ಪೊರಕೆ ಹಿಡಿದ ಮತ್ತೋರ್ವ ಕನ್ನಡದ ನಟ : ‘ಆಮ್ ಆದ್ಮಿ ಪಾರ್ಟಿ’ಗೆ ಸೇರ್ಪಡೆಯಾದ ಟೆನ್ನಿಸ್ ಕೃಷ್ಣ

Public TV
1 Min Read
FotoJet 15

ಕೆಲ ತಿಂಗಳ ಹಿಂದೆಯಷ್ಟೇ ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಆಮ್ ಆದ್ಮಿ ಪಾರ್ಟಿ ಸೇರಿಕೊಂಡಿದ್ದರು. ಇದೀಗ ಮತ್ತೋರ್ವ ನಟ ಪೊರೆಕೆ ಹಿಡಿದಿದ್ದು, ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ ಕೂಡ ಆಮ್‌ ಆದ್ಮಿ ಪಾರ್ಟಿಗೆ ಗುರುವಾರ ಸೇರ್ಪಡೆಯಾದರು. ಖಾಸಗೀ ಹೊಟೇಲ್ ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

FotoJet 1 7

ಎಎಪಿ ಸೇರ್ಪಡೆ ಬಳಿಕ ಮಾತನಾಡಿದ ಟೆನ್ನಿಸ್‌ ಕೃಷ್ಣ, ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್‌ ಆದ್ಮಿ ಪಾರ್ಟಿ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ,ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಸಾಧಿಸಿ ತೋರಿಸಿರುವ ಎಎಪಿಯು ಈಗ ಪಂಜಾಬ್‌ನಲ್ಲೂ ಮೋಡಿ ಮಾಡುತ್ತಿದೆ ಎಂದರು. ಇದನ್ನೂ ಓದಿ:ಸಿಂಪಲ್ ಸುನಿ `ಗತವೈಭವ’ದಲ್ಲಿ ದೇವಕನ್ಯೆಯಾಗಿ ಆಶಿಕಾ ರಂಗನಾಥ್‌

FotoJet 3 4

ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ದೇಶವನ್ನು ಕಾಪಾಡಲು ಎಎಪಿಯಿಂದ ಮಾತ್ರ ಸಾಧ್ಯ.ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿಯುಳ್ಳ ಆಮ್‌ ಆದ್ಮಿ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಎಎಪಿಯನ್ನು ಬಳಸಿಕೊಂಡು ದೇಶದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರವೇಶಿಸಬೇಕು ಎಂದು ಹೇಳಿದರು.

FotoJet 4 4

ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾತನಾಡಿ,ಕರ್ನಾಟಕದಲ್ಲಿ ಆಮ್‌ ಆದ್ಮಿ ಪಾರ್ಟಿಯು ಭದ್ರವಾಗಿ ಬೇರೂರುತ್ತಿದೆ. ಸಿನಿಮಾ ಸಾಧಕರು,ದಕ್ಷ ಅಧಿಕಾರಿಗಳು,ರೈತ ನಾಯಕರು,ಸಮಾಜಸೇವಕರು, ವಕೀಲರು, ಉಪನ್ಯಾಸಕರು ಮುಂತಾದ ವಿವಿಧ ಕ್ಷೇತ್ರದ ಗಣ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.

FotoJet 15

ದೇಶಕ್ಕೆ ಆಮ್‌ ಆದ್ಮಿ ಪಾರ್ಟಿಯೊಂದೇ ಆಶಾಕಿರಣ ಎಂಬುದು ಯುವಜನತೆಗೆ ಮನವರಿಕೆಯಾಗುತ್ತಿದೆ. ಜನಪ್ರಿಯ ನಟರಾದ ಟೆನಿಸ್ ಕೃಷ್ಣರವರ ಸೇರ್ಪಡೆಯಿಂದ ಪಕ್ಷಕ್ಕೆ ಇನ್ನಷ್ಟು ಬಲ ಬಂದಿದೆ. ಸ್ವಚ್ಛ ರಾಜಕೀಯ ಹಾಗೂ ಪಾರದರ್ಶಕ ಆಡಳಿತವೇ ನಮ್ಮೆಲ್ಲರ ಧ್ಯೇಯವಾಗಿದ್ದು, ಇದನ್ನು ಸಾಧಿಸಲು ಒಗ್ಗಟ್ಟಿನಿಂದ ಶ್ರಮಿಸಲಿದ್ದೇವೆ‌ ಎಂದು ಹೇಳಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *