ನನ್ನ ಪರಿಸ್ಥಿತಿಯನ್ನು ಬೆಂಗ್ಳೂರಿನಲ್ಲಿರುವ ಮಗಳಿಗೆ ತಿಳಿಸಲು ಸಾಧ್ಯವೇ- ವೃದ್ಧೆಯ ಅಳಲು

Public TV
1 Min Read
mng ajji 1

ಮಂಗಳೂರು: ದಕ್ಷಿಣ ಕನ್ನಡ-ಕೊಡಗು ಗಡಿಭಾಗ ಸಂಪಾಜೆಯ ಜೋಡುಪಾಲ ವ್ಯಾಪ್ತಿಯ ಜನರ ಪಾಡು ನರಕವಾಗಿದೆ. ತಮ್ಮದೆಲ್ಲವನ್ನೂ ಕಳೆದುಕೊಂಡು ಬಡ ಜನರು ಬೀದಿಗೆ ಬಿದ್ದಿದ್ದಾರೆ. ಜೋಡುಪಾಲದ 2 ನೇ ಮೊಣ್ಣಂಗೇರಿ ನಿವಾಸಿ 60ರ ವೃದ್ಧೆ ಗಿರಿಜಾ ಎಂಬವರು ನನ್ನ ಪರಿಸ್ಥಿತಿ ಬೆಂಗಳೂರಿನಲ್ಲಿರುವ ಮಗಳಿಗೆ ತಿಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಗಿರಿಜಾರ ಮಗಳು ಲತಾಮಣಿ ಬೆಂಗಳೂರಿನಲ್ಲಿ ವಾಸವಾಗಿದ್ದು, ಆಕೆಗೆ ನನ್ನ ಪರಿಸ್ಥಿತಿ ಬಗ್ಗೆ ತಿಳಿಹೇಳಿ ಎಂದು ಮನವಿ ಮಾಡಿಕೊಂಡಿದ್ದಾರೆ. ಮೊಣ್ಣಂಗೇರಿಯ ಮನೆಯಲ್ಲಿ ನಾನೊಬ್ಬಳೇ ವಾಸವಿದ್ದು, ನೋಡನೋಡುತ್ತಲೇ ಕಲ್ಲು ಬಂಡೆಗಳು ನೀರಿನೊಂದಿಗೆ ಉರುಳಿ ಬಂದು ತನ್ನ ಮನೆಯನ್ನು ಸೀಳಿಕೊಂಡು ಹೋಯಿತು. ಕೆಲಹೊತ್ತಿನಲ್ಲಿ ಕಾಡಿನಿಂದ ಆನೆಗಳು ಘೀಳಿಟ್ಟವು. ಬೆಳಗಿನವರೆಗೂ ಅಲ್ಲೆ ಪಕ್ಕದಲ್ಲಿ ಕೂತು, ಆರು ಗಂಟೆಗೆ ಇಳಿದು ಬಂದಿದ್ದೇನೆ ಎಂದು ಹೇಳಿದ್ದಾರೆ.

ನನ್ನ ಮಗಳು ಲತಾಮಣಿ ಬೆಂಗಳೂರಿನಲ್ಲಿ ಕೆಲಸದಲ್ಲಿ ಇದ್ದಾಳೆ. ಲತಾಳನ್ನು ಸಂಪರ್ಕಿಸಲು ಮೊಬೈಲ್ ನಂಬರ್ ಗೊತ್ತಿಲ್ಲ. ಏನು ಕೆಲಸ ಅನ್ನೋದೂ ಗೊತ್ತಿಲ್ಲ. ನನಗೆ ಹೀಗಾಗಿದ್ದು ಮಗಳಿಗೆ ಗೊತ್ತಿರಲಿಕ್ಕಿಲ್ಲ ಅಂತಾ ಅಲವತ್ತುಕೊಂಡಿದ್ದಾರೆ. ಸದ್ಯಕ್ಕೆ ಗಿರಿಜಾ ಸಂಪಾಜೆಯ ಗಂಜಿ ಕೇಂದ್ರದಲ್ಲಿದ್ದಾರೆ. ಬೆಂಗಳೂರಿನ ಮಂದಿ ನನ್ನ ಪರಿಸ್ಥಿತಿಯನ್ನು ಮಗಳಿಗೆ ತಿಳಿಸಲು ಸಾಧ್ಯವೇ ಅಂತಾ ಕೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *