Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹಿಂದೂಗಳಿಂದ ನೆಮ್ಮದಿ ಹಾಳಾಗಿದ್ದಕ್ಕೆ ಉಗ್ರ ಸಂಘಟನೆ ಸೇರಲು ಮುಂದಾಗಿದ್ದೆ: ಶಂಕಿತ ಉಗ್ರ

Public TV
Last updated: July 26, 2022 7:52 am
Public TV
Share
2 Min Read
akhtar hussain bengaluru
SHARE

– ಬೆಂಗಳೂರಿನ ನಕ್ಷೆಯನ್ನು ಕಾಶ್ಮೀರಕ್ಕೆ ಕಳುಹಿಸಿದ್ದ
– ತಮಿಳುನಾಡಿನ ವೆಲ್ಲೂರಿನಲ್ಲಿ ಮತ್ತೊಬ್ಬ ಸೆರೆ

ಬೆಂಗಳೂರು: ಹಿಂದೂಗಳು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಇದರಿಂದ ನಮಗೆ ನೆಮ್ಮದಿ ಹಾಳಾಗಿದೆ. ಹೀಗಾಗಿ ಉಗ್ರರ ಗುಂಪಿಗೆ ಸೇರಲು ಬಯಸಿದ್ದೆ ಎಂದು ತಿಲಕ್‍ನಗರದಲ್ಲಿ ಅರೆಸ್ಟ್ ಆಗಿರುವ ಆಲ್‍ಖೈದಾ ಶಂಕಿತ ಉಗ್ರ ಅಖ್ತರ್ ಹುಸೇನ್ ಆಘಾತಕಾರಿ ಅಂಶಗಳನ್ನು ಬಾಯಿಬಿಟ್ಟಿದ್ದಾನೆ.

Contents
– ಬೆಂಗಳೂರಿನ ನಕ್ಷೆಯನ್ನು ಕಾಶ್ಮೀರಕ್ಕೆ ಕಳುಹಿಸಿದ್ದ – ತಮಿಳುನಾಡಿನ ವೆಲ್ಲೂರಿನಲ್ಲಿ ಮತ್ತೊಬ್ಬ ಸೆರೆLive Tv

ಸಿಸಿಬಿ ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ ಹುಸೇನ್ ಮೊಬೈಲ್‍ನಲ್ಲಿ 20 ಜಿಬಿಯಷ್ಟು ಡೇಟಾ ಪತ್ತೆಯಾಗಿದ್ದು, ಆತ ಉಗ್ರ ಚಟುವಟಿಕೆಗಳ ಬಗ್ಗೆ ಚಾಟ್, ಪೋಸ್ಟ್‌ಗಳನ್ನು ಮಾಡಿದ್ದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

CCB

ಉಗ್ರರ ಸಂಪರ್ಕ ಹೇಗೆ?
ಮುಸ್ಲಿಂ ಸಮುದಾಯದ ಮೇಲೆ ಭಾರತದಲ್ಲಿ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಪೋಸ್ಟ್‌ ಮಾಡುತ್ತಿದ್ದ. ಅಷ್ಟೇ ಅಲ್ಲದೇ ಕಾಶ್ಮೀರ ಆಜಾದಿ ಹಾಗೂ ದೇಶ ವ್ಯಾಪ್ತಿ ಷರಿಯತ್ ಕಾನೂನು (ಮುಸ್ಲಿಂ ವೈಯಕ್ತಿಕ ಕಾನೂನು) ಜಾರಿಯಾಗಬೇಕು ಎಂದು ನಿರಂತರವಾಗಿ ಪೋಸ್ಟ್ ಹಾಕುತ್ತಿದ್ದ.

