Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ನನ್ನ ಕೊನೆಯ ಉಸಿರಿರುವತನಕ ಹೋರಾಡ್ತೇನೆ’ -ವಿದ್ಯಾರ್ಥಿನಿ ಸಜೀವ ದಹನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ‘ನನ್ನ ಕೊನೆಯ ಉಸಿರಿರುವತನಕ ಹೋರಾಡ್ತೇನೆ’ -ವಿದ್ಯಾರ್ಥಿನಿ ಸಜೀವ ದಹನ

Crime

‘ನನ್ನ ಕೊನೆಯ ಉಸಿರಿರುವತನಕ ಹೋರಾಡ್ತೇನೆ’ -ವಿದ್ಯಾರ್ಥಿನಿ ಸಜೀವ ದಹನ

Public TV
Last updated: April 19, 2019 5:58 pm
Public TV
Share
3 Min Read
GIRL
SHARE

-ಲೈಂಗಿಕ ದೌರ್ಜನ್ಯದ ದೂರು ಕೊಟ್ಟಿದ್ದೆ ತಪ್ಪಾಯ್ತು

ಡಾಕಾ: ಲೈಂಗಿಕ ಕಿರುಕುಳದ ವಿರುದ್ಧ ಪೊಲೀಸರಿಗೆ ದೂರ ಸಲ್ಲಿಸಿದ್ದ 19 ವರ್ಷದ ವಿದ್ಯಾರ್ಥಿನಿಯನ್ನು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಸಜೀವವಾಗಿ ಸುಟ್ಟು ಕೊಲೆ ಮಾಡಿರುವ ಕ್ರೂರ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.

ನುಸ್ರತ್ ಜಹಾನ್ ರಫಿ(19) ಮೃತ ವಿದ್ಯಾರ್ಥಿನಿ. ಈಕೆ ಮದರಸಾ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು. ಆದರೆ ಆ ದೂರನ್ನು ವಾಪಸ್ ಪಡೆಯುವಂತೆ ಬೆದರಿಕೆ ಹಾಕಲಾಗಿತ್ತು. ಇದಕ್ಕೆ ನಿರಾಕರಿಸಿದ ವಿದ್ಯಾರ್ಥಿನಿಯನ್ನು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ.

RAFI

ಏನಿದು ಪ್ರಕರಣ?
ಮೃತ ನುಸ್ರತ್ ಳನ್ನು ಮಾರ್ಚ್ 27ರಂದು ಹೆಡ್‍ಮಾಸ್ಟರ್ ತನ್ನ ಕಚೇರಿಗೆ ಕರೆಸಿಕೊಂಡಿದ್ದಾನೆ. ಅಲ್ಲಿ ವಿದ್ಯಾರ್ಥಿನಿಯನ್ನು ಅಸಭ್ಯವಾಗಿ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದನ್ನು ಅರಿತ ನುಸ್ರತ್ ತಕ್ಷಣ ಆತನಿಂದ ತಪ್ಪಿಸಿಕೊಂಡು ಕಚೇರಿಯಿಂದ ಓಡಿಹೋಗಿದ್ದಾಳೆ. ನಂತರ ನುಸ್ರತ್ ನಡೆದ ಘಟನೆಯ ಬಗ್ಗೆ ಪೋಷಕರಿಗೆ ವಿವರಿಸಿದ್ದಾಳೆ. ನಂತರ ಪೋಷಕರನ್ನು ಕರೆದುಕೊಂಡು ಪೊಲೀಸ್ ಠಾಣೆಗೆ ಹೋಗಿ ಹೆಡ್‍ಮಾಸ್ಟರ್ ವಿರುದ್ಧ ದೂರು ನೀಡಿದ್ದಾಳೆ. ಆದರೆ ಪೊಲೀಸರು ವಿದ್ಯಾರ್ಥಿನಿಯ ದೂರನ್ನು ದಾಖಲಿಸಿಕೊಳ್ಳದೆ ಆಕೆಯ ಜೊತೆಯೇ ಅಸಭ್ಯವಾಗಿ ವರ್ತಿಸಿದ್ದಾರೆ.

ಈ ವೇಳೆ ನುಸ್ರತ್ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾಳೆ. ಪೊಲೀಸ್ ಅಧಿಕಾರಿಯೊಬ್ಬ ಇದೇನು ದೊಡ್ಡ ವಿಷಯವಲ್ಲ ಎಂದು ನಿರ್ಲಕ್ಷ್ಮದಿಂದ ಹೇಳಿದ್ದಾರೆ. ಅಷ್ಟೇ ಅಲ್ಲದೇ ನುಸ್ರತ್ ತನ್ನ ಕೈಗಳಿಂದ ಮುಖವನ್ನು ಮುಚ್ಚಿಕೊಂಡಿದ್ದರೆ, ಮುಖದಿಂದ ಕೈಗಳನ್ನು ಸರಿಸು ಎಂದು ದೌರ್ಜನ್ಯ ನಡೆಸಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

GIRL

ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಹೆಡ್‍ಮಾಸ್ಟರ್ ನ ವಿರುದ್ಧ ದೂರು ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದರು. ಆದರೆ ಕೆಲವು ವಿದ್ಯಾರ್ಥಿಗಳು ಮತ್ತು ರಾಜಕಾರಣಿಗಳು ಪೊಲೀಸ್ ಠಾಣೆಯ ಮುಂದೆ ಬಂದು ಹೆಡ್‍ಮಾಸ್ಟರ್ ಅನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆಯನ್ನು ನಡೆಸಿದ್ದರು.

