓದಿ: ಪಶುವೈದ್ಯೆಯನ್ನ ಗ್ಯಾಂಗ್ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು
ಇದಕ್ಕೂ ಮುನ್ನಾ ತೆಲಂಗಾಣದ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರನ್ನು ನಾಲ್ವರು ಪಾಪಿಗಳು ಬೈಕ್ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಆಕೆಯನ್ನು ಆತ್ಯಾಚಾರ ಮಾಡಿ ಕೊಲೆ ಮಾಡಿ ಸುಟ್ಟು ಹಾಕಿದ್ದರು. ಈ ವಿಚಾರ ಇಡೀ ದೇಶವನ್ನೆ ನುಡುಗಿಸಿತ್ತು. ಈ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಸುಟ್ಟ ರೀತಿಯಲ್ಲಿ ಇನ್ನೊಂದು ಮಹಿಳೆಯ ಶವ ಪತ್ತೆಯಾಗಿ ಹಲವಾರು ಅನುಮಾನ ಹುಟ್ಟಿಹಾಕಿತ್ತು.