ಅಮರಾವತಿ: ತೆಲುಗು ಚಿತ್ರರಂಗದ ಹಿರಿಯ ನಟ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ (Posani Krishna Murali) ಅವರನ್ನು ಫೆ.26ರ ರಾತ್ರಿ 8:45ರ ಸುಮಾರಿಗೆ ಆಂಧ್ರ ಪ್ರದೇಶದ ಪೊಲೀಸರು (Andhra Pradesh police) ಬಂಧಿಸಿದ್ದಾರೆ.
Advertisement
ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್ಸಿ/ಎಸ್ಟಿ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಟನನ್ನು ಬಂಧಿಸಿರುವ ಪೊಲೀಸರು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಹೈವೇಯಲ್ಲಿ ಸರಣಿ ಅಪಘಾತ – ಈಶಾಗೆ ಬಂದಿದ್ದ ವಾಹನ ಸವಾರರ ಪರದಾಟ
Advertisement
ಸಮುದಾಯವೊಂದರ ವಿರುದ್ಧ ನಟ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಎರಡು ಗುಂಪುಗಳ ನಡುವೆ ವೈಷಮ್ಯಕ್ಕೂ ಕಾರಣವಾಯಿತು. ಈ ಹಿನ್ನೆಲೆ ಪೋಸಾನಿ ಕೃಷ್ಣ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಶಾ ಫೌಂಡೇಶನ್ ಶಿವರಾತ್ರಿ ಕಾರ್ಯಕ್ರಮ – ಅಮಿತ್ ಶಾ, ಡಿಕೆ ಶಿವಕುಮಾರ್ ಭಾಗಿ
Advertisement
Advertisement
ಪೋಸಾನಿ ಕೃಷ್ಣ ಅವರು ಕಾನೂನು ಸಂಕಷ್ಟ ಎದುರಿಸುತ್ತಿರುವುದು ಇದೇ ಮೊದಲೇನಲ್ಲ. 2024ರ ನವೆಂಬರ್ನಲ್ಲಿ ಸಿಎಂ ಚಂದ್ರಬಾಬು ನಾಯ್ಡು ವಿರದ್ಧವೂ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಆಗಲೂ ತಮ್ಮ ವಿರುದ್ಧ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ರೋಚಕ 8 ರನ್ಗಳ ಜಯ – ಚಾಂಪಿಯನ್ಸ್ ಟ್ರೋಫಿಯಿಂದ ಇಂಗ್ಲೆಂಡ್ ಔಟ್