ಶಾಲೆಗೆ ಮರಳಿದ ನುಸ್ರತ್:
ಇತ್ತ ನುಸ್ರತ್ ಈ ಘಟನೆ ನಡೆದು 11 ದಿನಗಳ ನಂತರ ಅಂದರೆ ಏಪ್ರಿಲ್ 6 ರಂದು ಪರೀಕ್ಷೆಗೆಂದು ಶಾಲೆಗೆ ಹೋಗಿದ್ದಾಳೆ. ಆಗ ಕ್ಲಾಸ್‍ಮೇಟ್‍ಗೆ ಶಾಲೆಯ ಛಾವಣಿಯ ಮೇಲೆ ಹೊಡೆಯುತ್ತಿದ್ದಾರೆ ಎಂದು ಯಾರೋ ಹೇಳಿದ್ದಾರೆ. ತಕ್ಷಣ ನುಸ್ರತ್ ಮೇಲೆ ಹೋಗಿದ್ದಾಳೆ. ಅಲ್ಲಿ ಐವರು ಬುರ್ಖಾ ಧರಿಸಿ ಆಕೆಯನ್ನು ಸುತ್ತುವರಿದ್ದು, ಹೆಡ್‍ಮಾಸ್ಟರ್ ವಿರುದ್ಧ ನೀಡಿರುವ ದೂರನ್ನು ವಾಪಾಸ್ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಇದಕ್ಕೆ ನುಸ್ರತ್ ನಿರಾಕರಿಸಿದ್ದಾಳೆ, ಆಗ ನುಸ್ರತ್ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

RAFI 1

ಇದೇ ವೇಳೆ ಆಕೆ ತನ್ನ ಸಹೋದರನ ಮೊಬೈಲ್‍ನಲ್ಲಿ ತನ್ನ ಮೇಲೆ ದಾಳಿ ನಡೆಸಿದ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾಳೆ. ಜೊತೆಗೆ ದಾಳಿಗೂ ಮುನ್ನ ಕೆಲವರನ್ನು ಗುರುತಿಸಿದ್ದಾಳೆ. ವಿಡಿಯೋದಲ್ಲಿ ‘ಶಿಕ್ಷಕ ನನ್ನನ್ನು ಮುಟ್ಟಿದ. ನನ್ನ ಕೊನೆಯ ಉಸಿರು ಇರುವತನಕ ಈ ದೌರ್ಜನ್ಯದ ವಿರುದ್ಧ ಹೋರಾಡುತ್ತೇನೆ’ ಎಂದು ನುಸ್ರತ್ ಹೇಳಿದ್ದಾಳೆ.

ಈ ಘಟನೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಮೂವರು ನುಸ್ರತ್ ಕ್ಲಾಸ್‍ಮೇಟ್ ಸೇರಿದಂತೆ ಐವರು ಆಕೆಗೆ ಬೆಂಕಿ ಹಚ್ಚುವ ಮೊದಲು ಸ್ಕಾರ್ಫ್ ನಿಂದ ಕೈ ಮತ್ತು ಕಾಲು ಕಟ್ಟಿದ್ದರು. ಬೆಂಕಿ ಹಚ್ಚಿದ ನಂತರ ಆ ಸ್ಕಾರ್ಫ್ ಸುಟ್ಟು ಹೋಗಿದೆ. ಇದರಿಂದ ಅವಳು ಛಾವಣಿಯಿಂದ ತಪ್ಪಿಸಿಕೊಂಡು ಕೆಳಗೆ ಬಂದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲಿ ನುಸ್ರತ್ ದೇಹ 80% ಸುಟ್ಟು ಹೋಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಏಪ್ರಿಲ್ 10 ರಂದು ನುಸ್ರತ್ ಮೃತಪಟ್ಟಿದ್ದಾಳೆ. ಸದ್ಯಕ್ಕೆ ತನಿಖೆಯನ್ನು ಮುಂದುವರಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ಮೊಹಮ್ಮದ್ ಇಕ್ಬಾಲ್ ಹೇಳಿದ್ದಾರೆ.

TAGGED:DakadeathfireheadmasterpolicePublic TVsexual assaultstudentಡಾಕಾಪಬ್ಲಿಕ್ ಟಿವಿಪೊಲೀಸ್ಬೆಂಕಿಲೈಂಗಿಕ ದೌರ್ಜನ್ಯವಿದ್ಯಾರ್ಥಿನಿಸಾವುಹೆಡ್‍ಮಾಸ್ಟರ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
30 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
34 minutes ago
g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
1 hour ago
kea
Bengaluru City

CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

Public TV
By Public TV
1 hour ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?