– ಅಮಿಶ್ ಶಾ ಅವರ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ
ಕೋಲಾರ: ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಯನ್ನು (Pahalgam Terror Attack) ಖಂಡಿಸುತ್ತೇನೆ. ನರಮೇಧ ನಡೆಸಿದ ಇಂತಹ ಉಗ್ರರನ್ನು ಬಗ್ಗು ಬಡಿಯಬೇಕು ಎಂದು ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ (SN Narayanaswamy) ಹೇಳಿದ್ದಾರೆ.
ಬಂಗಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಲ್ಲಿ ದೇಶದ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ, ಬೇಹುಗಾರಿಕೆ ಸಂಪೂರ್ಣ ವಿಫಲವಾಗಿದೆ. ಗೃಹ ಸಚಿವ ಅಮಿಶ್ ಶಾ ಅವರ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಅವರು ಹಿಂದೂಗಳನ್ನು ಟಾರ್ಗೆಟ್ ಮಾಡಿದ್ದಾರೆ ಅನ್ನೋದು ಇಲ್ಲ. ಇದರಲ್ಲಿ ಧರ್ಮ ಅನ್ನೋದಕ್ಕಿಂತ ಎಲ್ಲರದ್ದು ಜೀವ ಅಲ್ವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಐಶ್ವರ್ಯ ಗೌಡ ಮನೆ ಮೇಲೆ ಇಡಿ ದಾಳಿ – 2.25 ಕೋಟಿ ನಗದು ಪತ್ತೆ
ಗೃಹ ಇಲಾಖೆ ವಿಫಲವಾಗಿದೆ. ಹಾಗಾಗಿ ಇಂದಿರಾಗಾಂಧಿ, ನೆಹರು ಕಾಲದಲ್ಲಿ ದೇಶವನ್ನ ರಕ್ಷಣೆ ಮಾಡಿದಂತೆ ಸದ್ಯ ಈಗಲೂ ಕೇಂದ್ರ ಸರ್ಕಾರ ಎಚ್ವೆತ್ತುಕೊಂಡು ಇಂತಹದಕ್ಕೆ ಕಡಿವಾಣ ಹಾಕಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಾಕಿಸ್ತಾನದ ಲಾಹೋರ್ ಏರ್ಪೋರ್ಟ್ನಲ್ಲಿ ಭಾರೀ ಅಗ್ನಿ ದುರಂತ – ರನ್ವೇ ಬಂದ್, ವಿಮಾನಗಳ ಹಾರಾಟ ಸ್ಥಗಿತ