ದೇವಾಲಯದ ಚಪ್ಪರಕ್ಕೆ ನೇಣು ಬಿಗಿದುಕೊಂಡು ವಿಧಾನಸೌಧದ ಉದ್ಯೋಗಿ ಆತ್ಮಹತ್ಯೆ

Public TV
1 Min Read
rmg suicede

ರಾಮನಗರ: ದೇವಾಲಯಕ್ಕೆ ಬಂದ ಉದ್ಯೋಗಿಯೊಬ್ಬರು ದೇವಸ್ಥಾನದ ಚಪ್ಪರಕ್ಕೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಲನಕುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ವಿಧಾನಸೌಧದ ಸಹಕಾರಿ ಇಲಾಖೆಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಹೇಮಾವತಿ ಆತ್ಮಹತ್ಯೆಗೆ ಶರಣಾದ ಉದ್ಯೋಗಿ.

ಆತ್ಮಹತ್ಯೆಗೆ ಶರಣಾದ ಹೇಮಾವತಿ ಕಲ್ಲನಕಪ್ಪೆ ಗ್ರಾಮದ ಮಹಾದೇಶ್ವರ ದೇವಾಲಯದಲ್ಲಿ ಕಳೆದ ಎರಡು ವರ್ಷಗಳಿಂದ ಪೂಜೆ ಸಲ್ಲಿಸುತ್ತಿದ್ದರು. ಆದರೆ ಈ ಬಾರಿ ದೇವಾಲಯಕ್ಕೆ ಬಂದಾಗ ದೇವಾಲಯದ ಮುಂಭಾಗ ಹಾಕಿದ್ದ ಚಪ್ಪರಕ್ಕೆ ನೇಣು ಬಿಗಿದುಕೊಂಡಿದ್ದಾರೆ.

ಘಟನೆ ಸಂಬಂಧ ಹಾರೋಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *