ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಲೋಕಸಭಾ ಚುನಾವಣೆಯ (Lok Sabha Election) ಸಮಯದಲ್ಲಿ ಸಂಭವಿಸಬಹುದಾಗಿದ್ದ ಭಾರೀ ವಿಧ್ವಂಸಕ ಕೃತ್ಯವನ್ನು ಭದ್ರತಾ ಪಡೆ ವಿಫಲಗೊಳಿಸಿದೆ.
ಭಾನುವಾರ ಭಾರತೀಯ ಸೇನೆಯು (Indian Army) ಮತ್ತು ಜಮ್ಮು ಮತ್ತು ಕಾಶ್ಮೀರ ಪೋಲಿಸರು (Jammu Kashmir Police) ಜಂಟಿ ಕಾರ್ಯಾಚರಣೆ ನಡೆಸಿ ಪೂಂಚ್ ಜಿಲ್ಲೆಯ ಹರಿ ಬುದ್ಧ ನಗರದಲ್ಲಿ ಉಗ್ರರ ಕೃತ್ಯಕ್ಕೆ ಸಹಕಾರ ನೀಡುತ್ತಿದ್ದ ಹೆಡ್ ಮಾಸ್ತರ್ನನ್ನು (Head Master) ಬಂಧಿಸಿದೆ.
ಖಮರುದ್ದೀನ್ ಬಂಧಿತ ಹೆಡ್ಮಾಸ್ತರ್. ಈತನ ಮನೆಯಲ್ಲಿ ಪಾಕಿಸ್ತಾನ ನಿರ್ಮಿತ ಪಿಸ್ತೂಲ್ ಮತ್ತು ಚೀನಾದ ಗ್ರೆನೇಡ್ಗಳು ಸಿಕ್ಕಿದ್ದು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಅನಾರೋಗ್ಯ – ಇಂಡಿಯಾ ಒಕ್ಕೂಟದ ರ್ಯಾಲಿಗೆ ಗೈರು
ಪೂಂಚ್ ಪ್ರದೇಶದಲ್ಲಿ ಲೋಕಸಭಾ ಚುನಾವಣೆ ವೇಳೆ ಹಿಂಸಾಚಾರ ನಡೆಸಲು ಗ್ರೆನೇಡ್ ಸಂಗ್ರಹಿಸಡಲಾಗಿತ್ತು ಎಂದು ವರದಿಯಾಗಿದೆ. ಇದನ್ನೂ ಓದಿ: ವಯನಾಡ್ನಲ್ಲಿ ರಾಹುಲ್ಗೆ ಬಿಗ್ ಶಾಕ್ – ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ
ಜಮ್ಮು ಮತ್ತು ಕಾಶ್ಮೀರದಲ್ಲಿ 5 ಲೋಕಸಭಾ ಕ್ಷೇತ್ರಗಳಿಗೆ 5 ಹಂತದಲ್ಲಿ ಚುನಾವಣೆ ನಡೆಯಲಿದೆ. ಉದಂಪುರ್ನಲ್ಲಿ ಏ.19 ರಂದು ನಡೆದಿದ್ದರೆ ಏ.26 ರಂದು ಜಮ್ಮು, ಮೇ 7 ರಂದು ಅನಂತನಾಗ್-ರಾಜೌರಿ, ಮೇ 13 ರಂದು ಶ್ರೀನಗರ, ಮೇ 20 ರಂದು ಬಾರಾಮುಲ್ಲಾದಲ್ಲಿ ಚುನಾವಣೆ ನಡೆಯಲಿದೆ.