ಈ ಪೋಸ್ಟ್‌ಗಳಿಂದ ಆತನಿಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದ ಆಲ್‌ಖೈದಾ ಸಂಘಟನೆಯ ಪ್ರಮುಖರು ಸಂಪರ್ಕ ಸಾಧಿಸಿದ್ದಾರೆ. ನಂತರ ಆತನಿಗೆ ಜಿಹಾದಿ ಬೋಧಿಸಿದ ಆಲ್‌ಖೈದಾ ಸಂಘಟನೆಯ ನೇಮಕಾತಿ ಜಾಲದ ಸದಸ್ಯರು, ಭಾರತದಲ್ಲಿ ಮುಸ್ಲಿಂ ಸಮುದಾಯಕ್ಕೆ ಆತಂಕವಿದೆ ಎ೦ದು ತಲೆ ಕೆಡಿಸಿದ್ದಾರೆ. ಉಗ್ರ ಸಂಘಟನೆಯ ಸಂಪರ್ಕವಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕಾಶ್ಮೀರದ ಬಗ್ಗೆ ಮತ್ತಷ್ಟು ಪೋಸ್ಟ್‌ಗಳನ್ನು ಪ್ರಕಟಿಸುತ್ತಿದ್ದ.

3 ಮೊಬೈಲ್‍ಗಳನ್ನು ಈ ಕೃತ್ಯಕ್ಕೆ ಬಳಸಿದ್ದು, ಬೆಂಗಳೂರಿನ ಇಂಚಿಂಚೂ ಮಾಹಿತಿಯನ್ನು ಮೊಬೈಲ್‍ನಲ್ಲಿ ಇಟ್ಟಿದ್ದ. ಡೆಲಿವರಿ ಬಾಯ್ ಆಗಿದ್ದರಿಂದ ಬೆಂಗಳೂರಿನ ಬಹುತೇಕ ಜಾಗಗಳನ್ನು ನೋಡಿದ್ದ. ಅವುಗಳ ಮ್ಯಾಪ್ ಕೂಡ ಸಿದ್ಧ ಮಾಡಿಕೊಂಡು, ಎಲ್ಲೆಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಬಹುದು ಅಎಂಬ ಬ್ಲೂ ಪ್ರಿಂಟ್ ಒಂದನ್ನ ಕಾಶ್ಮೀರಕ್ಕೆ ಕಳಿಸಿಕೊಟ್ಟ ಬಗ್ಗೆ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ. ಈ ಆ ಮೊಬೈಲ್‍ಗಳನ್ನು ರಿಟ್ರೀವ್‍ಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‍ಎಸ್‍ಎಲ್‍) ಕಳುಹಿಸಲಾಗಿದೆ. ಇದನ್ನೂ ಓದಿ: ಮೋದಿ-ಯೋಗಿಗೆ ಕುಟುಂಬವಿಲ್ಲ, ಆದರೆ ನಮಗಿದೆ: ಉಮೇಶ್ ಕತ್ತಿ

ಆಲ್ ಖೈದಾ ಉಗ್ರ ಸಂಘಟನೆ ಸೇರಿದಂತೆ ಬೇರೆ ಬೇರೆ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈ ಮಧ್ಯೆ, ಅಖ್ತರ್ ಹುಸೇನ್ ಮಾಹಿತಿ ಮೇರೆಗೆ ತಮಿಳುನಾಡಿನ ವೆಲ್ಲೂರು ಬಳಿ ಮತ್ತೊಬ್ಬ ಶಂಕಿತ ಉಗ್ರ ಜುಬಾ ಅಬ್ದುಲ್ ಅಲಿ ಮಂಡಲ್ ಎಂಬಾತನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿ ಕರೆ ತಂದಿದ್ದಾರೆ.

bengaluru 2 2

ಯಾರು ಅಖ್ತರ್‌ ಹುಸೇನ್‌?
ಅಸ್ಸಾಂ ಮೂಲದ ಹುಸೇನ್ ಉದ್ಯೋಗಕ್ಕಾಗಿ 2015ರಲ್ಲಿ ಬೆಂಗಳೂರಿಗೆ ಬಂದಿದ್ದ. ಮೊದಲಿಗೆ ಕನಕಪುರ ರಸ್ತೆಯ ಮಯಾಸ್‍ನಲ್ಲಿ ಕೆಲಸಕ್ಕೆ ಸೇರಲು ಹೋದಾಗ ಕೇವಲ 17 ವರ್ಷವಾಗಿದ್ದ ಕಾರಣ ಕೆಲಸ ಸಿಕ್ಕಿರಲಿಲ್ಲ. ಬಳಿಕ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದ, ಅಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿ ಕೆಲಸ ಬಿಟ್ಟಿದ್ದ.

