ಬೆಂಗಳೂರು: ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು ಬರುತ್ತಿದೆ. ಮಂಗಳವಾರದಿಂದ ಹುಬ್ಬಳ್ಳಿ-ಬೆಂಗಳೂರು (Hubballi- Bengaluru Vande Bharat Train) ನಡುವೆ ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ.
ಜೂನ್ 26ರ ಮಂಗಳವಾರ ಬೆಳಗ್ಗೆ 9 ಗಂಟೆಗೆ ವರ್ಚೂವಲ್ ಆಗಿ ಪ್ರಧಾನಿ ಮೋದಿ (Narendra Modi) ವಂದೇ ಭಾರತ್ ರೈಲಿಗೆ ಹಸಿರುನಿಶಾನೆ ತೋರಿಸಲಿದ್ದಾರೆ. ಆದರೆ ಧಾರವಾಡದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ಹೋಗಿಲ್ಲ. ಈ ಬಗ್ಗೆ ಸಚಿವ ಸಂತೋಷ್ ಲಾಡ್ (Santhosh Lad) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Advertisement 2
- Advertisement 3
ಪ್ರಧಾನಿ ಮೋದಿ ರಾಷ್ಟ್ರಪತಿಗಳನ್ನೇ ಸೇರಿಸಿಕೊಳ್ಳುವುದಿಲ್ಲ..ಇನ್ನು ನಮ್ಮದೇನು ಮಹಾ? ಇದು ಸರ್ವಾಧಿಕಾರಿ ಧೋರಣೆ. ದೇವರು ಅವರಿಗೆ ಒಳ್ಳೆಯದು ಮಾಡ್ಲಿ ಎಂದು ಲೇವಡಿ ಮಾಡಿದ್ರು. ಈ ಮಧ್ಯೆ ಈ ವಂದೆ ಭಾರತ್ ರೈಲನ್ನು ಬೆಳಗಾವಿವರೆಗೂ ಓಡಿಸಬೇಕು ಎಂದು ಕರವೇ ಆಗ್ರಹಿಸಿದೆ. ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಡಿಸಿಗೆ ಮನವಿ ಪತ್ರ ಸಲ್ಲಿಸಿದೆ.
- Advertisement 4
ಅಂದ ಹಾಗೇ, ನಾಳೆ ಒಂದೇ ದಿನ ಕರ್ನಾಟಕದ್ದು ಸೇರಿ ಐದು ಹೊಸ ವಂದೇ ಭಾರತ್ ರೈಲುಗಳು ಹಳಿಯೇರಲಿದೆ. ಇದರೊಂದಿಗೆ ವಂದೇ ಭಾರತ್ ರೈಲುಗಳ ಸಂಖ್ಯೆ 24ಕ್ಕೇರಲಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ತೀವ್ರಗೊಂಡ ಒಳಜಗಳ- ವೇದಿಕೆಯಲ್ಲಿಯೇ ಯತ್ನಾಳ್, ನಿರಾಣಿ ಪರಸ್ಪರ ಟಾಂಗ್