Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತಕ್ಕೆ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ 50ಕ್ಕೂ ಹೆಚ್ಚು ಉಗ್ರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತಕ್ಕೆ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ 50ಕ್ಕೂ ಹೆಚ್ಚು ಉಗ್ರರು

Latest

ಭಾರತಕ್ಕೆ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ 50ಕ್ಕೂ ಹೆಚ್ಚು ಉಗ್ರರು

Public TV
Last updated: September 5, 2019 3:34 pm
Public TV
Share
2 Min Read
terrorist
SHARE

– ಇಬ್ಬರು ಉಗ್ರರಿಂದ ಭಯಾನಕ ಮಾಹಿತಿ ಬಹಿರಂಗ

ನವದೆಹಲಿ: ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕಿಸ್ತಾನ ಭಾರೀ ಸಂಚು ರೂಪಿಸಿದ್ದು, ಪಾಕಿಸ್ತಾನಿ ಸೈನಿಕರ ಸಹಾಯದಿಂದ 50ಕ್ಕೂ ಹೆಚ್ಚು ಲಷ್ಕರ್-ಇ-ತೋಯ್ಬಾ(ಎಲ್‍ಇಟಿ) ಉಗ್ರರು ದೇಶ ಪ್ರವೇಶಿಸಲು ಕಾಯುತ್ತಿದ್ದಾರೆ ಎಂಬ ಭಯಾನಕ ಮಾಹಿತಿ ಪ್ರಕಟವಾಗಿದೆ.

ಎಲ್‍ಇಟಿಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಪಾಕ್ ನಾಗರಿಕರು ಕಾಶ್ಮೀರದ ಮೂಲಕ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಇವರ ವಿಚಾರಣೆ ವೇಳೆ 50 ಉಗ್ರರು ಭಾರತಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಅಲ್ಲದೆ, ಪಾಕಿಸ್ತಾನಿ ಸೈನಿಕರು ಹಾಗೂ ಆಂತರಿಕ ಗುಪ್ತಚರ ದಳದ ಸಹಾಯದಿಂದ ಭಾರತ ಪ್ರವೇಶಿಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿಯನ್ನು ಈ ಇಬ್ಬರು ಹೊರ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

Terrorism

ಪಾಕಿಸ್ತಾನದ ಪ್ರಜೆಗಳಾದ ಖಲೀಲ್ ಅಹ್ಮದ್ ಮತ್ತು ಮೊಜಾಮ್ ಖೋಕರ್ ಇಬ್ಬರೂ ವಿಚಾರಣೆ ವೇಳೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ಸೈನಿಕರು ಕಚಾರ್ಬನ್ ಪೋಸ್ಟ್ ಮೂಲಕ ಭಯೋತ್ಪಾದಕರನ್ನು ಭಾರತಕ್ಕೆ ನುಸುಳಲು ಸಹಾಯ ಮಾಡುತ್ತಿದ್ದಾರೆ. ಇದಕ್ಕಾಗಿ ಪಾಕಿಸ್ತಾನ ಸೇನೆ ಮತ್ತು ಐಎಸ್‍ಐ ಗಡಿ ನಿಯಂತ್ರಣ ರೇಖೆಯಾದ್ಯಂತ(ಎಲ್‍ಓಸಿ) ಒಂದು ಡಜನ್‍ಗೂ ಹೆಚ್ಚು ಲಾಂಚಿಂಗ್ ಪ್ಯಾಡ್(ಉಗ್ರರಿಗೆ ಎಲ್ಲ ರೀತಿಯ ತರಬೇತಿ ನೀಡಿ ಅವರನ್ನು ಸಂಪೂರ್ಣವಾಗಿ ಸಿದ್ಧಗೊಳಿಸಿ ಶಸ್ತ್ರಾಸ್ತ್ರಗಳನ್ನು ನೀಡಿ ದೇಶದ ಒಳಗಡೆ ಕಳುಹಿಸಲು ಸ್ಥಾಪಿಸಲಾದ ಕೇಂದ್ರ) ಗಳನ್ನು ಸಕ್ರಿಯಗೊಳಿಸಿವೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಓಕೆ)ದ ಮೂರು ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಯೋತ್ಪಾದಕರಿದ್ದು, ಪಾಕ್ ಸೇನೆ ಪಿಓಕೆಯ ಮೂರು ಲಾಂಚ್ ಪ್ಯಾಡ್‍ಗಳಲ್ಲಿ ಐಎಸ್‍ಐ ಭಯೋತ್ಪಾದಕರಿಗೆ ಆಶ್ರಯ ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪಿಓಕೆಯ ಲಿಪಾ ಕಣಿವೆಯ ಲಾಂಚ್ ಪ್ಯಾಡ್‍ನಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರು ತಂಗಿದ್ದಾರೆ ಎಂದು ಶಂಕಿಸಲಾಗಿದೆ.