ಬಳಿಕ ಗಾರ್ಮೆಂಟ್ಸ್ ಒಂದರಲ್ಲಿ 3 ತಿಂಗಳು ಕೆಲಸ ಮಾಡಿದ್ದಾನೆ. ಅಲ್ಲಿ ಮಾರ್ಕ್ಸ್‌ ಕಾರ್ಡ್ ಕೇಳಿದ್ದಾರೆ ಎಂಬ ಕಾರಣಕ್ಕೆ ಪಿಯುಸಿ ಓದಲು ಮತ್ತೆ ಅಸ್ಸಾಂಗೆ ಹೋಗಿ 2017ರ ನವೆಂಬರ್‌ನಲ್ಲಿ ವಾಪಸ್ ಆಗಿದ್ದ. ರಾತ್ರಿ ಹೊತ್ತು ಮಾತ್ರ ಫುಡ್ ಡೆಲಿವರಿ ಕೆಲಸ ಮಾಡ್ತಿದ್ದ ಅಖ್ತರ್ ಉಳಿದ ಸಮಯದಲ್ಲಿ ವಿವಿಧ ಉಗ್ರ ಸಂಘಟನೆಗಳ ಮುಖ್ಯಸ್ಥರ ಭಾಷಣಗಳನ್ನು ಕೇಳಲು ಶುರುಮಾಡಿದ್ದ. ಆ ಭಾಷಣಗಳಿಂದ ಪ್ರೇರೇಪಿತನಾಗಿ, ಉಗ್ರ ಸಂಘಟನೆ ಸೇರೋಕೆ ತೀರ್ಮಾನ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Live Tv
[brid partner=56869869 player=32851 video=960834 autoplay=true]

TAGGED:Assambengaluruccbpoliceಅಖ್ತರ್‌ ಹುಸೇನ್‌ಆಲ್‌ ಖೈದಾಬೆಂಗಳೂರುಸಿಸಿಬಿ
Share This Article
Facebook Whatsapp Whatsapp Telegram

You Might Also Like

International Space Station 2
Latest

ಡಾಕಿಂಗ್‌ ನಂತರದ ಪ್ರಕ್ರಿಯೆ ಶುರು – ಸಂಜೆ 6 ಗಂಟೆ ವೇಳೆಗೆ ಬಾಹ್ಯಾಕಾಶ ನಿಲ್ದಾಣದೊಳಕ್ಕೆ ಅಧಿಕೃತ ಎಂಟ್ರಿ

Public TV
By Public TV
27 minutes ago
Chinnaswamy Stampede IPS Officer Dayanand
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಐಪಿಎಸ್ ಅಧಿಕಾರಿ ದಯಾನಂದ್ ವಿಚಾರಣೆಗೆ ಹಾಜರು

Public TV
By Public TV
30 minutes ago
black box 2
Latest

Ahmedabad Plane Crash | ಬ್ಲ್ಯಾಕ್‌ ಬಾಕ್ಸ್ ಡೌನ್‌ಲೋಡ್ ಪ್ರಕ್ರಿಯೆ ಪೂರ್ಣ, ವಿಶ್ಲೇಷಣೆ ಶುರು – ವಿಮಾನಯಾನ ಸಚಿವಾಲಯ

Public TV
By Public TV
33 minutes ago
mangaluru man killed his mother
Crime

ಮಂಗಳೂರು| ಹೆತ್ತ ತಾಯಿಯನ್ನೇ ಕೊಲೆಗೈದು ಸುಟ್ಟು ಹಾಕಿದ ಪಾಪಿ ಮಗ

Public TV
By Public TV
47 minutes ago
nvidia
Latest

ಮೈಕ್ರೋಸಾಫ್ಟ್‌ ಹಿಂದಿಕ್ಕಿ ವಿಶ್ವದ ಮೌಲ್ಯಯುತ ಕಂಪನಿಯಾದ ಎನ್‌ವಿಡಿಯಾ

Public TV
By Public TV
60 minutes ago
supreme Court 1
Court

ಬೆಂಗಳೂರು ಜೀವನ ತುಂಬಾ ಆಕರ್ಷಕ: ವರ್ಗಾವಣೆ ವಿರೋಧಿಸಿ ವೈದ್ಯರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?