ಬೆಳಗಾವಿ| ಸಾಕಿದ್ದ ಮಾವುತನನ್ನೇ ತಿವಿದು ಕೊಂದ ಆನೆ

Public TV
1 Min Read
Temple Elephant kills mahout Alakhanur village Belagavi

ಚಿಕ್ಕೋಡಿ: ತಾನೇ ಸಾಕಿ ಸಲುಹುತ್ತಿದ್ದ ಮಾವುತನನ್ನು ಆನೆಯೊಂದು (Elephant) ಸೊಂಡಿಲಿನಿಂದ ತಿವಿದು ಕೊಂದಿರುವ ಮನಕಲಕುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ‌ ಅಲಖನೂರು ಗ್ರಾಮದಲ್ಲಿ ನಡೆದಿದೆ.

ಅಲಖನೂರ ಗ್ರಾಮದ ಕರಿಯಪ್ಪ ಬೇವನೂರ (30) ಮೃತ ದುರ್ದೈವಿ. ಅಲಖನೂರ ಶ್ರೀ ಕರಿಸಿದ್ದೇಶ್ವ ದೇವಸ್ಥಾನದ 21 ವರ್ಷದ ಧ್ರುವ ಹೆಸರಿನ ಆನೆ ತನ್ನ ಮಾವುತನನ್ನೆ ಸಾಯಿಸಿದೆ. ಇದನ್ನೂ ಓದಿ: ಖ್ಯಾತ ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ ಇನ್ನಿಲ್ಲ

 

ಭಾನುವಾರ ರಾತ್ರಿ ಆನೆಗೆ ಮದ ಬಂದಿತ್ತು. ಇಂದು ಬೆಳಗ್ಗೆ ಕರಿಯಪ್ಪ ಮೇವು ಹಾಕಲು ಹೋದಾಗ ಗಂಡಾನೆ ಸೊಂಡಿಲಿನಿಂದ ಹಾಗೂ ದಂತಗಳಿಂದ ತಿವಿದು ಹತ್ಯೆ ಮಾಡಿದೆ.

ಕಳೆದ 10 ದಿನದ ಹಿಂದೆಯಷ್ಟೇ ಕರಿಯಪ್ಪಗೆ ಗಂಡು ಮಗು ಜನಿಸಿತ್ತು. ಕರಿಯಪ್ಪ ಸಾವಿನ ವಿಷಯ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article