terrorists

ಲಾಂಚ್ ಪ್ಯಾಡ್‍ಗಳಲ್ಲಿನ ಭಯೋತ್ಪಾದಕರು ಜೈಷ್-ಎ-ಮೊಹಮ್ಮದ್ ಹಾಗೂ ಅಲ್-ಬದ್ರ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಲಿಪಾ ಲಾಂಚ್ ಪ್ಯಾಡ್ ಜಮ್ಮು ಕಾಶ್ಮೀರದ ತಂಗ್‍ಧಾರ್ ಹಾಗೂ ಉರಿ ವಲಯದಲ್ಲಿದೆ. ಪಿಓಕೆಯ ಲ್ಯಾಂಜೋಟೆ ಮತ್ತು ಕಲು ಲಾಂಚ್‍ಪ್ಯಾಡ್‍ಗಳಲ್ಲಿ 60ರಿಂದ 70 ಭಯೋತ್ಪಾದಕರಿದ್ದಾರೆ. ಈ ಕಲು ಲಾಂಚ್ ಪ್ಯಾಡ್ ಮೂಲಕ ಸಹ ಜಮ್ಮು ಕಾಶ್ಮೀರವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಬ್ಬರು ಪಾಕಿಸ್ತಾನಿ ಪ್ರಜೆಗಳು ಕಾಶ್ಮೀರವನ್ನು ಪ್ರವೇಶಿಸಲು ಯತ್ನಿಸುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ ಎಂದು ಉನ್ನತ ಭದ್ರತಾ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕಣಿವೆಯಲ್ಲಿ ಶಾಂತಿ ಭಂಗಗೊಳಿಸಲು ಭಯೋತ್ಪಾದಕರನ್ನು ಒಳನುಸುಳಿಸುವಲ್ಲಿ ವಿಫಲವಾದ್ದರಿಂದ ಪಾಕಿಸ್ತಾನ ಹತಾಶವಾಗಿದೆ ಎಂದು ಸೇನೆಯ 15 ಕಾಪ್ರ್ಸ್‍ನ ಜನರಲ್ ಆಫೀಸರ್ ಕಮಾಂಡಿಂಗ್(ಜಿಓಸಿ) ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲಾನ್ ಅವರು ಕಾಶ್ಮೀರದ ಎಡಿಜಿಪಿ ಮುನಿರ್ ಖಾನ್ ಅವರಿಂದೊಗೆ ನಡೆದ ಜಂಟಿ ಸುದ್ದಿಗೋಷ್ಠಿ ವೇಳೆ ತಿಳಿಸಿದ್ದಾರೆ.

Pak Army 2

ಎಲ್‍ಇಟಿಗೆ ಸಂಬಂಧಿಸಿದ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಆಗಸ್ಟ್ 21ರಂದು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಬಂಧಿತ ಪಾಕಿಸ್ತಾನಿಗಳು ಒಳನುಸುಳುವಿಕೆಯನ್ನು ಒಪ್ಪಿಕೊಂಡಿರುವ ವಿಡಿಯೋವನ್ನು ಸಹ ಸುದ್ದಿಗೋಷ್ಠಿಯಲ್ಲಿ ತೋರಿಸಿದ್ದಾರೆ.

ಈ ಎರಡು ವಿಡಿಯೋಗಳು ಪಾಕಿಸ್ತಾನಿ ಸೇನೆ ನಾಗರಿಕರನ್ನು ಕಾಶ್ಮೀರಕ್ಕೆ ಹೇಗೆ ತಳ್ಳುತ್ತಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ವಿಶೇಷವಾಗಿ ಆಗಸ್ಟ್ 5ರಿಂದ ಕಾಶ್ಮೀರದಲ್ಲಿ ನೆಲೆಸಿರುವ ಶಾಂತಿಯನ್ನು ಭಂಗಗೊಳಿಸಲು ಕಣಿವೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ ಎಂದು ಧಿಲ್ಲಾನ್ ತಿಳಿಸಿದ್ದಾರೆ.

terror

ಒಳನುಸುಳುವಿಕೆ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಭಾರತೀಯ ಸೇನೆ ಈ ವರೆಗೆ ಇಂತಹ ಅನೇಕ ಪ್ರಯತ್ನಗಳನ್ನು ವಿಫಲಗೊಳಿಸಿದೆ ಎಂದು ಮುನೀರ್ ಖಾನ್ ತಿಳಿಸಿದ್ದಾರೆ.

TAGGED:370ನೇ ವಿಧಿArticle 370indiaindian armyInfiltrationlocpakistanPublic TVterrorismಎಲ್‍ಓಸಿಒಳನುಸುಳುವಿಕೆಪಬ್ಲಿಕ್ ಟಿವಿಪಾಕಿಸ್ತಾನಭಾಯೋತ್ಪಾದನೆಭಾರತಭಾರತೀಯ ಸೇನೆ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
23 minutes ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
26 minutes ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
36 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
1 hour ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
1 hour ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?