ಕರ್ನಾಟಕ ಕಿರುತೆರೆಯ ಕಲಾವಿದರು ಹಾಗೂ ತಂತ್ರಜ್ಞರ ಮಾತೃಸಂಸ್ಥೆ ಕರ್ನಾಟಕ ಟೆಲಿವಿಷನ್ (Television) ಅಸೋಷಿಯೇಷನ್ (Association) (KTVA) ಮೊನ್ನೆಯಷ್ಟೇ ಚುನಾವಣೆ ನಡೆದಿದ್ದು, ಕನ್ನಡದ ಹೆಸರಾಂತ ನಿರ್ದೇಶಕ ಹಾಗೂ ನಿರ್ಮಾಪಕ ರವಿ ಆರ್ ಗರಣಿ (Ravi Garani) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಖ್ಯಾತ ನಟ ಸೃಜನ್ ಲೋಕೇಶ್ (Srujan Lokesh) ಕಾರ್ಯದರ್ಶಿ, ನಿರ್ಮಾಪಕ ಭಾಸ್ಕರ್ ಎಸ್.ಎಸ್. ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಧನಂಜಯ ನಟನೆಯ 25ನೇ ಸಿನಿಮಾ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್
- Advertisement 2
ಕಾರ್ಯಕಾರಿ ಸಮಿತಿಗೆ ಕಲಾವಿದರಾದ ಗಿರಿಜಾ ಲೋಕೇಶ್, ವೀಣಾ ಸುಂದರ್, ಗಣೇಶ್ ರಾವ್ ಕೆಸರ್ಕರ್, ಸುನೇತ್ರಾ ಪಂಡಿತ್, ರಾಮಸ್ವಾಮಿ ಗೌಡ ಎನ್.ಟಿ, ವಸಂತ್ ಕುಮಾರ್ ವಿ, ನಿರ್ಮಾಪಕಿ ಭಾವನಾ ಬೆಳಗೆರೆ, ನಿರ್ದೇಶಕ ಸತೀಶ್ ಕೃಷ್ಣ, ಬರಹಗಾರ ಕೇಶವಚಂದ್ರ, ಛಾಯಾಗ್ರಾಹಕರಾದ ಬೆಟ್ಟೇ ಗೌಡ ಕೆ.ಟಿ. ನಿರ್ಮಾಣ ನಿರ್ವಾಹಕ ಪರಯ್ಯ ಆರ್ ಮತ್ತು ಹರ್ಷ ವಿಶ್ವನಾಥ್, ಯೂನಿಟ್ ಮಾಲೀಕ ಸೆಲ್ವಂ, ಸಂಕಲನಕಾರ ಕೃಷ್ಣ ಅರಸ್ ಕೆ.ಸಿ, ಪ್ರಸಾಧನ ಕಲಾವಿದ ನಾಗರಾಜು ಪಿ. ಧ್ವನಿಗ್ರಾಹಕ ಕಲಾವಿದ ಸಾಗರ್ ಬಿ.ಕೆ, ಬೆಳಕು ಸಹಾಯಕರಾದ ಶ್ರೀನಿವಾಸ್ ಪಿ.ವಿ, ವಸ್ತ್ರವಿನ್ಯಾಸ ಮತ್ತು ಕಲಾವಿನ್ಯಾಸ ವೀರೇಂದ್ರ ಡಿ.ಸಿ , ವಾಹನ ಚಾಲಕರಾದ ತಿಮ್ಮರಾಜು, ನಿರ್ಮಾಣ ಸಹಾಯಕರಾದ ವೀರೇಂದ್ರ ಪಿಕೆ. ಈ ಬಾರಿ ಆಯ್ಕೆಯಾಗಿರುತ್ತಾರೆ. ಇದನ್ನೂ ಓದಿ: ಕ್ರಿಕೆಟರ್ ಶುಭಮನ್ ಗಿಲ್ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ರಶ್ಮಿಕಾ ಮಂದಣ್ಣ
- Advertisement 3
- Advertisement 4
ಆಯ್ಕೆಯಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅವಧಿ ಮೂರು ವರ್ಷಗಳದ್ದಾಗಿದ್ದು 2023 ರಿಂದ 2025 ರವರೆಗೂ ಕಾಲಾವಧಿಯದ್ದಾಗಿದೆ. ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ ಕಟ್ಟುವಲ್ಲಿ ರವಿ ಆರ್ ಗರಣಿ ಅವರದ್ದು ಸಾಕಷ್ಟು ಶ್ರಮವಿದೆ. ಹಲವು ವರ್ಷಗಳಿಂದ ಅವರು ಈ ಸಂಘಟನೆಯೊಂದಿಗೆ ಸಕ್ರಿಯರಾಗಿದ್ದಾರೆ. ಇದೀಗ ಅಧ್ಯಕ್ಷರಾಗುವ ಮೂಲಕ ಸಂಘದ ಸಾರಥ್ಯವಹಿಸಿದ್ದಾರೆ. ಇದನ್ನೂ ಓದಿ: ʻಒಲವ ಘಮವುʼ ಆಲ್ಬಂ ಸಾಂಗ್ಗೆ ಧ್ರುವ ಸರ್ಜಾ ಮೆಚ್ಚುಗೆ
ಈ ಹಿಂದೆ ಬಿ.ಸುರೇಶ್, ಎಸ್.ವಿ.ಶಿವಕುಮಾರ್, ರವಿಕಿರಣ್ ಸೇರಿದಂತೆ ಕಿರುತೆರೆಯ ಖ್ಯಾತನಾಮರು ಅಸೋಷಿಯೇಷನ್ ಅಧ್ಯಕ್ಷರಾಗಿ ಉದ್ಯಮಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕೆಲಸ ಮಾಡಿದ್ದಾರೆ. ಉದ್ಯಮದ ಅನೇಕ ಬಿಕ್ಕಟ್ಟುಗಳನ್ನು ಪರಿಹರಿಸಿದ್ದಾರೆ. ಕಲಾವಿದರ, ತಂತ್ರಜ್ಞರ ಕಷ್ಟಕ್ಕೂ ಸ್ಪಂದಿಸಿದ್ದಾರೆ. ಹೀಗಾಗಿ ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ ಕಿರುತೆರೆಯ ಜಗತ್ತಿನ ಪ್ರತಿಷ್ಠಿತ ಸಂಸ್ಥೆಯಾಗಿದೆ.